ಪೈಪ್‌ ಒಡೆದು ಕೊಳಚೆ ನೀರು ಸೇರ್ಪಡೆ: ಆಕ್ರೋಶ


Team Udayavani, Apr 14, 2018, 11:50 AM IST

14-April-7.jpg

ನೆಲ್ಲಿಕಟ್ಟೆ : ನಗರದ ರೈಲ್ವೇ ನಿಲ್ದಾಣ ರಸ್ತೆ ಬದಿಯ ಚರಂಡಿಯಲ್ಲಿ ಹಾದು ಹೋಗುವ ಕೊಳಚೆ ಮಲಿನ ನೀರು ನೆಲ್ಲಿಕಟ್ಟೆ ಪರಿಸರಕ್ಕೆ ಸರಬರಾಜು ಆಗುವ ಕುಡಿಯುವ ನೀರು ಯೋಜನೆಯ ಕೊಳವೆಗೆ ಸೇರಿಕೊಂಡು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಭುವನೇಂದ್ರ ಕಲ್ಯಾಣ ಮಂಟಪದ ಕಡೆಯಿಂದ ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣಕ್ಕೆ ಹೋಗುವ ರೈಲ್ವೇ ಸ್ಟೇಷನ್‌ ರಸ್ತೆ ಬದಿಯಲ್ಲಿ ಹಾದು ಹೋಗುವ ಚರಂಡಿಯಲ್ಲಿ ತ್ಯಾಜ್ಯಗಳು ತುಂಬಿಕೊಂಡು ಹರಿಯುವ ಕೊಳಚೆ ನೀರಿಗೆ ತಡೆಯಾಗಿದೆ. ನೆಲ್ಲಿಕಟ್ಟೆ ಜಂಕ್ಷನ್‌ ವ್ಯಾಪ್ತಿಯಲ್ಲಿ ಚರಂಡಿಯಲ್ಲೇ ಅಳವಡಿಸಲಾಗಿರುವ ನೀರು ಸರಬರಾಜು ಯೋಜನೆಯ ಪೈಪ್‌ ಒಡೆದು ಹೋದ ಪರಿಣಾಮ ಅದರೊಳಗೆ ಚರಂಡಿಯಲ್ಲಿ ಹಾದು ಹೋಗುವ ಕೊಳಚೆ ನೀರು ತುಂಬಿಕೊಂಡು ನೆಲ್ಲಿಕಟ್ಟೆ ಪರಿಸರದ ಹಲವು ಮನೆಗಳಿಗೆ ನಾಲ್ಕು ದಿನಗಳಿಂದ ಸರಬರಾಜಾಗಿತ್ತು. ದುರ್ವಾಸನೆಯುಕ್ತ ಈ ಮಲೀನ ನೀರು ಬಳಕೆಗೆ ಅಯೋಗ್ಯವಾಗಿದೆ.

ನೀರು ದುರ್ವಾಸನೆ ಬೀರಲಾರಂಭಿಸಿದ ಹಿನ್ನೆಲೆಯಲ್ಲಿ ನೆಲ್ಲಿಕಟ್ಟೆ ಪರಿಸರದವರು ನಗರಸಭೆಯ ಆಡಳಿತಕ್ಕೆ ಆರಂಭದಲ್ಲೇ ಮಾಹಿತಿ ನೀಡಿದ್ದರೂ ಅಧಿಕಾರಿಗಳು ,ನಗರಸಭೆಯ ಆರೋಗ್ಯ ಇಲಾಖೆಯವರು ಸ್ಪಂದನೆ ನೀಡಿಲ್ಲ.

ಒಡೆದ ಪೈಪ್‌
ಗುರುವಾರ ಸ್ಥಳೀಯ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅವರ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸುವ ನಗರಸಭೆಯ ಸಿಬಂದಿ ಸ್ಥಳಕ್ಕೆ ಆಗಮಿಸಿ ಚರಂಡಿಗೆ ಅಳವಡಿಸಲಾಗಿದ್ದ ಸ್ಲಾಬ್‌ಗಳನ್ನು ತೆರದು ನೋಡಿದಾಗ ಚರಂಡಿಯಲ್ಲಿ ಪೂರ್ತಿಯಾಗಿ ಪ್ಲಾಸ್ಟಿಕ್‌ ಬಾಟಲಿಗಳು ಹಾಗೂ ತ್ಯಾಜ್ಯಗಳು ತುಂಬಿಕೊಂಡು ಹರಿದು ಹೋಗುವ ಕೊಳಚೆ ನೀರಿಗೆ ತಡೆಯುಂಟಾಗಿರುವುದು ಕಂಡು ಬಂದಿದೆ. ನಗರಸಭೆಯ ಸಿಬಂದಿ ಚರಂಡಿಯಲ್ಲಿ ತುಂಬಿಕೊಂಡಿದ್ದ ಬಾಟಲಿಗಳನ್ನು ಮತ್ತು ತ್ಯಾಜ್ಯಗಳನ್ನು ತೆರವುಗೊಳಿಸಿ ಪರಿಶೀಲಿಸಿದಾಗ, ಚರಂಡಿಯೊಳಗೆ ಅಳವಡಿಸಲಾಗಿದ್ದ ನೀರು ಸರಬರಾಜು ಯೋಜನೆಯ ಪೈಪ್‌ ಹೊಡೆದು ಹೋಗಿರುವುದು ಹಾಗೂ ಹೊಡೆದು ಹೋದ ಪೈಪಿನೊಳಗೆ ಚರಂಡಿಯ ಕೊಳಚೆ ನೀರು ಸೇರಿಕೊಂಡಿರುವುದು ಕಂಡು ಬಂದಿತ್ತು.

ಪರ್ಯಾಯ ವ್ಯವಸ್ಥೆ 
ನೆಲ್ಲಿಕಟ್ಟೆ ಪರಿಸರದಲ್ಲಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸಮಸ್ಯೆ ಪರಿ ಹರಿಸುವ ಕೆಲಸ ನಡೆಸ ಲಾಗುತ್ತಿದೆ. ಚರಂಡಿಯ ಸ್ಲಾಬ್‌ ಗಳನ್ನು ತೆಗೆದು ಸಮಸ್ಯೆಯ ಕಾರಣ ಹುಡುಕಲಾಗಿದೆ. ಇದೀಗ ಚರಂಡಿ ಯೊಳಗಿದ್ದ ಕುಡಿಯುವ ನೀರಿನ ಯೋಜನೆಯ ಪೈಪನ್ನು ತುಂಡರಿಸಿ ಬ್ಲಾಕ್‌ ಮಾಡಿ, ಆ ಭಾಗದ 5 ಮನೆಗಳಿಗೆ ಕೊಳವೆ ಬಾವಿಯಿಂದ ಹೊಸಪೈಪ್‌ ಅಳವಡಿಸಿ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ನಗರಸಭೆಯ ಆಯುಕ್ತೆ ರೂಪಾ ಟಿ. ಶೆಟ್ಟಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.