ರಾಮಕುಂಜ: ಪದವಿ ಕಾಲೇಜಿನಲ್ಲಿ ಮಾಧ್ಯಮ ಸಂವಾದ


Team Udayavani, Dec 21, 2017, 4:43 PM IST

21-Dec-17.jpg

ಕಡಬ: ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ಹಿಂದೆ ಚಾಲ್ತಿಯಲ್ಲಿದ್ದ ಅಭ್ಯುದಯ ಪತ್ರಿಕೋದ್ಯಮ ಇಂದು ತೆರೆಮರೆಗೆ ಸರಿದಿದೆ. ಬಹುತೇಕ ಸುದ್ದಿ ಮಾಧ್ಯಮ ಸಂಸ್ಥೆಗಳು ರಾಜಕೀಯ ನೇತಾರರ ಕೈಯಲ್ಲಿದ್ದು, ನಿರ್ದಿಷ್ಟ ವಿಚಾರಗಳಿಗೆ ಅಂಟಿಕೊಂಡಿರುವುದು ಮಾಧ್ಯಮ ಕ್ಷೇತ್ರದ ದುರಂತ ಎಂದು ಅಂಕಣಕಾರ, ವಿಮರ್ಶಕ ಜೋಗಿ ಬೆಂಗಳೂರು (ಗಿರೀಶ್‌ ರಾವ್‌) ಅವರು ಅಭಿಪ್ರಾಯಪಟ್ಟರು. ಅವರು ರಾಮಕುಂಜದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳ ಜತೆ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.

ಮಾಧ್ಯಮ ಕ್ಷೇತ್ರ ಎನ್ನುವುದು ಒಂದು ಪಕ್ಷ ಅಥವಾ ಇಸಂಗೆ ಸೀಮಿತವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಾಧ್ಯಮ ಕ್ಷೇತ್ರದಿಂದ ಏನನ್ನು ನಿರೀಕ್ಷಿಸಬಹುದು ಎನ್ನುವ ಪ್ರಶ್ನೆಗೆ ಉತ್ತರಿಸಿದ ಜೋಗಿ, ಇಂದು ಅಭ್ಯುದಯ ಪತ್ರಿಕೋದ್ಯಮ ಎನ್ನುವುದು ಮರೆಯಾಗಿದೆ. ಅದರ ಅಗತ್ಯವೂ ಸಮಾಜಕ್ಕಿಲ್ಲ. ಆದರೂ ಆ ಕೆಲಸವನ್ನು ಇಂದು ಸಾಮಾಜಿಕ ಜಾಲತಾಣಗಳು ತಮ್ಮದೇ ಆದ ರೀತಿಯಲ್ಲಿ ನಿರ್ವಹಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

ಓದುವ ಹವ್ಯಾಸ ಬೆಳೆಸಿಕೊಳ್ಳಿ
ಮೊಬೈಲ್‌ ಹಾಗೂ ಸಾಮಾಜಿಕ ಜಾಲ ತಾಣಗಳಿಂದ ನಮಗೆ ಮಾಹಿತಿಗಳು ಲಭಿಸಬಹುದೇ ಹೊರತು ನಮ್ಮ ಜ್ಞಾನ ವೃದ್ಧಿಸಲು ಸಾಧ್ಯವಿಲ್ಲ. ಆದಕ್ಕಾಗಿ ನಾವು ಪುಸ್ತಕಗಳನ್ನು ಓದುವುದನ್ನು ದಿನದ ಭಾಗವಾಗಿ ಅಳವಡಿಸಿಕೊಳ್ಳಬೇಕು
ಎಂದರು. ನಾವು ಯಾವುದೇ ಪರಿಸ್ಥಿತಿಯಲ್ಲಿ ಕೂಡಾ ಜೀವನೋತ್ಸಾಹವನ್ನು ಕಳೆದುಕೊಳ್ಳಬಾರದು, ಬದುಕನ್ನು
ಅನುಭವಿಸಬೇಕು ಎಂದು ಕಿವಿಮಾತು ಹೇಳಿದರು.

ನಿವೃತ್ತ ಬ್ಯಾಂಕ್‌ ಪ್ರಬಂಧಕ ಮಹಮ್ಮದ್‌ ಕುಂಞಿ ಕಡಬ, ಪತ್ರಕರ್ತ ಗೋಪಾಲ ಕೃಷ್ಣ ಕುಂಟಿನಿ, ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್‌., ಪ್ರಾಂಶುಪಾಲ ಡಾ| ಸಂಕೀರ್ತ್‌ ಹೆಬ್ಟಾರ್‌, ಸಾಮಾಜಿಕ ಕಾರ್ಯಕರ್ತ ಮಹೇಂದ್ರವರ್ಮ, ನಿವೃತ್ತ ತಹಶಿಲ್ದಾರ್‌ ಮೋಹನ್‌ ರಾವ್‌ ಆತೂರು ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕ ಮಧೂರು ಮೋಹನ ಸ್ವಾಗತಿಸಿ, ಕೃಷ್ಣಮೂರ್ತಿ ವಂದಿಸಿದರು. ಸುಕ್ಷಿತಾ ಶೆಟ್ಟಿ ನಿರೂಪಿಸಿದರು.

ಉದಯವಾಣಿ ವರದಿಗಳ ಉಲ್ಲೇಖ
ಅಭ್ಯುದಯ ಪತ್ರಿಕೋದ್ಯಮದ ಕುರಿತು ಮಾತಾನಾಡಿದ ಜೋಗಿ ಅವರು ಸುಮಾರು 35 ವರ್ಷಗಳ ಹಿಂದೆ ಕುಗ್ರಾಮ ಗುರುತಿಸಿ ಎನ್ನುವ ಪತ್ರಿಕೋದ್ಯಮದ ಕ್ರಾಂತಿಕಾರಕ ವರದಿಗಳ ಮೂಲಕ ಉದಯವಾಣಿ ದೈನಿಕವು ಬೆಳ್ತಂಗಡಿಯ ದಿಡುಪೆ, ಪುತ್ತೂರಿನ ಆಲಂತಾಯ, ಸುಳ್ಯದ ತೊಡಿಕಾನ, ಬಂಟ್ವಾಳದ ಮಾಣಿಲದಂತಹ ಅತ್ಯಂತ ಹಿಂದುಳಿದ ಗ್ರಾಮಗಳ ಅಭಿವೃದ್ಧಿಗೆ ಕಾರಣವಾಗಿರು ದನ್ನು ವಿಶೇಷವಾಗಿ ಉಲ್ಲೇಖಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.