ನಗರ ಠಾಣೆಯಲ್ಲಿ ಶಾಂತಿ ಸಭೆ


Team Udayavani, Nov 29, 2017, 2:02 PM IST

29-Nov-9.jpg

ಪುತ್ತೂರು: ಡಿಸೆಂಬರ್‌ 1ರಂದು ಈದ್‌ಮಿಲಾದ್‌, ಡಿಸೆಂಬರ್‌ 2ರಂದು ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಮಂಗಳವಾರ ಪುತ್ತೂರು ನಗರ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ಮಾತನಾಡಿ, ಪ್ರತಿ ವರ್ಷ ಶಾಂತಿ ಸಭೆಗೆ ಮೊದಲೇ ಈದ್‌ ಮಿಲಾದ್‌ನ ಅನುಮತಿಗೆ ಮನವಿ ಬರುತ್ತದೆ. ಆದರೆ ಈ ಬಾರಿ ಅನುಮತಿ ಕೇಳಿ ಮನವಿ ಬಂದೇ ಇಲ್ಲ. ಈದ್‌ಮಿಲಾದ್‌ ರ‍್ಯಾಲಿಗೆ ಪೊಲೀಸರ ಅಗತ್ಯ ಇಲ್ಲ ಎಂದು ಭಾವಿಸಿದಂತಿದೆ. ಕಬಕದಲ್ಲಿ ರ‍್ಯಾಲಿ  ನಡೆಸುವ ಬಗ್ಗೆ ಬ್ಯಾನರ್‌ ಹಾಕಲಾಗಿದೆ. ಆದರೆ ಈ ಬಗ್ಗೆ ಠಾಣೆಗೆ ಯಾವುದೇ ಮಾಹಿತಿ ನೀಡಿಲ್ಲ. ಏಕಾಏಕಿ ನೀವೇ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದರು.

ಅಶ್ರಫ್‌ ಕಲ್ಲೇಗ ಮಾತನಾಡಿ, ಡಿಸೆಂಬರ್‌ 1ರಂದು ದ.ಕ. ಮುಸ್ಲಿಂ ಯುವಜನ ಪರಿಷತ್‌, ಪುತ್ತೂರು ಈದ್‌ ಇಲಾದ್‌ ಸಮಿತಿ ವತಿಯಿಂದ ಈದ್‌ ಮಿಲಾದ್‌ ರ‍್ಯಾಲಿ ನಡೆಸಲು ನಿರ್ಧರಿಸಿದ್ದೇವೆ. ಕಬಕ ದಿಂದ ಹೊರಡುವ ರ್ಯಾಲಿ ಪುತ್ತೂರಿಗೆ ಬಂದು ದರ್ಬೆ ತಲುಪಿ, ಅಲ್ಲಿಂದ ಕಿಲ್ಲೆ ಮೈದಾನದಲ್ಲಿ ಸಮಾಪ್ತಿಗೊಳ್ಳಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಪ್ರತಿಕ್ರಿಯಿಸಿದ ಮಹೇಶ್‌ ಪ್ರಸಾದ್‌, ಕಬಕದಿಂದ ರ‍್ಯಾಲಿ ನಡೆಸುವುದು ಕಷ್ಟ. ದ್ವಿಚಕ್ರ ಹಾಗೂ ಕಾಲ್ನಡಿಗೆ ಜಾಥಾವನ್ನು ಕೈಬಿಟ್ಟು, ಕಾರು ರ‍್ಯಾಲಿ ಮಾಡುತ್ತಿರುವುದು ಒಳ್ಳೆಯದೇ. ಆದರೆ ಕಬಕದಿಂದ ಪುತ್ತೂರಿಗೆ 5 ಕಿ.ಮೀ. ಅಂತರವಿದೆ. ಇಷ್ಟು ದೂರ ರ‍್ಯಾಲಿ ನಡೆಸುವುದರಿಂದ ವಾಹನ ದಟ್ಟಣೆಗೆ ಸಮಸ್ಯೆಯಾಗಲಿದೆ. ವಾಹನ ಸಂಖ್ಯೆ ಹೆಚ್ಚುತ್ತಿದೆ. ಇದಲ್ಲದೇ, ರ‍್ಯಾಲಿ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಜನಜಂಗುಳಿ ಸೇರುತ್ತದೆ. ಈ ಸಂದರ್ಭ ಕಬಕಕ್ಕೆ ಮಿತ್ತೂರು ಹಾಗೂ ವಿಟ್ಲ ಕಡೆಯಿಂದ ಬರುವ ವಾಹನಗಳನ್ನು ನಿಯಂತ್ರಿಸುವುದು ಕಷ್ಟವಾಗಲಿದೆ. ಕಬಕದಲ್ಲಿ ಸಾಕಷ್ಟು ಜಾಗವೂ ಇಲ್ಲ. ಇದರ ಬದಲು ಮುರದಿಂದ ರ‍್ಯಾಲಿ ನಡೆಸುವುದು ಉತ್ತಮ. ಮುರದಿಂದ ಒಳಗಿನ ರಸ್ತೆಯಲ್ಲಿ ರ‍್ಯಾಲಿಯಲ್ಲಿ ಬರುವ ವಾಹನಗಳನ್ನು ನಿಲ್ಲಿಸಬಹುದು. ಈ ಬಗ್ಗೆ ನಿಮ್ಮೊಳಗೆ ಒಂದು ಸಭೆ ನಡೆಸಿ, ನಿರ್ಧಾರಕ್ಕೆ ಬನ್ನಿ. ಬಳಿಕ ಠಾಣೆಗೆ ಮಾಹಿತಿ ನೀಡಿ ಎಂದು ಸೂಚಿಸಿದರು.

ಉತ್ತರಿಸಿದ ನೂರುದ್ದೀನ್‌, ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಬಕ ಶಾಲಾ ಆವರಣದಲ್ಲಿ ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಲಾಗುವುದು. ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭ ಆಗುವುದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದರು.

ಇದಕ್ಕೆ ಆಕ್ಷೇಪಿಸಿದ ಪೊಲೀಸ್‌ ನಿರೀಕ್ಷಕ, ಸಮಯಕ್ಕೆ ಸರಿಯಾಗಿ ರ‍್ಯಾಲಿ ಆರಂಭ ಆಗುವುದು ಕಷ್ಟವೇ. ಅಲ್ಲದೇ ಸವಣೂರು, ಕುಂಬ್ರ ಭಾಗದಿಂದ ಕಾರ್ಯಕರ್ತರು ಆಗಮಿಸುತ್ತಾರೆ. ಇವರ ನಿಯಂತ್ರಣವನ್ನು ಆಯಾ ಭಾಗದವರೇ ನೋಡಿಕೊಳ್ಳಬೇಕು.

ಬಳಿಕ ಪೊಲೀಸರು ಮಧ್ಯಪ್ರವೇಶಿಸುವಂತೆ ಆಗಬಾರದು. ಹಿಂದಿನ ಸಲ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ವಾತಾವರಣ ಈ ಬಾರಿ ನಿರ್ಮಾಣ ಆಗಬಾರದು. ಹೊರಗಿನಿಂದ ಪೊಲೀಸರನ್ನು ತರಿಸುವುದು ಕಷ್ಟಕರ. ಆದ್ದರಿಂದ ರ‍್ಯಾಲಿಯನ್ನು ಮುರದಿಂದಲೇ ಆರಂಭಿಸಿ. ಈ ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಿ ಎಂದು ಸಲಹೆ ನೀಡಿದರು.

ಅನುಮತಿ ಪಡೆದುಕೊಂಡಿಲ್ಲ
ಕಬಕದಲ್ಲಿ ಸಣ್ಣ ಮಕ್ಕಳನ್ನು ಕರೆದುಕೊಂಡು ಬಂದು ರ‍್ಯಾಲಿ ನಡೆಸಲಾಗಿತ್ತು. ಇದಕ್ಕೆ ಅನುಮತಿಯನ್ನೇ ಪಡೆದುಕೊಂಡಿರಲಿಲ್ಲ. ಪೊಲೀಸರ ಅಗತ್ಯ ಇಲ್ಲ ಎಂದು ಭಾವಿಸಿದಂತಿದೆ. ಇದು ಸರಿಯಲ್ಲ. ಇವು ನಮ್ಮ ವಿಶ್ವಾಸವನ್ನು ಕಳೆದುಕೊಳ್ಳುವ ಪ್ರಯತ್ನಗಳು. ಯಾವುದೇ ರೀತಿಯ ಅನುಮತಿಗಳಿಗೆ ಪೊಲೀಸರಿಂದ ತೊಂದರೆ ಆಗಿಲ್ಲ. ಅಂತಹ ಒಂದು ಸಂದರ್ಭ ಬರಲಿ, ನೋಡುವ ಎಂದು ಕಾಯುತ್ತಿರುವ ಹಾಗಿದೆ. ಆದ್ದರಿಂದ ಮುಂದೆ ಅನುಮತಿ ಪಡೆದುಕೊಂಡೇ ಕಾರ್ಯಕ್ರಮ ಮಾಡಿ ಎಂದು ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ತಿಳಿಸಿದರು.

ಡಿ. 2ಕೆ ದತ್ತಮಾಲಾ
ಮುರಳೀಕೃಷ್ಣ ಹಸಂತ್ತಡ್ಕ ಮಾತ ನಾಡಿ, ಡಿಸೆಂಬರ್‌ 2ರಂದು ದರ್ಬೆಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ದತ್ತಮಾಲಾ ಭಜನೆ ಸಂಕೀರ್ತನೆ ನಡೆಯಲಿದೆ. ಬಳಿಕ ಪುತ್ತೂರಿನಿಂದು ಸುಮಾರು 250 ಮಂದಿ ದತ್ತಮಾಲಾಧಾರಿಗಳು ಹೊರಡಲಿದ್ದಾರೆ. ಕಾರ್ಯಕ್ರಮ ಹಿಂದಿನ ವರ್ಷದಂತೆ ಈ ಬಾರಿಯೂ ನಡೆಯಲಿದೆ. ಯಾವುದೇ ಬದಲಾವಣೆ ಇಲ್ಲ ಎಂದು ವಿವರಿಸಿದರು. ಪ್ರತಿಕ್ರಿಯಿಸಿದ ಮಹೇಶ್‌ ಪ್ರಸಾದ್‌, ಪುತ್ತೂರಿನಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಕಾರ್ಯಕ್ರಮ ನಡೆಸುತ್ತಿದ್ದೀರಿ. ಎಲ್ಲರಿಂದಲೂ ಉತ್ತಮ ಸಹಕಾರ ಸಿಕ್ಕಿದೆ ಎಂದು ಅಭಿನಂದಿಸಿದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.