ವರ್ಣರಂಜಿತ ಪುತ್ತೂರು ಮಹಾಲಿಂಗೇಶ್ವರ ಬ್ರಹ್ಮರಥೋತ್ಸವ 


Team Udayavani, Apr 19, 2018, 11:10 AM IST

19-April-4.jpg

ಪುತ್ತೂರು: ಮಂಗಳವಾರ ರಾತ್ರಿ ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆದ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವಕ್ಕೆ ಲಕ್ಷೋಪಲಕ್ಷ ಭಕ್ತರು ಸಾಕ್ಷಿಯಾದರು.

ಪಡುವಣ ದಿಕ್ಕಿನಿಂದ ಕತ್ತಲು ಆವರಿಸುತ್ತಿದ್ದಂತೆ ದೇವರಮಾರು ಗದ್ದೆಗೆ ಜನಸಂದಣಿ ಹರಿದು ಬರತೊಡ ಗಿತು. ದೇಗುಲದೊಳಗೆ ಧಾರ್ಮಿಕ ಕಾರ್ಯಕ್ರಮವೂ ಶುರುವಾಯಿತು. ದೇವರ ಉತ್ಸವ ಬಲಿ ಹೊರಟು, ವಸಂತ ಕಟ್ಟೆ ಪೂಜೆ, ವಾದ್ಯ ಮೇಳದೊಂದಿಗೆ ಬಲಿ ನಡೆಯಿತು. ಉಳ್ಳಾಲ್ತಿ- ದಂಡನಾಯಕ ದೈವಗಳ ಭಂಡಾರವೂ ದೇವರ ಬಲಿಯೊಂದಿಗೆ ಸೇರಿಕೊಂಡು, ರಾಜಗೋಪುರದ ಮೂಲಕ
ಬ್ರಹ್ಮರಥದೆಡೆಗೆ ಆಗಮಿಸಿತು.

ಎಂಟು ಎಕರೆ ವಿಸ್ತಾರದ ಗದ್ದೆಯಲ್ಲಿ ಒಂದಿಂಚು ಜಾಗವಿಲ್ಲದಂತೆ ಜನ ತುಂಬಿದ್ದರು. ಜೋಡುಕರೆ ಕಂಬಳ ನಡೆಯುವ ಗದ್ದೆಯಲ್ಲಿ ಪುತ್ತೂರು ಬೆಡಿಗೆ ವ್ಯವಸ್ಥೆ ಮಾಡಲಾಗಿತ್ತು. ಬೆಡಿ ಆಸಕ್ತರು ಇಲ್ಲೇ ಸುತ್ತಮುತ್ತ ನೆರೆದಿದ್ದರು. ದೂರದೂರಿನಿಂದ ಆಗಮಿಸಿದವರು ಜಾತ್ರಾ ಗದ್ದೆಯಲ್ಲೇ ಟವೆಲ್‌, ಕಾಗದ ಹರಡಿ ಕುಳಿತಿದ್ದರು. ಒಂದಷ್ಟು ಜನ ಸುತ್ತಮುತ್ತಲಿನ ಕಟ್ಟಡವೇರಿ ಬ್ರಹ್ಮರಥದ, ಬೆಡಿಯ ವೈಭವವನ್ನು ಸವಿ ಯುತ್ತಿದ್ದರು. ಇನ್ನೊಂದಷ್ಟು ಮಂದಿ ಗದ್ದೆಯ ತುಂಬಾ ಓಡಾಟ ನಡೆಸಿ, ಖರೀದಿಯಲ್ಲಿ ಬ್ಯುಸಿಯಾಗಿದ್ದರು. ಅಷ್ಟು ಹೊತ್ತಿಗೂ ಜನರು ಆಗಮಿಸುತ್ತಲೇ ಇದ್ದರು. ಈ ಹಿನ್ನೆಲೆಯಲ್ಲಿ ಪೇಟೆ ತುಂಬಾ ಪೊಲೀಸರು ಸಂಚಾರ ದಟ್ಟಣೆ ನಿರ್ವಹಣೆಗಾಗಿ ಬಂದೋಬಸ್ತ್ ಕೈಗೊಂಡಿದ್ದರು.

ರಾತ್ರಿ 9.45ರ ಸುಮಾರಿಗೆ ಶ್ರೀ ಮಹಾಲಿಂಗೇಶ್ವರ ದೇವರು ಬ್ರಹ್ಮರಥಾ ರೂಢರಾದರು. ಬ್ರಹ್ಮರಥ ದೆದುರು ಕಾಜು ಕುಜುಂಬ ದೈವದ ಕಟ್ಟುಕಟ್ಟಳೆ ನೇಮ ನಡೆದು, ಶ್ರೀ  ಮಹಾಲಿಂಗೇಶ್ವರ ದೇವರ ಆಕರ್ಷಕ ಉತ್ಸವ ಬಲಿ ನಡೆಯಿತು.

ಇದೇ ಹೊತ್ತಿಗೆ ರಥಬೀದಿಯಲ್ಲಿ ಕರ್ಪೂರದ ಬೆಳಕು ಪಸರಿಸತೊಡಗಿತು. ರಥಬೀದಿಯಲ್ಲಿ ಬಲ್ನಾಡು ದೈವಗಳ ಭಂಡಾರ, ಕಾಜುಕುಜುಂಬ ದೈವ, ಆಡಳಿತ ಮಂಡಳಿ ಉಪಸ್ಥಿತಿಯಲ್ಲಿ ದೇವರು ರಥಾ ರೂಢರಾದರು. ಲಕ್ಷಾಂತರ ಭಕ್ತರು ಈ ಸೊಬಗನ್ನು ಕಣ್ತುಂಬಿಕೊಂಡು, ಘೋಷಣೆ ಕೂಗಿದರು.

ರಥದಿಂದ ಬೆಂಕಿಯ ಕಿಡಿಯನ್ನು ಕೊಂಡೊ ಯ್ದು ಪ್ರಸಿದ್ಧ ಪುತ್ತೂರು ಬೆಡಿಗೆ ಅಗ್ನಿಸ್ಪರ್ಶ ಮಾಡಲಾಯಿತು. ಬಾನಂಗಳದಲ್ಲಿ ವರ್ಣಚಿತ್ತಾರ ಶುರುವಿಟ್ಟು ಕೊಂಡಿತು. ಒಂದು ಗಂಟೆಗೂ ಅಧಿಕ ಕಾಲ ಮೂಡಿಬಂದ ಬೆಡಿ ಪ್ರದರ್ಶನವನ್ನು ಹಲವರು ಮೊಬೈಲ್‌ನಲ್ಲಿ, ಕೆಮರಾದಲ್ಲಿ ಸೆರೆ ಹಿಡಿದರು. ಕೊನೆಗೆ ನೆಲ ಬಿರಿಯುವಂತೆ ಸದ್ದು ಮೊಳಗಿಸಿದ ಫಿನಿಶಿಂಗ್‌ ಟಚ್‌ ಬೆಚ್ಚಿ ಬೀಳಿಸಿತು. ಕಿವಿ ಗಡಚಿಕ್ಕುವ ಧ್ವನಿಗೆ,
ಸುಡುಮದ್ದಿನ ಕರಾಮತ್ತಿಗೆ ಗದ್ದೆಯ ತುಂಬಾ ನೆರೆದಿದ್ದ ಮಂದಿ ಹರ್ಷೋದ್ಘಾರ ಮೊಳಗಿಸಿದರು.

ಬೆಡಿ ಪೂರ್ಣಗೊಳ್ಳುತ್ತಿದ್ದಂತೆ ಬ್ರಹ್ಮರಥ ದಲ್ಲಿ ದೇವರಿಗೆ ಪೂಜೆ ನಡೆದು, ರಥೋತ್ಸವ ಆರಂಭಗೊಂಡಿತು. ಮೊದಲೇ ನೇಮಿಸಿದ್ದ ಸಮವಸ್ತ್ರ ಧರಿಸಿದ್ದ ಸ್ವಯಂಸೇವಕರು ಹಗ್ಗ ಹಿಡಿದು ರಥವನ್ನೆಳೆದರು. ಸುಮಾರು 750 ಮೀಟರ್‌ ದೂರ ರಥಬೀದಿಯಲ್ಲಿ ರಥೋತ್ಸವ ನಡೆಯಿತು. ಅರ್ಧದ ವರೆಗೆ ತೆರಳಿ ತಂತ್ರಿಗಳು ರಥದಿಂದಿಳಿದು ಮೂಲನಾಗನ ಕಟ್ಟೆಯಲ್ಲಿ ಪೂಜೆ ಸಲ್ಲಿಸಿದರು. ಅವರು ಮರಳಿ ಬಂದು, ಮತ್ತೆ ರಥ ಮುಂದುವರಿಯಿತು. ರಾಜಗೋಪುರದ ಬಳಿಗೆ ಹಿಂದಿರುಗಿ ಬಂದ ಬ್ರಹ್ಮರಥದಿಂದ ದೇವರು ಇಳಿದು, ಬಲಾ°ಡು ಉಳ್ಳಾಲ್ತಿ ದೈವಗಳನ್ನು ಬಂಗೇರ್‌ ಕಾಯರ್‌ಕಟ್ಟೆಯವರೆಗೆ ತೆರಳಿ ಬೀಳ್ಕೊಟ್ಟರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.