ಪೈಪ್ ಒಡೆದು ಕೊಳಚೆ ನೀರು ಸೇರ್ಪಡೆ: ಆಕ್ರೋಶ
Team Udayavani, Apr 14, 2018, 11:50 AM IST
ನೆಲ್ಲಿಕಟ್ಟೆ : ನಗರದ ರೈಲ್ವೇ ನಿಲ್ದಾಣ ರಸ್ತೆ ಬದಿಯ ಚರಂಡಿಯಲ್ಲಿ ಹಾದು ಹೋಗುವ ಕೊಳಚೆ ಮಲಿನ ನೀರು ನೆಲ್ಲಿಕಟ್ಟೆ ಪರಿಸರಕ್ಕೆ ಸರಬರಾಜು ಆಗುವ ಕುಡಿಯುವ ನೀರು ಯೋಜನೆಯ ಕೊಳವೆಗೆ ಸೇರಿಕೊಂಡು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಭುವನೇಂದ್ರ ಕಲ್ಯಾಣ ಮಂಟಪದ ಕಡೆಯಿಂದ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣಕ್ಕೆ ಹೋಗುವ ರೈಲ್ವೇ ಸ್ಟೇಷನ್ ರಸ್ತೆ ಬದಿಯಲ್ಲಿ ಹಾದು ಹೋಗುವ ಚರಂಡಿಯಲ್ಲಿ ತ್ಯಾಜ್ಯಗಳು ತುಂಬಿಕೊಂಡು ಹರಿಯುವ ಕೊಳಚೆ ನೀರಿಗೆ ತಡೆಯಾಗಿದೆ. ನೆಲ್ಲಿಕಟ್ಟೆ ಜಂಕ್ಷನ್ ವ್ಯಾಪ್ತಿಯಲ್ಲಿ ಚರಂಡಿಯಲ್ಲೇ ಅಳವಡಿಸಲಾಗಿರುವ ನೀರು ಸರಬರಾಜು ಯೋಜನೆಯ ಪೈಪ್ ಒಡೆದು ಹೋದ ಪರಿಣಾಮ ಅದರೊಳಗೆ ಚರಂಡಿಯಲ್ಲಿ ಹಾದು ಹೋಗುವ ಕೊಳಚೆ ನೀರು ತುಂಬಿಕೊಂಡು ನೆಲ್ಲಿಕಟ್ಟೆ ಪರಿಸರದ ಹಲವು ಮನೆಗಳಿಗೆ ನಾಲ್ಕು ದಿನಗಳಿಂದ ಸರಬರಾಜಾಗಿತ್ತು. ದುರ್ವಾಸನೆಯುಕ್ತ ಈ ಮಲೀನ ನೀರು ಬಳಕೆಗೆ ಅಯೋಗ್ಯವಾಗಿದೆ.
ನೀರು ದುರ್ವಾಸನೆ ಬೀರಲಾರಂಭಿಸಿದ ಹಿನ್ನೆಲೆಯಲ್ಲಿ ನೆಲ್ಲಿಕಟ್ಟೆ ಪರಿಸರದವರು ನಗರಸಭೆಯ ಆಡಳಿತಕ್ಕೆ ಆರಂಭದಲ್ಲೇ ಮಾಹಿತಿ ನೀಡಿದ್ದರೂ ಅಧಿಕಾರಿಗಳು ,ನಗರಸಭೆಯ ಆರೋಗ್ಯ ಇಲಾಖೆಯವರು ಸ್ಪಂದನೆ ನೀಡಿಲ್ಲ.
ಒಡೆದ ಪೈಪ್
ಗುರುವಾರ ಸ್ಥಳೀಯ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅವರ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸುವ ನಗರಸಭೆಯ ಸಿಬಂದಿ ಸ್ಥಳಕ್ಕೆ ಆಗಮಿಸಿ ಚರಂಡಿಗೆ ಅಳವಡಿಸಲಾಗಿದ್ದ ಸ್ಲಾಬ್ಗಳನ್ನು ತೆರದು ನೋಡಿದಾಗ ಚರಂಡಿಯಲ್ಲಿ ಪೂರ್ತಿಯಾಗಿ ಪ್ಲಾಸ್ಟಿಕ್ ಬಾಟಲಿಗಳು ಹಾಗೂ ತ್ಯಾಜ್ಯಗಳು ತುಂಬಿಕೊಂಡು ಹರಿದು ಹೋಗುವ ಕೊಳಚೆ ನೀರಿಗೆ ತಡೆಯುಂಟಾಗಿರುವುದು ಕಂಡು ಬಂದಿದೆ. ನಗರಸಭೆಯ ಸಿಬಂದಿ ಚರಂಡಿಯಲ್ಲಿ ತುಂಬಿಕೊಂಡಿದ್ದ ಬಾಟಲಿಗಳನ್ನು ಮತ್ತು ತ್ಯಾಜ್ಯಗಳನ್ನು ತೆರವುಗೊಳಿಸಿ ಪರಿಶೀಲಿಸಿದಾಗ, ಚರಂಡಿಯೊಳಗೆ ಅಳವಡಿಸಲಾಗಿದ್ದ ನೀರು ಸರಬರಾಜು ಯೋಜನೆಯ ಪೈಪ್ ಹೊಡೆದು ಹೋಗಿರುವುದು ಹಾಗೂ ಹೊಡೆದು ಹೋದ ಪೈಪಿನೊಳಗೆ ಚರಂಡಿಯ ಕೊಳಚೆ ನೀರು ಸೇರಿಕೊಂಡಿರುವುದು ಕಂಡು ಬಂದಿತ್ತು.
ಪರ್ಯಾಯ ವ್ಯವಸ್ಥೆ
ನೆಲ್ಲಿಕಟ್ಟೆ ಪರಿಸರದಲ್ಲಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸಮಸ್ಯೆ ಪರಿ ಹರಿಸುವ ಕೆಲಸ ನಡೆಸ ಲಾಗುತ್ತಿದೆ. ಚರಂಡಿಯ ಸ್ಲಾಬ್ ಗಳನ್ನು ತೆಗೆದು ಸಮಸ್ಯೆಯ ಕಾರಣ ಹುಡುಕಲಾಗಿದೆ. ಇದೀಗ ಚರಂಡಿ ಯೊಳಗಿದ್ದ ಕುಡಿಯುವ ನೀರಿನ ಯೋಜನೆಯ ಪೈಪನ್ನು ತುಂಡರಿಸಿ ಬ್ಲಾಕ್ ಮಾಡಿ, ಆ ಭಾಗದ 5 ಮನೆಗಳಿಗೆ ಕೊಳವೆ ಬಾವಿಯಿಂದ ಹೊಸಪೈಪ್ ಅಳವಡಿಸಿ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ನಗರಸಭೆಯ ಆಯುಕ್ತೆ ರೂಪಾ ಟಿ. ಶೆಟ್ಟಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ