ಮಾತಿನ ಮತ, ಸಂದರ್ಶನ:ಉರಿಮಜಲು ಕೆ. ರಾಮ ಭಟ್‌,ಮಾಜಿ ಶಾಸಕರು, ಪುತ್ತೂರು


Team Udayavani, Mar 3, 2018, 2:11 PM IST

3-March-11.jpg

ನಿಮ್ಮ ರಾಜಕೀಯ ಪಯಣ ಹೇಗೆ ?
ಕಾಂಗ್ರೆಸ್‌ಗೆ ಎದುರಾಗಿ ಜನಸಂಘ ಬೆಳೆಯುತ್ತಿದ್ದ ಕಾಲ. ಜನಸಂಘದಿಂದ 1957, 62, 67, 72ರಲ್ಲಿ ಸ್ಪರ್ಧಿಸಿ ಸೋತಿದ್ದೇನೆ. ಜನತಾ ಪಾರ್ಟಿಯಿಂದ ಪ್ರಥಮ ಬಾರಿಗೆ ಕಾಂಗ್ರೆಸೇತರ ಶಾಸಕನಾಗಿ 1978 ಮತ್ತು 1983ರಲ್ಲಿ ಗೆದ್ದಿದ್ದೇನೆ. 1984ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತು, 1985 ರಲ್ಲಿ ವಿಧಾನಸಭೆಗೆ ಸ್ಪರ್ಧಿಸಿ ಸೋತಿದ್ದೇನೆ. ಬಳಿಕ ವಿರಾಮ ಪಡೆದು 1999ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೇನೆ.

ರಾಜಕೀಯ ಸವಾಲು ಮತ್ತು ಬೆಳವಣಿಗೆ ಹೇಗಿತ್ತು?
ಆ ಕಾಲದಲ್ಲಿ ರಾಷ್ಟ್ರೀಯತೆಯ ಪರಿಕಲ್ಪನೆಯ ಕಾಂಗ್ರೆಸೇತರ ಪಕ್ಷವನ್ನು ಬೆಳೆಸುವ ಪ್ರಮುಖ ಉದ್ದೇಶ ದಿಂದಲೇ ಅಷ್ಟೂ ಬಾರಿ ಸ್ಪರ್ಧಿಸಿದ್ದೆ. ಮಂಗಳೂರಿನಲ್ಲಿ ಪ್ರಬಲವಾಗುತ್ತಿದ್ದ ಕಮ್ಯೂನಿಸ್ಟ್‌ ಪಕ್ಷ, ಭೂ ಸುಧಾರಣೆಯ ಪರ -ವಿರೋಧ, ಜನಸಂಘವು ಬ್ರಾಹ್ಮಣರ ಪಕ್ಷ ಎನ್ನುವ ವಿರೋಧದ ನಡುವೆ ರಾಜಕೀಯ ಅಸ್ತಿತ್ವ, ಬೆಳವಣಿಗೆ ಸವಾಲಾಗಿತ್ತು. ಆಗ ಜನರ ಹೃದಯ ಪ್ರವೇಶಿಸಲು ಸಾಕಷ್ಟು ಪ್ರಯತ್ನ ನಡೆಸಬೇಕಿತ್ತು. ನಮ್ಮಂಥವರು ಹಳ್ಳಿಹಳ್ಳಿಗಳಲ್ಲಿ ನಡೆಸಿದ ಯತ್ನ ಇಂದು ಫಲ ನೀಡುತ್ತಿದೆ.

ಪ್ರಚಾರದ ವೈಖರಿ ಹೇಗಿತ್ತು ?
ಆಗಲೂ 10-15 ಸಾವಿರ ರೂ. ಖರ್ಚಾಗುತ್ತಿತ್ತು. ಸ್ಪರ್ಧಿಸುವ ಸಂದರ್ಭ ಹಿತಚಿಂತಕರೇ ಸಹಾಯ ಮಾಡುತ್ತಿದ್ದರು. ನನ್ನ ಕಾರನ್ನು ಪ್ರಚಾರಕ್ಕೆ, ಜನರ ಬಳಿಗೆ ಹೋಗಲು ಬಳಸುತ್ತಿದ್ದೆ. ಬಹಿರಂಗ ಸಾರ್ವಜನಿಕ ಸಭೆಯೂ ನಡೆಯುತ್ತಿತ್ತು.

ಆಗ ಈಗಕ್ಕೆ ಇರುವ ವ್ಯತ್ಯಾಸವೇನು ?
ಆಗ ರಾಜಕೀಯಕ್ಕೆ ಮತ್ತು ಸ್ಪರ್ಧಿಸುವವರಲ್ಲಿ ಒಂದು ಸಿದ್ಧಾಂತ ಇತ್ತು. ಜನಸಂಘ, ಜನತಾ ಪಕ್ಷ ಹಾಗೂ ಬಿಜೆಪಿ ಆ ನೆಲೆಯಲ್ಲಿ ಕಾರ್ಯನಿರ್ವಹಿಸಿದ್ದರಿಂದ ಮತ್ತು ಅಂದು ಅನೇಕ ಮುಖಂಡರು ತೋರಿದ ಶ್ರಮ ಇಂದು ಗೆಲುವಿನ ರೂಪದಲ್ಲಿದೆ. ಇಂದು ಒಟ್ಟು ರಾಜಕೀಯ ವ್ಯವಸ್ಥೆಯಲ್ಲಿ ಸ್ವಹಿತಾಸಕ್ತಿಗೆ ಹೆಚ್ಚಿನ ಪ್ರಾಮುಖ್ಯ ಇದೆ. ಇಡೀ ಸಮಾಜದಲ್ಲಿ ಮೌಲ್ಯಾಧಾರಿತ ರಾಜಕಾರಣ ಕಡಿಮೆಯಾಗುತ್ತಿದೆ.

ತಮ್ಮ ಅವಧಿಯಲ್ಲಿನ ಪ್ರಮುಖ ಅಭಿವೃದ್ಧಿ ಕಾರ್ಯ ?
ನಾನು ಶಾಸಕನಾಗಿದ್ದ ಸಮಯದಲ್ಲಿ ಸರಕಾರದಿಂದ ಸಾಕಷ್ಟು ಫಂಡ್‌ ಸಿಗುತ್ತಿರಲಿಲ್ಲ. ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಅನೇಕ ಕಾಮಗಾರಿಗಳನ್ನು ನಡೆಸಿದ್ದೇನೆ. ಪುತ್ತೂರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಇದರಲ್ಲಿ ಪ್ರಮುಖವಾದುದು.

ರಾಜಕೀಯ ಜೀವನದ ಬಗ್ಗೆ ತೃಪ್ತಿ ಇದೆಯೇ ?
ರಾಜಕೀಯದ ಎಲ್ಲ ಪಟ್ಟುಗಳಲ್ಲಿ ತೊಡಗಿಸಿಕೊಂಡು ನೈಜ ಜಾತ್ಯತೀತ ನೆಲೆಯಲ್ಲಿ ಕೆಲಸ ಮಾಡಿದ, ರಾಷ್ಟ್ರೀಯತೆಯ ಪರಿಕಲ್ಪನೆಗಾಗಿ ಹೋರಾಟ ನಡೆಸಿದ ಖುಷಿ ಇದೆ. ಈ ನಿಟ್ಟಿನಲ್ಲಿ ಹಂತ ಹಂತವಾಗಿ ಯಶಸ್ಸು ಪಡೆದ ತೃಪ್ತಿ ಇದೆ.

„ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.