ಪುತ್ತೂರು ತಾಲೂಕಿನ ವಿವಿಧೆಡೆ ಷಷ್ಠಿ ಉತ್ಸವ, ವ್ರತಾಚರಣೆ 


Team Udayavani, Nov 25, 2017, 2:03 PM IST

25-Nov-11.jpg

ಪುತ್ತೂರು: ತಾಲೂಕಿನಾದ್ಯಂತ ಚಂಪಾ ಷಷ್ಠಿಯ ದಿನವಾದ ಶುಕ್ರವಾರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಉತ್ಸವ,
ವ್ರತಾಚರಣೆ ನಡೆಯಿತು.

ಚೌತಿಯಂದು ಗಣೇಶನ ವಿಗ್ರಹಕ್ಕೆ ಪ್ರಧಾನ ಆರಾಧನೆ. ಆದರೆ ಷಷ್ಠಿ ದಿನ ವ್ರತವೇ ಪ್ರಮುಖ. ಸುಬ್ರಹ್ಮಣ್ಯ ದೇವರಿಗೆ ಷಷ್ಠಿ ತಿಥಿಯಂದು ವಿಶೇಷ ಪೂಜೆ ಸಲ್ಲುತ್ತದೆ. ಆದ್ದರಿಂದ ಸುಬ್ರಹ್ಮಣ್ಯ ದೇವರ ಪ್ರೀತ್ಯರ್ಥವಾಗಿ ಅದೇ ದಿನ ವ್ರತಾಚರಣೆ ಕೈಗೊಳ್ಳುವವರಿದ್ದಾರೆ.

ಚಂಪಾ ಷಷ್ಠಿ ಅಂದರೆ ಪ್ರಮುಖ ಎಂದರ್ಥ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ಉತ್ಸವ ನಡೆಯುತ್ತಿರುತ್ತವೆ. ಅದೇ ರೀತಿ ತಾಲೂಕಿನ ಹಲವು ದೇವಸ್ಥಾನಗಳಲ್ಲಿ ಸುಬ್ರಹ್ಮಣ್ಯ ದೇವರ ವಾರ್ಷಿಕ ಜಾತ್ರೆ ನಡೆಯುತ್ತವೆ. ಇದು ಬಿಟ್ಟರೆ ಚಂಪಾ ಷಷ್ಠಿಯ ಅನಂತರದ ತಿಂಗಳಲ್ಲಿ ಬರುವ ಕಿರುಷಷ್ಠಿ ಸುಬ್ರಹ್ಮಣ್ಯ ದೇವರನ್ನು ಆರಾಧನೆ ಮಾಡುವ ಇನ್ನೊಂದು ವಿಶೇಷ ದಿನ. ಹೆಸರಿಗೆ ತಕ್ಕಂತೆ ಇದು ಕಿರು ಷಷ್ಠಿ. ಸುಬ್ರಹ್ಮಣ್ಯ ದೇವರ ಅಧಿದೇವತೆ ನಾಗ. ಕರಾವಳಿ ಜಿಲ್ಲೆಗಳಲ್ಲಿ ನಾಗನಿಗೆ ವಿಶೇಷ ಪ್ರಾಧಾನ್ಯತೆ. ಯಾವುದೇ ಕಾಯಿಲೆ, ದೋಷ ಕಂಡುಬಂದರೂ ನಾಗನಿಗೆ ಪ್ರಥಮ ಆದ್ಯತೆ. ಆದ್ದರಿಂದಲೇ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಆರಾಧನೆ ನಡೆಯುತ್ತದೆ. ಸುಬ್ರಹ್ಮಣ್ಯ ಎಂದರೆ ಶುದ್ಧಾಚಾರ. ಆದ್ದರಿಂದ ಷಷ್ಠಿಯಂದು ಶುದ್ಧಾಚಾರದಲ್ಲಿದ್ದು, ಉಪವಾಸ ಕೈಗೊಳ್ಳುತ್ತಾರೆ. ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬಲಿವಾಡು ನೀಡಿ, ಮಧ್ಯಾಹ್ನ ದೇವರ ಪ್ರಸಾದ ಸ್ವೀಕರಿಸಿಯೇ ಊಟ ಮಾಡುವವರು ಅನೇಕರಿದ್ದಾರೆ.

ತೋಟದ ನಡುವೆ
ಕೆಲವು ವರ್ಷಗಳ ಹಿಂದೆ ಷಷ್ಠಿ ದಿನದಂದು ತೋಟದ ನಡುವೆ ಅನ್ನ ಬೇಯಿಸಿ, ಊಟ ಮಾಡುವ ಸಂಪ್ರದಾಯವಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಇಂತಹ ಸಂಪ್ರದಾಯ ಕಡಿಮೆಯಾಗಿದೆ. ಎಲ್ಲರೂ ದೇವಸ್ಥಾನಗಳಿಗೆ ಬಲಿವಾಡು ನೀಡಿ, ದೇವರ ಪ್ರಸಾದ ಸ್ವೀಕರಿಸುತ್ತಾರೆ. ಇದಕ್ಕಿಂತ ಭಿನ್ನವಾಗಿ ಮನೆಯಲ್ಲೇ ಷಷ್ಠಿ ಆಚರಿಸಿ ಸಂಭ್ರಮ ಪಡುವ ದಿನಗಳಿತ್ತು. ಮನೆಯಿಂದ ಸ್ವಲ್ಪ ದೂರದಲ್ಲಿ ಸಣ್ಣ ಒಲೆ ನಿರ್ಮಿಸಿ, ಅದರಲ್ಲೇ ಅಡುಗೆ ಮಾಡಲಾಗುತ್ತಿತ್ತು. 

ತಾಲೂಕಿನ ದೇಗುಲಗಳು
ಪುತ್ತೂರು ತಾಲೂಕಿನ ಎಲ್ಲ ಸುಬ್ರಹ್ಮಣ್ಯ ದೇಗುಲಗಳಲ್ಲೂ ಷಷ್ಠಿ ಆಚರಣೆ ನಡೆಯುತ್ತವೆ. ಕೆಲವು ದೇವಸ್ಥಾನಗಳಲ್ಲಿ ಉತ್ಸವಾದಿ ಗಳು ನಡೆದರೆ, ಇನ್ನೂ ಕೆಲವು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಬಲಿವಾಡು ಸೇವೆ ನಡೆಯಿತು. ಪ್ರಮುಖವಾಗಿ ಕೆಮ್ಮಿಂಜೆ ಶ್ರೀ ಮಹಾವಿಷ್ಣು-ಶ್ರೀ ಷಣ್ಮುಖ ದೇಗುಲ, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇಗುಲ, ಕುಕ್ಕಿನಡ್ಕ ಶ್ರೀ ಸುಬ್ರಾಯ ದೇಗುಲ, ಕೊಳ್ತಿಗೆ ಬಾಯಂಬಾಡಿ ಶ್ರೀ ಷಣ್ಮುಖ ದೇಗುಲ, ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇಗುಲ, ಕೋಲ್ಪೆ ಶ್ರೀ ಸುಬ್ರಹ್ಮಣ್ಯ ದೇಗುಲ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇಗುಲ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯ ದೇಗುಲ, ದೋಲ್ಪಾಡಿ ಶ್ರೀ ಬಾಲಸುಬ್ರಹ್ಮಣ್ಯ ದೇಗುಲ, ನಳೀಲು ಶ್ರೀ ಸುಬ್ರಹ್ಮಣ್ಯ ದೇಗುಲ, ಹಿರೇಬಂಡಾಡಿ ಶ್ರೀ ಸುಬ್ರಹ್ಮಣ್ಯ ದೇಗುಲ, ಮುಂಡೂರು ದೋಂತಿಲ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಷಷ್ಠಿ ಆಚರಣೆ ನಡೆಯಿತು.

ಪ್ರತಿ ತಿಂಗಳು ವ್ರತ 
ಸುಬ್ರಹ್ಮಣ್ಯನ ಆರಾಧಕರು ಪ್ರತಿ ತಿಂಗಳು ವ್ರತ ಹಿಡಿಯುವವರು ಇದ್ದಾರೆ. ಷಷ್ಠಿ ತಿಥಿಯನ್ನು ವೃದ್ಧಿ ಮತ್ತು ಕ್ಷಯ ಎಂಬರ್ಥದಲ್ಲಿ ವಿಂಗಡಿಸಲಾಗಿದೆ. ಹುಣ್ಣಿಮೆ ಬಳಿಕ ಕ್ಷಯ, ಅಮಾವಾಸ್ಯೆ ಬಳಿಕ ವೃದ್ಧಿ. ಅಮಾವಾಸ್ಯೆ ಬಳಿಕ ಚಂದ್ರ ಪೂರ್ಣಚಂದ್ರನಾಗುತ್ತಾ ಸಾಗುತ್ತಾನೆ. ಇದನ್ನು ವೃದ್ಧಿ ಎಂಬರ್ಥದಲ್ಲಿ ವಿಶ್ಲೇಷಿಸಲಾಗಿದೆ. ಪ್ರತಿ ತಿಂಗಳ ವೃದ್ಧಿಯ ಷಷ್ಠಿ ದಿನದಂದು ವ್ರತ ಹಿಡಿಯಲಾಗುತ್ತದೆ.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.