ಪುರಾತನ ದೇವಾಲಯಗಳ ಜೀರ್ಣೋದ್ಧಾರ ಪುಣ್ಯದ ಕೆಲಸ: ಮಾಣಿಲ ಶ್ರೀ


Team Udayavani, Mar 20, 2018, 9:00 PM IST

Kaavu-19-3.jpg

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಕಾವುನಲ್ಲಿ ನವೀಕರಣಗೊಂಡಿರುವ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ರವಿವಾರ ಆರಂಭವಾಯಿತು. ಬೆಳಗ್ಗೆ ತ್ರಿಗುಣಾತ್ಮಿಕ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಪುರಾತನ ದೇವಾಲಯಗಳ ಜೀರ್ಣೋದ್ಧಾರ ಕಾರ್ಯ ಪುಣ್ಯದ ಕೆಲಸ. ದೇವಸ್ಥಾನ, ದೈವಸ್ಥಾನ, ಭಜನ ಮಂದಿರಗಳು ಬದುಕಿನ ಶಕ್ತಿ ಕೇಂದ್ರಗಳಾಗಿವೆ. ಬದುಕಿನ ರಕ್ಷಣೆ, ಸಾರ್ಥಕತೆಗಾಗಿ ಹಿರಿಯರು ಗ್ರಾಮ, ಸೀಮೆ ದೇವಸ್ಥಾನಗಳನ್ನು ಹುಟ್ಟುಹಾಕಿದ್ದಾರೆ ಎಂದರು. 

ಮನಸ್ಸಿನ ಸ್ವಚ್ಛತೆ ಅಗತ್ಯ
ಸ್ವಾಮೀಜಿಗಳು ಹಿಂದೂ ಸಮಾಜದ ಪ್ರತಿ ಪಾದಕರು. ಅವರಲ್ಲಿ ಭೇದ-ಭಾವವಿಲ್ಲ. ಮಠಾಧಿಪತಿಗಳಿಗೆ ಗೌರವ ಕೊಡುವಲ್ಲಿ ಜಾತಿ, ಪೈಪೋಟಿ ಬೇಡ. ಹಿಂದೂ ಧರ್ಮಕ್ಕೆ ಎಂದೂ ನಾಶ ಇಲ್ಲ. ಆದರೆ ಆಚಾರ, ವಿಚಾರ, ಬದುಕಿನ ಬಗ್ಗೆ ಅವಲೋಕನ ಮಾಡುವ ಆವಶ್ಯಕತೆ ಇದೆ ಎಂದು ಹೇಳಿದ ಸ್ವಾಮೀಜಿ, ಮನಸ್ಸಿನ ಸ್ವಚ್ಛತೆಯನ್ನು ಧರ್ಮಕ್ಷೇತ್ರಗಳು, ಮಠ ಮಂದಿರಗಳು ಮಾಡಬೇಕಾಗಿದೆ ಎಂದು ಹೇಳಿದರು.

ಆರೆಸ್ಸೆಸ್‌ ಉಜಿರೆ ಸಂಘಚಾಲಕ ಕೃಷ್ಣ ಭಟ್‌ ಕೊಕ್ಕಡ ಮಾತನಾಡಿ, ಮನೆಗಳನ್ನು ಜೋಡಿಸುವ ಶಕ್ತಿ ಹಿಂದೂ ಪರಂಪರೆಯಲ್ಲಿದೆ. ಊರಿನ ಜನ ತಾಯಿ ಮನೆ ಎಂಬ ದೃಷ್ಟಿಯಲ್ಲಿ ಪ್ರತಿನಿತ್ಯವೂ ಜೀರ್ಣೋದ್ಧಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಈ ಮೂಲಕ ಎಲ್ಲರೂ ದೇವಿಯ ಅನುಗ್ರಹಕ್ಕೆ ಪಾತ್ರರಾಗಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜೀರ್ಣೋದ್ಧಾರ ಸಮಿತಿ ಟ್ರಸ್ಟ್‌ನ ಪ್ರಧಾನ ಸಲಹೆಗಾರ ಎನ್‌. ಈಶ್ವರ ಭಟ್‌ ಕೊಡೆಂಕಿರಿ ಮಾತನಾಡಿ, ದೇವಸ್ಥಾನದ ಪಾವಿತ್ರ್ಯ ಕಾಪಾಡುವುದು ಪ್ರತಿಯೊಬ್ಬ ಭಕ್ತನ ಕರ್ತವ್ಯ. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕೆಂದು ಹೇಳಿದರು.

ಶಿಲಾಮಯ ದೇಗುಲ 
ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ| ಗಣೇಶ್‌ ಪ್ರಸಾದ್‌ ನೆಕ್ಕರ್ಲ, 2015ರ ಜೂನ್‌ನಲ್ಲಿ ಅಷ್ಟಮಂಗಲ ಪ್ರಶ್ನೆಯಿಟ್ಟು ಬಳಿಕ ಜೀರ್ಣೋದ್ಧಾರ ಕೆಲಸ ನಡೆದಿದೆ. ದೇವಾಲಯಕ್ಕೆ ಕೆ. ಈಶ್ವರ ಭಟ್‌ ಕೊಡೆಂಕಿರಿ ಅವರು 3 ಎಕ್ರೆ ಜಾಗ ದಾನವಾಗಿ ನೀಡಿದ್ದಾರೆ. ದೇವಾಲಯದ ವ್ಯಾಪ್ತಿಗೆ 125 ಕುಟುಂಬಗಳು ಬರುತ್ತಿದ್ದು, ಸುಮಾರು 1 ಕೋಟಿ ರೂ.ವೆಚ್ಚದಲ್ಲಿ ಶಿಲಾಮಯ ದೇಗುಲ ನಿರ್ಮಾಣಗೊಳಿಸಲಾಗಿದೆ. ಮಹಿಳೆಯರು 10.50 ಲಕ್ಷ ರೂ. ಧನ ಸಂಗ್ರಹ ಮಾಡಿದ್ದಾರೆ ಎಂದರು.

ಕೊಕ್ಕಡ ಪಂಚಮಿ ಹಿತಾಯುರ್ಧಾಮದ ಡಾ| ಮೋಹನದಾಸ್‌ ಗೌಡ, ದಾಮೋದರ ಶೆಟ್ಟಿ ನೂಜೆ, ಕೌಕ್ರಾಡಿ ಗ್ರಾ.ಪಂ. ಸದಸ್ಯರಾದ ಮಹೇಶ್‌ ಪಿಲತ್ತಿಂಜ, ಜಾನಕಿ, ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ರಾವ್‌, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಜೀರ್ಣೋದ್ಧಾರ ಸಮಿತಿ ಟ್ರಸ್ಟ್‌ನ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ನೂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜನಾರ್ದನ ಮೂಡುಬೈಲು ದಂಪತಿ ಸ್ವಾಮೀಜಿಗೆ ಗೌರವಾರ್ಪಣೆ ಮಾಡಿದರು. 

ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ಶ್ರಮಿಸಿದ 99 ಮಹಿಳೆಯರಿಗೆ ಶಾಲು, ಸ್ಮರಣಿಕೆ ನೀಡಿ ಗೌರವಾರ್ಪಣೆ ಮಾಡಲಾಯಿತು. ಕಾರ್ಯಾಲಯ ಸಮಿತಿ ಸದಸ್ಯೆ ಮಮತಾ ವಂದಿಸಿದರು. ಉಪನ್ಯಾಸಕ ಚೇತನ್‌ ಆನೆಗುಂಡಿ ಅವರು ಕಾರ್ಯಕ್ರಮ ನಿರೂಪಿಸಿದರು. ವೇದಶ್ರೀ, ತನುಜಾ ಪ್ರಾರ್ಥಿಸಿದರು.

ಹೊರೆಕಾಣಿಕೆ ಸಮರ್ಪಣೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು
ಬ್ರಹ್ಮಕಲಶೋತ್ಸವದ ಮೊದಲ ದಿನ ದೇವಾಲಯಕ್ಕೆ ಬೃಹತ್‌ ಪ್ರಮಾಣದಲ್ಲಿ ಹೊರೆಕಾಣಿಕೆ ಸಮರ್ಪಣೆಯಾಗಿದೆ. ಕೌಕ್ರಾಡಿ, ಕೊಕ್ಕಡ, ಪಟ್ರಮೆ,ನಿಡ್ಲೆ, ನೆಲ್ಯಾಡಿ ಗ್ರಾಮಸ್ಥರು ಹೊರೆಕಾಣಿಕೆಗಳನ್ನು ದೇವಾಲಯಕ್ಕೆ ತಂದೊಪ್ಪಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಜೆ ಬ್ರಹ್ಮಶ್ರೀ ಎಡಮನೆ ದಾಮೋದರ ತಂತ್ರಿಗಳು ಅರವತ್‌ ಮತ್ತು ತಂಡದವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ರಾತ್ರಿ ಸಾಮೂಹಿಕ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹ, ಅಂಕುರಾರೋಪಣ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ರಾತ್ರಿಪೂಜೆ ನಡೆಯಿತು. ಭಜನ ಕಾರ್ಯಕ್ರಮದ ಅಂಗವಾಗಿ ಸಂಜೆ ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ಭಜನ ಮಂಡಳಿ, ಬಲ್ಯ ಶ್ರೀ ಉಮಾಮಹೇಶ್ವರಿ ಭಜನ ಮಂಡಳಿ, ನಿಡ್ಲೆ ಶ್ರೀ ಮಹಾಗಣಪತಿ ಭಜನ ಮಂಡಳಿ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಇಂದು ಪರಿವಾರ ದೈವಗಳ ಪ್ರತಿಷ್ಠೆ
ಬ್ರಹ್ಮಕಲಶೋತ್ಸವದ 3ನೇ ದಿನವಾದ ಮಾ. 20ರಂದು ಬೆಳಗ್ಗೆ 5.30ರ ಕುಂಭಲಗ್ನ ಸುಮುಹೂರ್ತದಲ್ಲಿ ಮೂಡುಬೈಲು ಹಾಗೂ  ಕೊಡಂಕಿರಿಯಲ್ಲಿರುವ ಪರಿವಾರ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ ನಡೆಯಲಿದೆ. ಬೆಳಗ್ಗೆ ಹಾಗೂ ಸಂಜೆ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಬೆಳಗ್ಗೆ ಕಳೆಂಜ, ಪುದುವೆಟ್ಟು, ಧರ್ಮಸ್ಥಳ, ಶಿರಾಡಿ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಸಂಜೆ ಭಜನ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಸಭೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಸಹಿತ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ ಯಕ್ಷ ಗಾನ ವೈಭವ ನಡೆಯಲಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.