ಬೆಳ್ತಂಗಡಿ: ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ?


Team Udayavani, Dec 2, 2017, 4:47 PM IST

12_36.jpg

ಬೆಳ್ತಂಗಡಿ: ಮುಂದಿನ ಚುನಾವಣೆಯಲ್ಲಿ ರಾಜ್ಯ ಮಟ್ಟದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳುತ್ತದೋ ಇಲ್ಲವೋ ಗೊತ್ತಿಲ್ಲ. ಆದರೆ ತಾಲೂಕಿನಲ್ಲಿ ಅಂಥದೊಂದು ಸಾಧ್ಯತೆ ಕಂಡುಬಂದಿದೆ.

ಇದಕ್ಕೆ ಪುಷ್ಟಿ ನೀಡುವಂತೆ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷತೆ ಜೆಡಿಎಸ್‌ ಪಾಲಾಗಲಿದೆ. ಕಾಂಗ್ರೆಸ್‌ ಬೆಂಬಲಿತ ಬ್ಯಾಂಕ್‌ ಅಧ್ಯಕ್ಷರು ಬಹುಮತ ಇದ್ದರೂ ರಾಜೀನಾಮೆ ನೀಡಿ ಜೆಡಿಎಸ್‌ಗೆ ಅವಕಾಶ ನೀಡುವ ಗಳಿಗೆ ಬಂದಿದೆ. ಈ ಮೈತ್ರಿ ಲಕ್ಷಣ ಮುಂದಿನ ಚುನಾವಣೆಗೂ ಅನ್ವಯವಾಗು ತ್ತದೋ ಎಂಬ ಬಗ್ಗೆ ಪಕ್ಷದ ಮುಖಂಡರು ಪ್ರತಿಕ್ರಿಯಿಸುತ್ತಿಲ್ಲ.

ಪಿಎಲ್‌ಡಿ ಬ್ಯಾಂಕಿನಲ್ಲಿ ಒಟ್ಟು 13 ನಿರ್ದೇಶಕ ಸ್ಥಾನಗಳಿವೆ. 1 ನಾಮನಿರ್ದೇಶಿತ ನಿರ್ದೇಶಕರಿದ್ದಾರೆ. ಕಾಂಗ್ರೆಸ್‌ 7 ಸ್ಥಾನಗಳನ್ನು ಹೊಂದಿದ್ದು, ಜೆಡಿಎಸ್‌ 2 ಸ್ಥಾನ ಗಳಿಸಿದೆ. ನಾಲ್ಕು ಸ್ಥಾನ ಬಿಜೆಪಿಯದ್ದು. ಅಧ್ಯಕ್ಷ ಗಾದಿಗೆ ಚುನಾವಣೆ ನಡೆದಾಗ ಕಾಂಗ್ರೆಸ್‌ ಹಾಗೂ ಬಿಜೆಪಿ ಸ್ಪರ್ಧಿಸಿತ್ತು. ಕಾಂಗ್ರೆಸ್‌ಗೆ 9 ಮತ್ತು ಬಿಜೆಪಿಗೆ 3 ಮತಗಳು ಸಿಕ್ಕಿದ್ದವು. ಒಂದು ಕುಲಗೆಟ್ಟ ಮತ ವಾಗಿತ್ತು. ಬಹುಮತ ಹೊಂದಿದ್ದ ಕಾಂಗ್ರೆಸ್‌ಗೆ ಜೆಡಿಎಸ್‌ನ ಇಬ್ಬರ ಬೆಂಬಲ ಅನಾಯಾಸವಾಗಿ ಸಿಕ್ಕಿತ್ತು. ಹಾಗೆಂದು ಈ ಸಂದರ್ಭದಲ್ಲಿ ಜೆಡಿಎಸ್‌ ಜತೆ ಅಧಿಕಾರ ಹಂಚಿಕೆ ಕುರಿತು ಮಾತುಕತೆ ನಡೆದಿರಲಿಲ್ಲ ಎನ್ನಲಾಗಿದೆ. 

ಎಂಎಲ್‌ಎ ಅಭ್ಯರ್ಥಿಗೆ ಸ್ಥಾನ
ಜೆಡಿಎಸ್‌ನ ಎಂಎಲ್‌ಎ ಅಭ್ಯರ್ಥಿಯಾಗಿ ಹೊರ ಹೊಮ್ಮಿರುವ ಪ್ರವೀಣ್‌ ಚಂದ್ರ ಜೈನ್‌ ಅವರಿಗೆ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಸ್ಥಾನ ದಕ್ಕಲಿದೆ ಎಂಬ ಮಾಹಿತಿ ಇದೆ. ಇವರನ್ನು ಹಾಗೂ ಜಗನ್ನಾಥ ಗೌಡರನ್ನು ಅಭ್ಯರ್ಥಿಯಾಗಿ ಪರಿಗಣಿಸಲು ತಾಲೂಕಿನಿಂದ ಪಕ್ಷದ ವರಿಷ್ಠರಿಗೆ ಶಿಫಾರಸು ಕಳುಹಿಸಲಾಗಿದೆ.

ಪ್ರವೀಣ್‌ಚಂದ್ರ ಈ ಹಿಂದೆ ವಿಧಾನಪರಿಷತ್‌ ಚುನಾವಣೆಗೂ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಎದುರುಜೆಡಿಎಸ್‌ ಸ್ಪರ್ಧಿಸಲಿದೆ ಎಂಬ ಸುಳಿವು ನೀಡಲಾಗಿತ್ತು. ಹಾಗಿದ್ದರೂ ಪ್ರತಿಪಕ್ಷದ ಅಭ್ಯರ್ಥಿಗೆ ಮಣೆ ಹಾಕುವ ಪಕ್ಷದ ನಾಯಕರ ನಡೆ ಕಾರ್ಯಕರ್ತರಲ್ಲಿ ಸಣ್ಣ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಈಶ್ವರ ಭಟ್‌ ಎಂ. ಸೋಮವಾರ ರಾಜೀನಾಮೆ ನೀಡುವರು. ಬಳಿಕ ಪ್ರವೀಣ್‌ಚಂದ್ರ ಅಧ್ಯಕ್ಷರಾಗುವರು. ಈ ಬಗ್ಗೆ ಚರ್ಚಿಸಲು ಶನಿವಾರ ಶಾಸಕರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಪ್ರತಿಪಕ್ಷದವರಿಗೆ ಹುದ್ದೆ ಬಿಟ್ಟುಕೊಡಲು ಶಾಸಕರು ಒಪ್ಪುತ್ತಾರೆಯೇ ಎನ್ನುವುದು ಅಲ್ಲಿ ಖಚಿತವಾಗಲಿದೆ. ಏಕೆಂದರೆ ಕಾಂಗ್ರೆಸ್‌ನಿಂದ ಹಾಲಿ ಶಾಸಕರೇ ಹುರಿಯಾಳು ಎಂದು ಘೋಷಿಸಲಾಗಿದೆ.

ಒಂದು ಸ್ಥಾನ ಖೋತಾ
ಕಾಂಗ್ರೆಸ್‌ ಮೂಲಕ ಆಯ್ಕೆಯಾದ ನಿರ್ದೇಶಕರೊಬ್ಬರ ನಿರ್ದೇಶಕತ್ವ ರದ್ದಾಗಿದೆ ಎನ್ನಲಾಗಿದ್ದು, ಕಾಂಗ್ರೆಸ್‌ ಬಲ ಕುಂದಲಿದೆ. ನಿರ್ದೇಶಕರೇ ಸುಸ್ತಿದಾರರಾಗಿದ್ದಾರೆನ್ನಲಾಗಿದ್ದು, ಇದೇ ನಿರ್ದೇಶಕ ಸ್ಥಾನಕ್ಕೂ ಕುತ್ತು ತಂದಿತು ಎನ್ನಲಾಗಿದೆ.

ನನಗೆ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಜೆಡಿಎಸ್‌ ಕಾಂಗ್ರೆಸ್‌ ಹೊಂದಾಣಿಕೆ ಕುರಿತು ಯಾವುದೇ ಮಾತುಕತೆ ನನ್ನ ಉಪಸ್ಥಿತಿಯಲ್ಲಿ ನಡೆದಿಲ್ಲ.
ಕೆ. ಹರೀಶ್‌ ಕುಮಾರ್‌,
ಕಾಂಗ್ರೆಸ್‌ ಜಿಲ್ಲಾಧ್ಯಕ್ಷರು

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.