ಬೆಳೆ ಸಮೀಕ್ಷೆ ಆ್ಯಪ್‌ಗೆ ಚಾಲನೆ


Team Udayavani, Sep 5, 2020, 1:05 PM IST

ಬೆಳೆ ಸಮೀಕ್ಷೆ  ಆ್ಯಪ್‌ಗೆ ಚಾಲನೆ

ದೇವನಹಳ್ಳಿ: ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಬಹುದಾಗಿದೆ ಎಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕಿ ವೀಣಾ ತಿಳಿಸಿದರು.

ತಾಲೂಕಿನ ಕಸಬ ಹೋಬಳಿಯ ಬಿದಲೂರು ಗ್ರಾಮದಲ್ಲಿ ಕೃಷಿ ಬೆಳೆ ಸಮೀಕ್ಷೆ ಆ್ಯಪ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ತಾವು ಬೆಳೆದಿರುವ ಬೆಳೆಗಳ ಬಗ್ಗೆ ಬೆಳೆ ಸಮೀಕ್ಷೆ ಮಾಡುವುದರಿಂದ ಯಾವ ರೈತರು ಯಾವ ಬೆಳೆ ಬೆಳೆದಿದ್ದಾರೆಂಬ ನಿಖರವಾದ ಮಾಹಿತಿ ಸಿಗುತ್ತದೆ. ಪ್ರಕೃತಿ ವಿಕೋಪ, ಬೆಳೆ ಹಾನಿಯಾದ ಸಂದರ್ಭದಲ್ಲಿ ಬೆಳೆ ವಿಮೆ ನೀಡಲು ಸಹಕಾರಿಯಾಗುತ್ತದೆ ಎಂದರು. ಆ್ಯಪ್‌ಅನ್ನು ಗೂಗಲ್‌ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್‌ ಮಾಡಿಕೊಂಡ ನಂತರ, ವರ್ಷ ಮುಂಗಾರು, ಹಿಂಗಾರು ಬೆಳೆ, ದೂರವಾಣಿ ಸಂಖ್ಯೆ ಆರಂಭಿಸಿ, ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಸರ್ವೆ ನಂ., ಲೊಕೇಷನ್‌, ಮಾಲಿಕರ ವಿವರ, ಬೆಳೆ ವಿವರ, ಪ್ರದೇಶದ ಮಾಹಿತಿ, ಬೆಳೆ ವಿಧ, ನೀರಾವರಿ ವಿಧ, ಬೆಳೆ ವಿಸ್ತೀರ್ಣ ಮಾಹಿತಿ ನೀಡಿದ ನಂತರ ಮೂರು ಬೆಳೆಯ ಛಾಯಾಚಿತ್ರಗಳನ್ನು ತೆಗೆದು ಅಪ್‌ಲೋಡ್‌ ಮಾಡಬೇಕಾಗುತ್ತದೆ. ಇದರಲ್ಲಿ ಪ್ರತಿ ರೈತರು ಪಾಲ್ಗೊಳ್ಳಬೇಕು ಎಂದು ರೈತರಲ್ಲಿ ಮನವಿ ಮಾಡಿದರು. ಈ ವೇಳೆ ಕೃಷಿ ಇಲಾಖೆಯ ಪುಷ್ಪಾ ಹಾಗೂ ಸಿಬ್ಬಂದಿ ಇದ್ದರು.

……………………………………………………………………………………………………………………………………………………..

ಪರಿಸರ ಸಂರಕ್ಷಣೆ, ವೃಕ್ಷ ದಾಸೋಹಕ್ಕೆ ಚಾಲನೆ : ವಿಜಯಪುರ: ಪರಿಸರವನ್ನು ಬೆಳೆಸುವ, ಉಳಿಸುವ ಹಾಗೂ ಸಂರಕ್ಷಿಸುವ ಮಹಾನ್‌ ಕಾರ್ಯ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಹೇಳಿದರು. ಪಟ್ಟಣದ ಅಯ್ಯಪ್ಪ ನಗರದಲ್ಲಿರುವ ಕೆರೆ ಕೋಡಿ ಆವರಣದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗಾಂಧಿ ಭವನ ಬೆಂಗಳೂರು, ಸುಮಂಗಲಿ ಸೇವಾಶ್ರಮ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ಸೇವಾ ಸಮಿತಿ ವಿಜಯಪುರ ಇವರುಗಳ ಆಶ್ರಯದಲ್ಲಿ ನಡೆದ ವೃಕ್ಷ ದಾಸೋಹ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಯೋಜನೆಗೆ ಕೈಜೋಡಿಸಬೇಕು: ಇಂದು ಪರಿಸರ, ವಾಯುಮಾಲಿನ್ಯ, ಜಲಮಾಲಿನ್ಯ, ಶಬ್ದಮಾಲಿನ್ಯ, ಉಷ್ಣಾಂಶ ಮಾಲಿನ್ಯ ಹಾಗೂ ವಿಕಿರಣ ಮಾಲಿನ್ಯ ಈ ಆರು ಕಾರಣಗಳಿಂದ ಪರಿಸರ ಮಾಲಿನ್ಯವಾಗುತ್ತದೆ ಎಂದರು. ಹಿರಿಯ ಸಾಮಾಜಿಕ ಕಾರ್ಯಕರ್ತ ವಿ.ಎನ್‌.ಸೂರ್ಯ ಪ್ರಕಾಶ್‌ ವಿವಿಧ ಸಂಘ ಸಂಸ್ಥೆ ಗಳ ಸದಸ್ಯರಿಗೆ, ಶಾಲಾ ಮಕ್ಕಳಿಗೆ, ಎನ್‌ಎಸ್‌ಎಸ್‌ ಸ್ವಯಂ ಸೇವಕರಿಗೆ ಹಾಗೂ ಪ್ರಗತಿಪರ ರೈತರಿಗೆ ನೇರಳೆ, ಹೊಂಗೆ, ಮಾವು,ಬೇವು, ಅಶೋಕ ಮುಂತಾದ ಉಪಯುಕ್ತ ಸಸಿಗಳನ್ನು ವಿತರಿಸಿದರು.

ಕರ್ನಾಟಕ ಅಂಚೆ ನೌಕರರ ಸಾಹಿತ್ಯ ಬಳಗದ ಅಧ್ಯಕ್ಷ ಬಿಜ್ಜವಾರ ಸುಬ್ರಹ್ಮಣಿ, ಅಯ್ಯಪ್ಪ ಸ್ವಾಮಿ ದೇವಾಲಯದ ಧರ್ಮದರ್ಶಿ ಜೆ.ವಿ ಮುನಿ ರಾಜು, ಪ್ರಗತಿಪರ ರೈತರಾದ ಆನಂದ್‌, ಶ್ರೀ ಸಾಯಿ ಟ್ರಾವೆಲ್ಸ್ ನ ರವಿ, ಹಿರಿಯ ಸಮಾಜ ಸೇವಕ ಜೆ.ವೆಂಕಟಾಪುರ ಗ್ರಾಮದ ಶಿವಣ್ಣ, ವೃಕ್ಷ ಯೋಜನೆಯ ನಿರೀಕ್ಷಕರಾದ ಗೀತಾ ಹಾಗೂ ಸುಮಂಗಲಿ ಸೇವಾಶ್ರಮ ಪಾರ್ವತಿ ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.