ಪೂರ್ತಿಯಾಗದ ಸುಬ್ರಹ್ಮಣ್ಯಮಂಜೇಶ್ವರ ಅಂತಾರಾಜ್ಯ ಹೆದ್ದಾರಿ ವಿಸ್ತರಣೆ 


Team Udayavani, Nov 20, 2017, 4:40 PM IST

20-Nov-15.jpg

ವಿಟ್ಲ : ಸುಬ್ರಹ್ಮಣ್ಯ – ಮಂಜೇಶ್ವರ ಅಂತಾರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಇನ್ನೂ ಪೂರ್ತಿಯಾಗಿಲ್ಲ. ಐದು ವರ್ಷಗಳು ಸಂದರೂ ಕಾಮಗಾರಿ ಅರ್ಧಂಬರ್ಧ ಆಗಿದೆ. ರಸ್ತೆ ವಿಸ್ತರಣೆಯಾಗಿದ್ದರೂ ಕೆಲವೆಡೆ ಸೇತುವೆ ವಿಸ್ತರಣೆ, ತಡೆಗೋಡೆಯಾಗಿಲ್ಲ. ಭೂಸ್ವಾಧೀನಗೊಳಿಸಿದರೂ ಫಲಾನುಭವಿಗಳಿಗೆ ಪರಿಹಾರ ನೀಡಿಲ್ಲ. ಅಪಘಾತ ಸಂಭವಿಸಬಹುದಾದ ಜಾಗದಲ್ಲಿ ಅಪಾಯಕಾರಿ ಸನ್ನಿವೇಶ ಬದಲಾಗಿಲ್ಲ. ಇದು ಪುತ್ತೂರು, ಬುಳೇರಿಕಟ್ಟೆ, ಪುಣಚ, ಕೇಪು, ಅಳಿಕೆ ಗ್ರಾಮಸ್ಥರ ದೂರು.

ಪುಣಚದ ಮೂಲಕ ರಸ್ತೆ
ಸುಬ್ರಹ್ಮಣ್ಯ – ಮಂಜೇಶ್ವರ ಅಂತಾ ರಾಜ್ಯ ಹೆದ್ದಾರಿಯು ಪುತ್ತೂರು, ಬುಳೇರಿಕಟ್ಟೆ, ಪುಣಚ, ಕೇಪು, ಅಳಿಕೆ, ಕನ್ಯಾನ, ಕರೋಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಸಾಗಿ ಕೇರಳದ ಮಂಜೇಶ್ವರ ತಾಲೂಕಿಗೆ ಸೇರುತ್ತದೆ. ಈ ಹೆದ್ದಾರಿಯು ಹಳ್ಳಿ ಭಾಗಗಳಲ್ಲಿ ಸಾಗುತ್ತದೆ. ರಸ್ತೆ ಅತ್ಯಂತ ಉಪಯುಕ್ತವಾಗಿದ್ದು, ನಿತ್ಯ ಸಾವಿರಾರು ವಾಹನಗಳು ಹಾಗೂ ಸಾವಿರಾರು ಮಂದಿ ಸಂಚಾರಕ್ಕೆ ಬಳಸುತ್ತಾರೆ.

ಅಪೂರ್ಣ ಕಾಮಗಾರಿ
ಇಲ್ಲಿ ಕೆಲವು ಕಡೆಗಳಲ್ಲಿ ಕಾಮಗಾರಿ ಪೂರ್ತಿಯಾಗಿಲ್ಲ. ಪೂರ್ತಿಯಾದ ಕೆಲ ಕಡೆಗಳಲ್ಲಿ ಡಾಮರು ಕಿತ್ತುಹೋಗಿದೆ. ಹಲವು ಭಾಗದಲ್ಲಿ ರಸ್ತೆಯಲ್ಲಿ ನೀರು ಹರಿಯುತ್ತಿದ್ದರೂ ಚರಂಡಿ ದುರಸ್ತಿಯಾಗಿಲ್ಲ. ದೇವಸ್ಯ, ಮಚ್ಚಿಮಲೆ ಸೇತುವೆಗಳಲ್ಲಿ ಬಿರುಮಲೆ ಗುಡ್ಡದ ಹಾಗೂ ಪರ್ಲಡ್ಕ ಭಾಗದ ನೀರಿನ ಹರಿವು ಹೋಗುತ್ತಿದ್ದರೂ ಅದನ್ನು ಎತ್ತರಿಸುವ ಕಾರ್ಯವಾಗಿಲ್ಲ. ನಿತ್ಯ ಈ ಸೇತುವೆಯಲ್ಲಿ ಸಣ್ಣಪುಣ್ಣ ಅಪಘಾತಗಳು ನಡೆಯುತ್ತಲೇ ಇವೆ. ಇದುವರೆಗೆ ಅಪಘಾತದಿಂದ ಮೂರು ನಾಲ್ಕು ಜೀವಗಳು ಬಲಿಯಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಆದ್ಯತೆ ನೀಡದಿರುವುದು ನಿತ್ಯ ಸಂಚಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಯ ಸೇತುವೆ ವಿಸ್ತರಣೆಯಾಗಿಲ್ಲ. ವೆಂಕಟನಗರ ಕಾಲೇಜಿನಲ್ಲಿ ತಿರುವು, ಹಲವು ಕಡೆ ತಿರುವುಗಳ ಕಾಮಗಾರಿ ಅವೈಜ್ಞಾನಿಕವಾಗಿದೆ.

ಸಣ್ಣ ತೊರೆಗೆ ಬೃಹತ್‌ ಯೋಜನೆ
ಅಟ್ಲಾರು ಎಂಬಲ್ಲಿ ಸಣ್ಣ ತೊರೆಯಿದ್ದು, ಇದಕ್ಕೆ ಸುಮಾರು 4 ಕೋ.ರೂ. ವೆಚ್ಚದಲ್ಲಿ ಬೃಹತ್‌ ಸೇತುವೆ ನಿರ್ಮಾಣ ಆಗಿದೆ. ಇದರಲ್ಲಿ ಚಣಿಲ ಸಹಿತ 1 ಕಿ.ಮೀ. ಭಾಗದ ನೀರಿನ ಹರಿವು ಮಾತ್ರ ಇದೆ. ಇಲ್ಲಿಗೆ ಇಂತಹ ಬೃಹತ್‌ ಯೋಜನೆ ಅಗತ್ಯವಿರಲಿಲ್ಲ.

ರೈತನ ಸಮಸ್ಯೆ ಕೇಳುವವರಿಲ್ಲ!
ಅಟ್ಲಾರು ಹಳೆ ಸೇತುವೆ ಸಾಕಷ್ಟು ಅಗಲವಾಗಿದ್ದರೂ ಎತ್ತರವಿಲ್ಲ ಎಂಬ ನೆಪದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ಹೊಸ ಸೇತುವೆಗೆ ಕೃಷಿಕರ ಜಾಗವನ್ನು ಸ್ವಾಧೀನಪಡಿಸಿ ಇನ್ನೂ ಪರಿಹಾರ ವಿತರಿಸಿಲ್ಲ ಎನ್ನಲಾಗಿದೆ. ಕೃಷಿಕ ಧನಂಜಯ ರೈ ಅವರಿಗೆ ಸೇರಿದ 24 ಸೆಂಟ್ಸ್‌ ಕೃಷಿ ಜಾಗದಲ್ಲಿ ಸೇತುವೆ ನಿರ್ಮಾಣವಾಗಿದೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅವರಿಗೆ ಹಣದ
ಆವಶ್ಯಕತೆಯಿದ್ದು, ಪರಿಹಾರ ಮೊತ್ತವನ್ನು ಶೀಘ್ರದಲ್ಲಿ ಅಪೇಕ್ಷಿಸುತ್ತಿದ್ದಾರೆ. ಮೂಲದ ಪ್ರಕಾರ ಸೋಮವಾರ ಅನುದಾನ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ರೈತ ಸಂಘದಿಂದ ತೀವ್ರ ಹೋರಾಟ 
ಅತಿ ಅಗತ್ಯವಿರುವ ಪ್ರದೇಶಗಳಲ್ಲಿ ಸೇತುವೆ ನಿರ್ಮಿಸಿಲ್ಲ. ಯಾವುದೇ ಅಪಘಾತ ಸಂಭವಿಸದ ಅಟ್ಲಾರು ಸೇತುವೆಯನ್ನು ಬೃಹತ್‌ ಮೊತ್ತ ಬಳಸಿಕೊಂಡು ಹೊಸದಾಗಿ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ವಿಶೇಷ ತನಿಖೆಯಾಗಬೇಕು. ಕೃಷಿಕರ ಜಾಗವನ್ನು ಕಬಳಿಸಿ ಪರಿಹಾರ ಕೊಡದೆ ಸತಾಯಿಸುತ್ತಿರುವ ಬಗ್ಗೆಯೂ ದೂರುಗಳು ಬರುತ್ತಿವೆ. ಸಂಬಂಧ ಪಟ್ಟವರು ತತ್‌ಕ್ಷಣ ಪರಿಹಾರ ಒದಗಿಸದಿದ್ದಲ್ಲಿ, ರೈತ ಸಂಘವು ತೀವ್ರರೀತಿಯ ಹೋರಾಟ ನಡೆಸಬೇಕಾಗುತ್ತದೆ.
ಶ್ರೀಧರ ಶೆಟ್ಟಿ ಬೆ„ಲುಗುತ್ತು,
  ಪುಣಚ, ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದ. ಕ.

ಇಲ್ಲಿ ಅತ್ಯಗತ್ಯವಾದ ಮಣಿಲ, ದೇವಸ್ಯ ಹಾಗೂ ಮಚ್ಚಿಮಲೆ ಸೇತುವೆ ಮಾತ್ರ ಅನುದಾನವಿಲ್ಲದ ನೆಪದಲ್ಲಿ ಇನ್ನೂ ಕಿರಿದಾಗಿಯೇ ಉಳಿದುಕೊಂಡಿವೆ. ಇಲ್ಲಿ ಅಪಘಾತಗಳ ಸಂಭವನೀಯತೆ ಜಾಸ್ತಿ. ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿವೆ. ಬೊಳ್ಳಣ ಮತ್ತು ಬೇಜಾರದಲ್ಲಿ ಅಪಘಾತ ವಲಯವಾಗಿದೆ. ಅದಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ.
– ಗ್ರಾಮಸ್ಥರು

ಉದಯಶಂಕರ್‌ ನೀರ್ಪಾಜೆ 

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.