ಕುಡುಪು: ಷಷ್ಠಿ ಉತ್ಸವ ಸಂಪನ್ನ
Team Udayavani, Nov 26, 2017, 9:51 AM IST
ಕುಡುಪು: ಇಲ್ಲಿನ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಅನಂತ ಪದ್ಮನಾಭ ದೇವರ ಜೋಡು ಬಲಿ ಉತ್ಸವದೊಂದಿಗೆ ಷಷ್ಠಿ ಮಹೋತ್ಸವ ಶನಿವಾರ ಸಂಪನ್ನಗೊಂಡಿತು.
ಮುಂಜಾನೆ ಶ್ರೀ ಅನಂತ ಪದ್ಮನಾಭ ದೇವರ ಜೋಡು ಬಲಿ ಹೊರಟು ದೇಗುಲದ ರಾಜಾಂಗಣದಲ್ಲಿ ಕ್ಷೇತ್ರಪಾಲ ಪೂಜೆ ಜರಗಿತು. ಅತೀ ವಿಶೇಷವಾದ ಉಡುಕು ಸುತ್ತು ಬಲಿ ಉತ್ಸವ ಈ ಸಂದರ್ಭದಲ್ಲಿ ನೆರವೇರಿತು. ಅತೀ ವಿಶಿಷ್ಟವಾದ ಚೆಂಡೆ ಸುತ್ತಿನ ಸೇವೆಯಲ್ಲಿ ಈ ಬಾರಿ 5 ಚೆಂಡೆ, 4 ಡೋಲು, 6 ಚಕ್ರತಾಳ, 2 ಕೊಂಬು ಹಾಗೂ ಇಬ್ಬರು ವಾದ್ಯ ವಾದಕರು, ಒಬ್ಬರು ಶುೃತಿರನ್ನೊಳಗೊಂಡ 30 ಮಂದಿಯ ಚೆಂಡೆ ಬಳಗ ಉತ್ಸಾಹದಿಂದ ಪಾಲ್ಗೊಂಡು ಚೆಂಡೆ ಸುತ್ತು ಬಲಿ ಸಂಪನ್ನಗೊಳಿಸಿತು. ಈ ರೀತಿಯ ಚೆಂಡೆ ಸುತ್ತು ಬಲಿ ಕುಡುಪು ಕ್ಷೇತ್ರದಲ್ಲಿ ಮಾತ್ರ ವಿಶೇಷವಾಗಿ ಕಂಡು ಬರುತ್ತದೆ.
ಅನಂತರ ಶ್ರೀ ಅನಂತ ಪದ್ಮನಾಭ ದೇವರಿಗೆ ಚಂದ್ರಮಂಡಲೋತ್ಸವ, ಪಾಲಕಿ ಉತ್ಸವ ನಡೆಯಿತು. ಬಳಿಕ ಸಹಸ್ರಾರು ಭಕ್ತರಿಗೆ ಬಟ್ಟಲು ಕಾಣಿಕೆಯೊಂದಿಗೆ ದೇವರ ಮಹಾಪ್ರಸಾದ ವಿತರಿಸಲಾಯಿತು.
ಕ್ಷೇತ್ರದ ಆಡಳಿತ ಮೊಕ್ತೇಸರ ಹಾಗೂ ಅನುವಂಶಿಕ ಮೊಕ್ತೇಸರ ಕೆ. ನರಸಿಂಹ ತಂತ್ರಿ, ಅನುವಂಶಿಕ ಮೊಕ್ತೇಸರ ಪಿ. ಅನಂತ ಭಟ್, ಅನುವಂಶಿಕ ಮೊಕ್ತೇಸರ ಕೆ. ಬಾಲಕೃಷ್ಣ ಕಾರಂತ, ಮೊಕ್ತೇಸರ ಕೆ. ಭಾಸ್ಕರ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಎ. ಸುತಗುಂಡಿ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ಪಾಲ್ಗೊಂಡಿದ್ದರು.
ಸರದಿಯಲ್ಲಿ ನಿಂತು ಸುಮಾರು 40 ಸಾವಿರ ಭಕ್ತರು ದೇವರ ದರ್ಶನ ಪಡೆದರು. ನಾಗಬನದಲ್ಲಿ ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಸೀಯಾಳ ಅಭಿಷೇಕ ನಿರಂತರವಾಗಿ ನಡೆಯಿತು. ಭದ್ರ ಸರಸ್ವತಿ ತೀರ್ಥ ಸರೋವರದಲ್ಲಿ ಷಷ್ಠಿ ತೀರ್ಥಸ್ನಾನ ವಿಶೇಷವಾಗಿತ್ತು. ಬಂದ ಭಕ್ತರಿಗೆಲ್ಲ ಕುಡುಪು ಗ್ರಾಮಸ್ಥರು ಹಾಗೂ ಪರವೂರಿನ ಭಕ್ತರಿಂದ ನಿರಂತರ ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ ನಡೆದು, ಬಳಿಕ ರಥಬೀದಿಯಲ್ಲಿ ಬ್ರಹ್ಮರಥೋತ್ಸವ ಜರಗಿತು. ಮಂಗಳೂರು ಗ್ರಾಮಾಂತರ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ