ರಸ್ತೆ ತುಂಬ ಜಲ್ಲಿ; ಸಂಚಾರಕ್ಕೆ ಸಾರ್ವಜನಿಕರ ಪರದಾಟ


Team Udayavani, Feb 23, 2018, 1:33 PM IST

23-Feb-11.jpg

ಆಲಂಕಾರು: ರಸ್ತೆ ದುರಸ್ತಿ ಮಾಡುವ ಕಾರ್ಯದಲ್ಲಿ ಗುತ್ತಿಗೆದಾರ ವಿಳಂಬ ನೀತಿ ಅನುಸರಿಸಿದ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ಗೋಳಿತ್ತಡಿಯಿಂದ ಕೊಯಿಲ ಗ್ರಾಮದ ಏಣಿತಡ್ಕಕ್ಕೆ ಸಾಗುವ ರಸ್ತೆಯಲ್ಲಿ ಗೋಳಿತ್ತಡಿ – ನೆಲ್ಯೊಟ್ಟು ನಡುವಿನ ರಸ್ತೆ ಅಭಿವೃದ್ಧಿ ನಿಧಾನವಾಗಿ ಸಾಗುತ್ತಿದ್ದು, ಅಸಮರ್ಪಕ ನಿರ್ವಹಣೆಯಿಂದ ಸ್ಥಳೀಯರ ಪರದಾಟ ಹೆಚ್ಚಿದೆ.

ಎರಡು ತಿಂಗಳಿನಿಂದ ಕಾಮಗಾರಿ ನಡೆಯುತ್ತಿದ್ದು, ಜಲ್ಲಿ ಹಾಕಿ ವಾಹನ ಸಂಚಾರಕ್ಕೆ ಕಷ್ಟ ಉಂಟುಮಾಡಿದ್ದಾರೆ. ಈ ರಸ್ತೆಯಲ್ಲಿ ನಡೆದಾಡುವ ಜನರೂ ಜೀವ ಕೈಯಲ್ಲಿ ಹಿಡಿದು ಸಾಗಬೇಕಾಗಿದೆ. ರಾಜ್ಯ ಸರಕಾರದ 49 ಲಕ್ಷ ರೂ. ಅನುದಾದಲ್ಲಿ 1.47 ಕಿ.ಮೀ. ರಸ್ತೆ ಮರು ನಿರ್ಮಾಣವಾಗುತ್ತಿದೆ. ಎರಡು ತಿಂಗಳಿಂದ ಇಲ್ಲಿನ ಜನರು ಧೂಳು ತಿನ್ನುತ್ತಾ ಬದುಕಬೇಕಾಗಿದೆ. ರಸ್ತೆಗೆ ಹರಡಿದ ಜಲ್ಲಿಯಿಂದಾಗಿ ಸಂಚಾರಕ್ಕೂ ಹರಸಾಹಸ ಮಾಡಬೇಕಾಗಿದೆ. ಜಲ್ಲಿಯನ್ನು ಸಕಾಲದಲ್ಲಿ ರೋಲ್‌ ಮಾಡಿ, ಸಮತಟ್ಟುಗೊಳಿಸದೆ ಇರುವ ಕಾರಣ ಕಲ್ಲುಗಳು ಕಿತ್ತು ಬಂದು ರಸ್ತೆ ಬದಿಯ ತನಕ ಆವರಿಸಿವೆ. ವಾಹನ ಸಂಚಾರ ಮಾಡುವವರಿಗೆ ಹಾಗೂ ಪಾದಚಾರಿಗಳಿಗೂ ಸಮಸ್ಯೆಯಾಗುತ್ತಿದೆ.

ಬೈಕ್‌ ಸವಾರರಿಗೆ ಸಂಕಷ್ಟ
ಘನ ವಾಹನಗಳು ಓಡಾಡುವಾಗ ಚಕ್ರಗಳಿಗೆ ಸಿಲುಕಿ ಕಲ್ಲುಗಳು ಸಿಡಿಯುತ್ತಿದ್ದು, ಸಣ್ಣಪುಟ್ಟ ವಾಹನಗಳ ಸವಾರರು ಹಾಗೂ ಪಾದಚಾರಿಗಳು ಆತಂಕದಿಂದಲೇ ಓಡಾಡುವಂತಾಗಿದೆ. ದ್ವಿಚಕ್ರ ವಾಹನಗಳು ರಸ್ತೆ ಮಧ್ಯೆ ಸಂಚರಿಸುವ ಪರಿಸ್ಥಿತಿ ಇಲ್ಲ. ರಸ್ತೆ ಬದಿಯಲ್ಲಾದರೂ ವಾಹನ ಒಯ್ಯೋಣ ಎಂದರೆ ಜಲ್ಲಿ ಕಲ್ಲುಗಳು ಅಲ್ಲೂ ಹರಡಿಕೊಂಡು ಅಪಾಯವನ್ನು ಆಹ್ವಾನಿಸುತ್ತಿವೆ. ರಸ್ತೆಯಲ್ಲಿ ಬರುವ ನೆಲ್ಯೊಟ್ಟು ಎಂಬಲ್ಲಿ ಬೈಕ್‌ ಸವಾರರು ಅತ್ತ ದರಿ ಇತ್ತ ಪುಲಿ ಎನ್ನುವ ರೀತಿಯಲ್ಲಿ ಸರ್ಕಸ್‌ ಮಾಡಬೇಕಾಗಿದೆ. ರಸ್ತೆ ಬದಿಯಲ್ಲಿ ಸ್ವಲ್ಪ ಮಾತ್ರ ಜಾಗವಿದೆ, ಅದರಲ್ಲಿಯೂ ಜಲ್ಲಿಕಲ್ಲು ಹರಡಿದೆ. ಸ್ವಲ್ಪ ಯಾಮಾರಿದರೂ ಒಂದೋ ರಸ್ತೆಯಲ್ಲಿ ಹಾಕಿರುವ ಜಲ್ಲಿಯ ಮೇಲೆ ಬೀಳಬೇಕು, ತಪ್ಪಿದರೆ ಚರಂಡಿಗೆ ಉರುಳಬೇಕು. ಅನೇಕ ಬೈಕ್‌ ಸವಾರರು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ವಾಹನಗಳೂ ಹಾಳಾಗುತ್ತಿವೆ.

ಈ ಕುರಿತಾಗಿ ಕಾರ್ಮಿಕರನ್ನು ವಿಚಾರಿಸಿದರೆ, ಎಂಜಿನಿಯರ್‌ ಗಮ್‌ ಹಾಕದೆ ಜಲ್ಲಿ ಹರಡಲು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಕಾಮಗಾರಿ ಮಾಡುತ್ತಿದ್ದೇವೆ ಎಂದು ಉತ್ತರಿಸಿದರು.

ಲಾರಿಗಳ ಸಂಚಾರ ನಿಷೇಧಿಸಿ
ತಮಗಾದ ಕೆಟ್ಟ ಅನುಭವದ ಹಿನ್ನೆಲೆಯಲ್ಲಿ ಸ್ಥಳೀಯ ಆಲಂಕಾರು ಸಿ.ಎ. ಬ್ಯಾಂಕ್‌ ಉದ್ಯೋಗಿ ಸಂತೋಷ ರೈ, ರಸ್ತೆ ಕಾಮಗಾರಿ ನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಮಗಾರಿ ವಿಳಂಬ ನೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಮರಳು ಲಾರಿಗಳ ಸಹಿತ ಘನ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು. ಮರಳು ಲಾರಿಗಳು ನಿರಂತರವಾಗಿ ಓಡಾಡುತ್ತಿದ್ದು, ರಸ್ತೆ ಮಧ್ಯೆ ಇರುವ ಜಲ್ಲಿ ಕಲ್ಲುಗಳು ಬದಿಗೆ ಸಿಡಿದು ಸಮಸ್ಯೆ ಹೆಚ್ಚುತ್ತಿದೆ. ತಕ್ಷಣ ಮರಳು ಲಾರಿಗಳ ಸಂಚಾರವನ್ನು ನಿಷೇಧಿಸಬೇಕು. ರಸ್ತೆ ಕಾಮಗಾರಿ ಮುಗಿಯುವ ತನಕ ಅವುಗಳಿಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

ಅವರ ಆಗ್ರಹಕ್ಕೆ ಸ್ಥಳೀಯರು ದನಿಗೂಡಿಸಿದ್ದಾರೆ. ಕಾಮಗಾರಿಯನ್ನು ಶೀಘ್ರವಾಗಿ ಹಾಗೂ ಗುಣಮಟ್ಟದಿಂದ ನಿರ್ವಹಿಸದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.

15 ದಿನಗಳಲ್ಲಿ ಕಾಮಗಾರಿ ಪೂರ್ಣ
ಇಲ್ಲಿನ ಜನ ಅಕ್ರಮವಾಗಿ ಸಾಗುವ ಮರಳು ಲಾರಿಗಳ ಬಗ್ಗೆ ಮಾತನಾಡುತ್ತಿಲ್ಲ. ನಾವು ಜಲ್ಲಿ ಹಾಕಿದ ತಕ್ಷಣ ಅದರ ಮೇಲೆ ಮರಳು ಲಾರಿಗಳು ಎಗ್ಗಿಲ್ಲದೆ ಓಡಾಡುತ್ತಿವೆ. ಇದರಿಂದಾಗಿ ಸಮಸ್ಯೆ ತಲೆದೋರಿದೆ. ಇನ್ನು 15 ದಿನಳ ಒಳಗಾಗಿ ಡಾಮರು
ಕಾಮಗಾರಿ ಮುಗಿಸಿ ಕೊಡುತ್ತೇವೆ.
– ಸಂದೀಪ್‌,
ಎಂಜಿನಿಯರ್‌

ಸದಾನಂದ

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.