ಮುಂಡಾಜೆ: ಚರಂಡಿಗೆ ಉರುಳಿದ ಬಸ್
Team Udayavani, Apr 15, 2018, 6:00 AM IST
ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಸರಕಾರಿ ಬಸ್ ಚರಂಡಿಗೆ ಉರುಳಿಬಿದ್ದ ಘಟನೆ ಮುಂಡಾಜೆ ಗ್ರಾಮದ ಸೀಟು ಬಸ್ ತಂಗುದಾಣದ ಬಳಿ ನಡೆದಿದೆ.
ಬಸ್ಸಿನಲ್ಲಿ 41 ಮಂದಿ ಪ್ರಯಾಣಿಕ ರಿದ್ದು,ಯಾರಿಗೂ ಗಾಯಗಳಾಗಿಲ್ಲ, ಅವರನ್ನು ಸ್ಥಳೀಯರ ಸಹಕಾರ ದೊಂದಿಗೆ ಹೊರಗೆ ಕರೆತರಲಾಗಿದೆ. ಚಿಕ್ಕಮಗಳೂರಿನಿಂದ- ಮೂಡಿಗೆರೆ- ಉಡುಪಿ ಮಾರ್ಗವಾಗಿ ಕುಂದಾಪುರಕ್ಕೆ ತೆರಳುತ್ತಿದ್ದ ಕುಂದಾಪುರ ಡಿಪೋಗೆ ಸೇರಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾರ್ಮಾಡಿ ಕಳೆದು ಉಜಿರೆ ಕಡೆಗೆ ತೆರಳುತ್ತಿತ್ತು. ಮುಂಡಾಜೆ ಗ್ರಾಮದ ಸೀಟು ಬಳಿ ಓವರ್ಟೇಕ್ ಮಾಡಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಬದಿಗೆ ಸರಿಸಿದ್ದಾನೆ. ಈ ವೇಳೆ ನಿಧಾನವಾಗಿ ರಸ್ತೆ ಬದಿಗೆ ಸರಿದಿದ್ದು, ನಿಯಂತ್ರಣ ತಪ್ಪಿ ಉರುಳಿ ಸಣ್ಣ ಚರಂಡಿಗೆ ಬಿದ್ದಿದೆ. ಬಸ್ ನಿಧಾನ ಗತಿಯಲ್ಲಿದ್ದುದರಿಂದ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಯಿತು. ಬಸ್ ಚಾಲಕ ಬದಿಗೆ ಸರಿಸದಿದ್ದಲ್ಲಿ ಅಪಘಾತ ಸಂಭವಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಂಚಾರ ವ್ಯತ್ಯಯ
ಸುಮಾರು 15 ನಿಮಿಷಗಳ ಕಾಲ ಸಂಚಾರಕ್ಕೆ ತಡೆ ಉಂಟಾಯಿತು. ಬಸ್ಸನ್ನು ಧರ್ಮಸ್ಥಳ ಡಿಪೋಗೆ ಸಾಗಿಸಲಾಯಿತು. ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್