ಧರ್ಮಸ್ಥಳ: ಮುನಿ ಸಂಘ ಪುರ ಪ್ರವೇಶ
Team Udayavani, Jan 6, 2018, 12:36 PM IST
ಬೆಳ್ತಂಗಡಿ: ಧರ್ಮಸ್ಥಳಕ್ಕೆ ಗುರುವಾರ ಸಂಜೆ ಮುನಿ ಸಂಘ ಪುರ ಪ್ರವೇಶ ಮಾಡಿದಾಗ ಪ್ರವೇಶ ದ್ವಾರದ ಬಳಿ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ ಕೋರಲಾಯಿತು. ಮುನಿ ಸಂಘದಲ್ಲಿ ಆಚಾರ್ಯ 108 ಶ್ರೀ ಪುಷ್ಪದಂತ ಸಾಗರ ಮುನಿ ಮಹಾರಾಜರು, ಶ್ರೀ 108 ಮುನಿಶ್ರೀ ಪ್ರಮುಖ್ ಸಾಗರ ಮುನಿ ಮಹಾರಾಜರು, 108 ಶ್ರೀ ಮುನಿಶ್ರೀ ಪ್ರಸಂಗ ಸಾಗರ ಮಹಾರಾಜರು, ಶ್ರೀ ಅಮಿತಸೇನ್ ಮತ್ತು ಶ್ರೀ ವೃಷಭಸೇನ್ ಇದ್ದರು.
ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ದೇವರ ದರ್ಶನ ಮಾಡಿದ ಬಳಿಕ ಆಚಾರ್ಯ 108 ಶ್ರೀ ಪುಷ್ಪದಂತ ಸಾಗರ ಮುನಿ ಮಹಾರಾಜರು ಮಂಗಳ ಪ್ರವಚನ ನೀಡಿದರು. ಬಸದಿಯಲ್ಲಿ ವಿಶೇಷ ದೈವಿಕ ಶಕ್ತಿ ಜಾಗೃತವಾಗಿದ್ದು, ದೇವರ ದರ್ಶನದಿಂದ ತಮಗೆ ಅತೀವ ಆನಂದವಾಗಿದೆ ಎಂದು ಮುನಿಗಳು ಹೇಳಿದರು.
ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಧರ್ಮಸ್ಥಳದ ಸೇವಾ ಕಾರ್ಯಗಳು, ಶಿಸ್ತು, ಸ್ವತ್ಛತೆ ಮತ್ತು ದಕ್ಷತೆ ವಿಶ್ವಮಾನ್ಯವಾಗಿದೆ. ಹೆಗ್ಗಡೆ ಅವರು ಕರ್ನಾಟಕದಲ್ಲಿಯೇ ವಿಶಿಷ್ಟ ವ್ಯಕ್ತಿತ್ವ ಹೊಂದಿದ ಆದರ್ಶ ನೇತಾರರಾಗಿದ್ದಾರೆ ಎಂದರು. ಮುನಿ ಸಂಘವನ್ನು ಸ್ವಾಗತಿಸಿದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಮುನಿಗಳ ದರ್ಶನದಿಂದ ಎಲ್ಲರಿಗೂ ಪುಣ್ಯ ಸಂಚಯವಾಗಿದೆ. ಮುನಿ ಸಂಘದ ಸೇವೆಗೆ ನಾವೆಲ್ಲರೂ ಉತ್ಸುಕರಾಗಿದ್ದು, ಇಂದು ಐತಿಹಾಸಿಕ ದಿನವಾಗಿದೆ ಎಂದರು.
ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇನ್ದ್ರ ಕುಮಾರ್, ಸುಪ್ರಿಯಾ ಹರ್ಷೇನ್ದ್ರ ಕುಮಾರ್, ಪ್ರೊ| ಎಸ್. ಪ್ರಭಾಕರ್ ಮತ್ತು ಡಾ| ಬಿ. ಯಶೋವರ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ