ತೊಡಿಕಾನ: ಹಿಂದೂ ಧರ್ಮಜಾಗೃತಿ ಸಭೆ 


Team Udayavani, Dec 11, 2017, 3:39 PM IST

11-Dec-15.jpg

ಬೆಳ್ಳಾರೆ: ಆಧುನಿಕ ಯುಗದಲ್ಲಿ ಜನರು ಮನಃಶಾಂತಿ ಕಡಿಮೆಯಾಗಿ ಜೀವನದಲ್ಲಿ ನೆಮ್ಮದಿಯನ್ನು ಕಳೆದುಕೊಂಡಿದ್ದಾರೆ. ಧರ್ಮಾಚರಣೆಯಿಂದ ಮಾತ್ರ ನೆಮ್ಮದಿ ಕಂಡುಕೊಳ್ಳಲು ಸಾಧ್ಯವಿದೆ. ಹಿಂದೂ ಧರ್ಮದ ಶ್ರೇಷ್ಠತೆ ಧರ್ಮಾಚರಣೆಯಲ್ಲಿ ಅಡಗಿದೆಯೆಂದು ಸನಾತನ ಸಂಸ್ಥೆಯ ವಕ್ತಾರರಾದ ಆನಂದ ಗೌಡ ಇವರು ಹೇಳಿದರು.

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇಗುಲದ ಅಕ್ಷಯ ಸಭಾಂಗಣದಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಧರ್ಮಪ್ರೇಮಿಗಳ ವತಿಯಿಂದ ಆಯೋಜಿಸಿದ್ದ ಹಿಂದೂ ಧರ್ಮಜಾಗೃತಿ ಸಭೆಯಲ್ಲಿ ಅವರು ಮಾರ್ಗದರ್ಶನ ಮಾಡಿದರು.

ವಿಚಾರವಾದಿಗಳು ಎಂದುಕೊಂಡಿರುವ ವಿಚಾರಶೂನ್ಯ ಹಿಂದೂ ವಿರೋಧಿಗಳಿಂದಾಗಿ ಹಿಂದೂ ಧರ್ಮದ ಅವನತಿಯಾಗುತ್ತಿದೆ. ‘ಸುಖಸ್ಯ ಮೂಲಂ ಧರ್ಮಃ’ ಅಂದರೆ ಧರ್ಮಾಚರಣೆಯಿಂದಲೇ ಸುಖ ಸಿಗಲು ಸಾಧ್ಯವಿದೆ. ನಾವೆಲ್ಲರೂ ಸ್ವತಃ ಧರ್ಮಾಚರಣೆಯನ್ನು ಮಾಡಿ ಅದರ ಮಹತ್ವವನ್ನು ತಿಳಿಸುವುದು ಆವಶ್ಯಕತೆ ಇದೆ ಎಂದು ಅವರು ಹೇಳಿದರು.

ಹಿಂದೂ ರಾಷ್ಟ್ರದ ಸ್ಥಾಪನೆಯೇ ಗುರಿ
ಹಿಂದೂ ಜನಜಾಗೃತಿ ಸಮಿತಿಯ ವಕ್ತಾರರಾದ ವಿವೇಕ್‌ ಪೈ ಮಾತನಾಡಿ, ತ್ರೇತಾಯುಗದಲ್ಲಿ ಶ್ರೀರಾಮಚಂದ್ರ ಕೇವಲ ವಾನರರ ಮಾಧ್ಯಮದಿಂದ ಧರ್ಮದ ರಕ್ಷಣೆಯನ್ನು ಮಾಡಿ. ದ್ವಾಪರಯುಗದಲ್ಲಿ ಭಗವಾನ್‌ ಶ್ರೀ ಕೃಷ್ಣನು ಪಾಂಡವರ ಮಾಧ್ಯಮದಿಂದ ಧರ್ಮಸಂಸ್ಥಾಪನೆಯನ್ನು ಮಾಡಿದ. ಛತ್ರಪತಿ ಶಿವಾಜಿ ಮಹಾರಾಜರು ತಮ್ಮ ಗುರುಗಳಾದ ಸಮರ್ಥ ರಾಮದಾಸ ಸ್ವಾಮಿಗಳ ಮಾರ್ಗದರ್ಶನದಲ್ಲಿ ಮಾವಳೆಯರ ಮಾಧ್ಯಮದಿಂದ ಹಿಂದೂ ಸ್ವರಾಜ್ಯದ ಸ್ಥಾಪನೆಯನ್ನು ಮಾಡಿದರು. ಅದೇ ರೀತಿ ನಾವು ಗುರುಗಳ ಮಾರ್ಗದರ್ಶನದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆ ಮಾಡಲು
ಸಿದ್ಧರಾಗಬೇಕಾಗಿದೆ. ಕೇವಲ ಹಿಂದೂ ಧರ್ಮದಲ್ಲಿ ಮಾತ್ರ ಮೋಕ್ಷದ ತನಕದ ಉಲ್ಲೇಖ ಇದೆ. ಆದ್ದರಿಂದ ಅತ್ಯಂತ ಶ್ರೇಷ್ಠವಾದ ಹಿಂದೂ ಧರ್ಮದ ಮಾರ್ಗದರ್ಶನಕ್ಕನುಸಾರವಾಗಿ ಸಾಧನೆ ಮಾಡಬೇಕಿದೆ.

ದುಷ್ಟಪ್ರವೃತ್ತಿಗಳ ವಿರುದ್ಧ ಹೋರಾಡಿ
ಇಡೀ ವಿಶ್ವದಲ್ಲಿ ದೇವರಕೋಣೆ, ಮಾತೆ, ಪುಣ್ಯಭೂಮಿ, ವಿಶ್ವಗುರು ಎಂದು ಕರೆಸಿಕೊಳ್ಳುವಂತಹ ಅರ್ಹತೆಯಿರುವ ದೇಶ ನಮ್ಮ ಭಾರತ ಮಾತ್ರ. ಆದರೆ ಹಿಂದೂ ಧರ್ಮದ ಮೇಲೆ ನಿರಂತರವಾಗಿ ಧರ್ಮದ್ರೋಹಿಗಳಿಂದ ಆಘಾತಗಳಾಗುತ್ತಿವೆ. ಸೆಕ್ಯುಲರ್‌ ವ್ಯವಸ್ಥೆಯಿಂದಾಗಿ ಹಿಂದೂಗಳಿಗೆ ಆಡಳಿತ ವ್ಯವಸ್ಥೆಯಲ್ಲಿ ವಂಚನೆಯಾಗುತ್ತಿದೆ. ದೇಶದ ಕಾನೂನು, ರಕ್ಷಣಾ, ಶಿಕ್ಷಣ ಕ್ಷೇತ್ರ ಹೀಗೆ ಎಲ್ಲೆಡೆ ಭ್ರಷ್ಟಾಚಾರ ಮಿತಿಮೀರಿದೆ. ನಾವು ಈ ಸಾಮಾಜಿಕ ದುಷ್ಟಪ್ರವೃತ್ತಿಗಳ ವಿರುದ್ಧ ಕಾನೂನು ಹೋರಾಟ ನಡೆಸಬೇಕಿದೆ ಎಂದು ಹೇಳಿದರು.

ಬೆಳ್ತಂಗಡಿಯ ಜಯರಾಜ್‌ ಸಾಲ್ಯಾನ್‌ ಸಭೆಯನ್ನು ಉದ್ಘಾಟಿಸಿದರು. ಈ ವೇಳೆ ವೇ| ಮೂ| ಪ್ರಕಾಶ್‌ ಡಿ. ಸುಬ್ರಹ್ಮಣ್ಯ ಅವರು ವೇದಮಂತ್ರ ಪಠಿಸಿದರು. ಹಿಂದೂ ಜನಜಾಗೃತಿ ಸಮಿತಿಯ ನಂದಕುಮಾರ್‌ ಪ್ರಭು ಶಂಖನಾದ ಮೊಳಗಿಸಿದರು. ಬೆಳ್ತಂಗಡಿ ತಾಲೂಕಿನ ಕಾನರ್ಪ ಚಿರಂಜೀವಿ ಯುವಕ ಮಂಡಲದ ಸಂಸ್ಥಾಪಕಾಧ್ಯಕ್ಷ ಜಯರಾಜ್‌ ಸಾಲ್ಯಾನ್‌ ಉಪಸ್ಥಿತರಿದ್ದರು. ಹಿಂದೂ ಜನಜಾಗೃತಿ ಸಮಿತಿಯ ಧರ್ಮಪಾಲ ಗೌಡ ಸಮಿತಿಯ ಪರಿಚಯ ಮಾಡಿದರು. ಸಭೆಯ ಸೂತ್ರಸಂಚಾಲನೆಯನ್ನು ಚೇತನಾ ನಿರ್ವಹಿಸಿದರು.

ಸಭಾಗೃಹದಲ್ಲಿ ಧಾರ್ಮಿಕ ಆಚರಣೆಗಳ ಮೌಲ್ಯವನ್ನು ಸಮಾಜಕ್ಕೆ ತಿಳಿಸಿಕೊಡುವ ಸನಾತನದ ಗ್ರಂಥಗಳ ಮಾರಾಟ ಮತ್ತು ಪ್ರದರ್ಶನ, ಧರ್ಮಶಿಕ್ಷಣವನ್ನು ತಿಳಿಸಿಕೊಡುವ ಫ್ಲೆಕ್ಸ್‌ ಪ್ರದರ್ಶನ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.