ಆಡಳಿತ ಬಲವರ್ಧನೆಗೆ ಎಸ್ಪಿ ವರ್ಗ: ರೈ
Team Udayavani, Jan 23, 2018, 9:11 AM IST
ಸುಳ್ಯ: ಬೆಳಗಾವಿಯಲ್ಲಿ ಮೂರು ವರ್ಷ ದಕ್ಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ| ಬಿ.ಆರ್. ರವಿಕಾಂತೇ ಗೌಡ ಅವರು ಎಸ್ಪಿ ಆಗಿ ಜಿಲ್ಲೆಗೆ ಬರುತ್ತಾರೆ. ಜಿಲ್ಲೆಯ ಆಡಳಿತ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಸರಕಾರ ಈ ಬದಲಾವಣೆ ಮಾಡಿರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು.
ಪತ್ರಕರ್ತರ ಜತೆ ಮಾತನಾಡಿದ ಅವರು, ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ ಹಿಂದೆ ಪಿತೂರಿ ಇಲ್ಲ. ಜಿಲ್ಲೆಯಲ್ಲಿ ಸಾಮರಸ್ಯಕ್ಕೆ ಪೂರಕವಾದ ಕ್ರಮ ಕೈಗೊಳ್ಳುವುದು ನಮ್ಮ ಜವಾಬ್ದಾರಿ. ಇಲ್ಲಿ ನಡೆದ ಮತೀಯ ಸಂಘರ್ಷಗಳಲ್ಲಿ ಅಮಾಯಕರ ಹತ್ಯೆ ಆಗಿದೆ. ಹತ್ಯೆ ಆರೋಪಿಗಳಲ್ಲಿ ಕಾಂಗ್ರೆಸ್ಸಿಗರು ಇಲ್ಲ; ಬಿಜೆಪಿ ಮತ್ತು ಎಸ್ಡಿಪಿಐಯವರು ಮಾತ್ರ ಇದ್ದಾರೆ ಎಂದು ಹೇಳಿದರು.
ಸೋಲಿನ ಭಯ ಇದ್ದೇ ಪಾದಯಾತ್ರೆ: ಬಂಟ್ವಾಳದಲ್ಲಿ ರೈ ಸೋಲುತ್ತಾರೆ ಎಂದು ಬಿಜೆಪಿ ಹೇಳುತ್ತದೆ. ನನ್ನ ಸೋಲಿನ ಖಾತರಿ ಇದ್ದರೆ ಅವರ್ಯಾಕೆ ನನ್ನ ಕ್ಷೇತ್ರದಲ್ಲಿ ಪಾದಯಾತ್ರೆ ಮಾಡಬೇಕು? ಬಿಜೆಪಿಗೆ ಗೆಲುವು ನಿಶ್ಚಿತ ಎಂದಿದ್ದರೆ ಮನೆಯಲ್ಲಿಯೇ ಕೂರಬೇಕಿತ್ತು. ಆದರೆ ಬಿಜೆಪಿಗೆ ಎಂಟು ಕ್ಷೇತ್ರಗಳಲ್ಲಿಯೂ ಸೋಲು ಖಚಿತವಾಗಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಗೆ ಹೊರಟಿದ್ದಾರೆ. ಇವರ ನಾಟಕವನ್ನು ಜನರು ಒಪ್ಪುವುದಿಲ್ಲ ಎಂದು ಸಚಿವರು ಹೇಳಿದರು.
ಹೈಕಮಾಂಡ್ ತೀರ್ಮಾನ: ಜಿಲ್ಲೆಯ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಸಿದ್ದರಾಮಯ್ಯ ಘೋಷಿಸಿದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ರೈ, ಮುಖ್ಯಮಂತ್ರಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಜತೆಗೂಡಿ ಹೈಕಮಾಂಡ್ ತೆಗೆದುಕೊಳ್ಳತ್ತದೆ ಎಂದರು.
ಸಮೀಕ್ಷೆ ನಡೆದಿಲ್ಲ: ಜಿಲ್ಲೆಯ 4 ಸ್ಥಾನಗಳಲ್ಲಿ ಮಾತ್ರ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ಆಂತರಿಕ ಸಮೀಕ್ಷೆ ಫಲಿತಾಂಶದ ಬಗ್ಗೆ ಉತ್ತರಿಸಿದ ರೈ, ಆಂತರಿಕ ಸಮೀಕ್ಷೆ ನಡೆದೇ ಇಲ್ಲ, ರಾಜ್ಯಾಧ್ಯಕ್ಷರೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…