ಪೈಪ್‌ ಒಡೆದು ಕೊಳಚೆ ನೀರು ಸೇರ್ಪಡೆ: ಆಕ್ರೋಶ


Team Udayavani, Apr 14, 2018, 11:50 AM IST

14-April-7.jpg

ನೆಲ್ಲಿಕಟ್ಟೆ : ನಗರದ ರೈಲ್ವೇ ನಿಲ್ದಾಣ ರಸ್ತೆ ಬದಿಯ ಚರಂಡಿಯಲ್ಲಿ ಹಾದು ಹೋಗುವ ಕೊಳಚೆ ಮಲಿನ ನೀರು ನೆಲ್ಲಿಕಟ್ಟೆ ಪರಿಸರಕ್ಕೆ ಸರಬರಾಜು ಆಗುವ ಕುಡಿಯುವ ನೀರು ಯೋಜನೆಯ ಕೊಳವೆಗೆ ಸೇರಿಕೊಂಡು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಭುವನೇಂದ್ರ ಕಲ್ಯಾಣ ಮಂಟಪದ ಕಡೆಯಿಂದ ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣಕ್ಕೆ ಹೋಗುವ ರೈಲ್ವೇ ಸ್ಟೇಷನ್‌ ರಸ್ತೆ ಬದಿಯಲ್ಲಿ ಹಾದು ಹೋಗುವ ಚರಂಡಿಯಲ್ಲಿ ತ್ಯಾಜ್ಯಗಳು ತುಂಬಿಕೊಂಡು ಹರಿಯುವ ಕೊಳಚೆ ನೀರಿಗೆ ತಡೆಯಾಗಿದೆ. ನೆಲ್ಲಿಕಟ್ಟೆ ಜಂಕ್ಷನ್‌ ವ್ಯಾಪ್ತಿಯಲ್ಲಿ ಚರಂಡಿಯಲ್ಲೇ ಅಳವಡಿಸಲಾಗಿರುವ ನೀರು ಸರಬರಾಜು ಯೋಜನೆಯ ಪೈಪ್‌ ಒಡೆದು ಹೋದ ಪರಿಣಾಮ ಅದರೊಳಗೆ ಚರಂಡಿಯಲ್ಲಿ ಹಾದು ಹೋಗುವ ಕೊಳಚೆ ನೀರು ತುಂಬಿಕೊಂಡು ನೆಲ್ಲಿಕಟ್ಟೆ ಪರಿಸರದ ಹಲವು ಮನೆಗಳಿಗೆ ನಾಲ್ಕು ದಿನಗಳಿಂದ ಸರಬರಾಜಾಗಿತ್ತು. ದುರ್ವಾಸನೆಯುಕ್ತ ಈ ಮಲೀನ ನೀರು ಬಳಕೆಗೆ ಅಯೋಗ್ಯವಾಗಿದೆ.

ನೀರು ದುರ್ವಾಸನೆ ಬೀರಲಾರಂಭಿಸಿದ ಹಿನ್ನೆಲೆಯಲ್ಲಿ ನೆಲ್ಲಿಕಟ್ಟೆ ಪರಿಸರದವರು ನಗರಸಭೆಯ ಆಡಳಿತಕ್ಕೆ ಆರಂಭದಲ್ಲೇ ಮಾಹಿತಿ ನೀಡಿದ್ದರೂ ಅಧಿಕಾರಿಗಳು ,ನಗರಸಭೆಯ ಆರೋಗ್ಯ ಇಲಾಖೆಯವರು ಸ್ಪಂದನೆ ನೀಡಿಲ್ಲ.

ಒಡೆದ ಪೈಪ್‌
ಗುರುವಾರ ಸ್ಥಳೀಯ ನಗರಸಭಾ ಸದಸ್ಯ ಶಕ್ತಿ ಸಿನ್ಹಾ ಅವರ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸುವ ನಗರಸಭೆಯ ಸಿಬಂದಿ ಸ್ಥಳಕ್ಕೆ ಆಗಮಿಸಿ ಚರಂಡಿಗೆ ಅಳವಡಿಸಲಾಗಿದ್ದ ಸ್ಲಾಬ್‌ಗಳನ್ನು ತೆರದು ನೋಡಿದಾಗ ಚರಂಡಿಯಲ್ಲಿ ಪೂರ್ತಿಯಾಗಿ ಪ್ಲಾಸ್ಟಿಕ್‌ ಬಾಟಲಿಗಳು ಹಾಗೂ ತ್ಯಾಜ್ಯಗಳು ತುಂಬಿಕೊಂಡು ಹರಿದು ಹೋಗುವ ಕೊಳಚೆ ನೀರಿಗೆ ತಡೆಯುಂಟಾಗಿರುವುದು ಕಂಡು ಬಂದಿದೆ. ನಗರಸಭೆಯ ಸಿಬಂದಿ ಚರಂಡಿಯಲ್ಲಿ ತುಂಬಿಕೊಂಡಿದ್ದ ಬಾಟಲಿಗಳನ್ನು ಮತ್ತು ತ್ಯಾಜ್ಯಗಳನ್ನು ತೆರವುಗೊಳಿಸಿ ಪರಿಶೀಲಿಸಿದಾಗ, ಚರಂಡಿಯೊಳಗೆ ಅಳವಡಿಸಲಾಗಿದ್ದ ನೀರು ಸರಬರಾಜು ಯೋಜನೆಯ ಪೈಪ್‌ ಹೊಡೆದು ಹೋಗಿರುವುದು ಹಾಗೂ ಹೊಡೆದು ಹೋದ ಪೈಪಿನೊಳಗೆ ಚರಂಡಿಯ ಕೊಳಚೆ ನೀರು ಸೇರಿಕೊಂಡಿರುವುದು ಕಂಡು ಬಂದಿತ್ತು.

ಪರ್ಯಾಯ ವ್ಯವಸ್ಥೆ 
ನೆಲ್ಲಿಕಟ್ಟೆ ಪರಿಸರದಲ್ಲಿ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಸಮಸ್ಯೆ ಪರಿ ಹರಿಸುವ ಕೆಲಸ ನಡೆಸ ಲಾಗುತ್ತಿದೆ. ಚರಂಡಿಯ ಸ್ಲಾಬ್‌ ಗಳನ್ನು ತೆಗೆದು ಸಮಸ್ಯೆಯ ಕಾರಣ ಹುಡುಕಲಾಗಿದೆ. ಇದೀಗ ಚರಂಡಿ ಯೊಳಗಿದ್ದ ಕುಡಿಯುವ ನೀರಿನ ಯೋಜನೆಯ ಪೈಪನ್ನು ತುಂಡರಿಸಿ ಬ್ಲಾಕ್‌ ಮಾಡಿ, ಆ ಭಾಗದ 5 ಮನೆಗಳಿಗೆ ಕೊಳವೆ ಬಾವಿಯಿಂದ ಹೊಸಪೈಪ್‌ ಅಳವಡಿಸಿ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ನಗರಸಭೆಯ ಆಯುಕ್ತೆ ರೂಪಾ ಟಿ. ಶೆಟ್ಟಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.