ಎಲ್ಲೆಡೆ ನಿಲ್ಲುತ್ತೆ, ದರ ಮಾತ್ರ ಎಕ್ಸ್‌ಪ್ರೆಸ್‌ ಬಸ್ಸಿದ್ದೇ ಅಂತೆ!


Team Udayavani, May 28, 2018, 4:20 AM IST

ksrtc-bus-600.jpg

ಕಡಬ: ಕುಕ್ಕೆ ಸುಬ್ರಹ್ಮಣ್ಯ ಮತ್ತು ಮಂಗಳೂರು ನಡುವೆ ಕಡಬ – ಉಪ್ಪಿನಂಗಡಿಯ ಮೂಲಕ ಸಂಚರಿಸುವ KSRTC ಮಂಗಳೂರು ಘಟಕದ ಬಸ್‌ ಗಳ ಪ್ರಯಾಣದರವನ್ನು ಬೇಕಾಬಿಟ್ಟಿ ಏರಿಕೆ ಮಾಡುವ ಮೂಲಕ ಅಧಿಕಾರಿಗಳು ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಬಹುತೇಕ ಶಟ್ಲ (ಸಾಮಾನ್ಯ ನಿಲುಗಡೆ) ಬಸ್‌ ಗಳನ್ನು ಎಕ್ಸ್‌ಪ್ರೆಸ್‌ (ವೇಗದೂತ) ಬಸ್‌ ಗಳನ್ನಾಗಿ ಪರಿವರ್ತಿಸಿ ಪ್ರಯಾಣಿಕರಿಗೆ ಹೆಚ್ಚುವರಿ ದರ ವಿಧಿಸುವ ಮೂಲಕ ಜನರಿಂದ ಹೆಚ್ಚಿನ ಹಣ ಸುಲಿಗೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

51ರಿಂದ 106 ರೂ.ಗೆ ಜಂಪ್‌!
ಸುಬ್ರಹ್ಮಣ್ಯದಿಂದ ಮಂಗಳೂರಿಗೆ 51 ರೂ. ದರ ತೆತ್ತು ಪ್ರಯಾಣಿಸುತ್ತಿದ್ದವರು ಈಗ 106 ರೂ. ನೀಡುವಂತಾಗಿದೆ. ಕಡಬದಿಂದ 46 ರೂ. ಇದ್ದ ದರ 86 ರೂ.ಗೆ ಏರಿದೆ. ಸುಬ್ರಹ್ಮಣ್ಯ – ಉಪ್ಪಿನಂಗಡಿ ಮಧ್ಯೆ ಇದ್ದ ದರವೂ 40 ರೂ.ಗಳಿಂದ 55 ರೂ.ಗೆ ಏರಿಕೆಯಾಗಿದೆ. ಕಡಬದಿಂದ ಉಪ್ಪಿನಂಗಡಿಗೆ 28 ರೂ. ಟಿಕೆಟ್‌ ಇತ್ತು. ಈಗ 33 ರೂ. ಕೊಡಬೇಕು. ರಾಮಕುಂಜ, ಆಲಂಕಾರು, ನೆಟ್ಟಣ, ಬಿಳಿನೆಲೆ ಮುಂತಾದೆಡೆ ಹತ್ತಿ, ಇಳಿಯುವ ಪ್ರಯಾಣಿಕರ ಮೇಲೂ 10ರಿಂದ 15 ರೂ. ಹೆಚ್ಚುವರಿ ಹೊರೆ ಬಿದ್ದಿದೆ. ಈ ಏರಿಕೆ ಮಂಗಳೂರು ಡಿಪೋದ ಬಸ್‌ ಗಳಲ್ಲಿ ಮಾತ್ರ ಎಂಬುದು ಪ್ರಯಾಣಿಕರ ಆರೋಪ.

ನಿರ್ವಾಹಕರೊಂದಿಗೆ ಜಗಳ
ದರ ಏರಿಕೆಯ ಕಾರಣದಿಂದಾಗಿ ಪ್ರಯಾಣಿಕರು ಮತ್ತು ಬಸ್‌ ನಿರ್ವಾಹಕರ ನಡುವೆ ದಿನಂಪ್ರತಿ ಜಗಳ ನಡೆಯುತ್ತಿದೆ. ನಿರ್ವಾಹಕರಲ್ಲಿ ಪ್ರಶ್ನಿಸಿದರೆ ಎಕ್ಸ್‌ಪ್ರೆಸ್‌ ಬಸ್‌ ಎನ್ನುವ ಉತ್ತರ ಸಿಗುತ್ತದೆ. ಆದರೆ ಶಟ್ಲ ಬಸ್‌ ನಂತೆ ಎಲ್ಲ ಕಡೆ ಜನರನ್ನು ಹತ್ತಿಸುವುದು, ಇಳಿಸುವುದು ನಡೆದೇ ಇದೆ. ಎಕ್ಸ್‌ಪ್ರೆಸ್‌ ಬಸ್ಸಿನ ದರ ತೆತ್ತು ಜನರು ಸಾಮಾನ್ಯ ಬಸ್‌ ಗಳಲ್ಲಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ. ನಿರ್ವಾಹಕರು ಈ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ಸಂಜೆ ಬಸ್‌ ನಾಪತ್ತೆ
ಕಳೆದ 25 ವರ್ಷಗಳಿಂದ ಕಡಬದಿಂದ ಮಂಗಳೂರಿನತ್ತ ಸಂಜೆ 6.45ಕ್ಕೆ ಕೊನೆಯ ಬಸ್‌ ಸಂಚರಿಸುತ್ತಿತ್ತು. ಸುಬ್ರಹ್ಮಣ್ಯದಿಂದ 6.15 ಕ್ಕೆ ಹೊರಡುತ್ತಿದ್ದ ಆ ಬಸ್‌ ಒಂದು ತಿಂಗಳಿನಿಂದ ನಾಪತ್ತೆಯಾಗಿದೆ. ಸಂಜೆಯ ವೇಳೆಗೆ ಮಂಗಳೂರಿನತ್ತ ಪ್ರಯಾಣಿಸುವ ಅನಿವಾರ್ಯತೆ ಉಳ್ಳವರು ಬಸ್‌ ತಂಗುದಾಣದಲ್ಲಿಯೇ ಚಡಪಡಿಸುತ್ತ ಬೇರೆ ವಾಹನಗಳಿಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳೂ ತೀವ್ರ ತೊಂದರೆ ಎದುರಿಸುವಂತಾಗಿದೆ.

ಉದ್ಧಟತನದ ಉತ್ತರ
ಬೇಕಾಬಿಟ್ಟಿ ದರ ಏರಿಕೆ ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿರುವ ಕುರಿತು ಮಂಗಳೂರು ವಿಭಾಗದ 
KSRTC ಅಧಿಕಾರಿಗಳಲ್ಲಿ ವಿಚಾರಿಸಿದರೆ ಬೇಜವಾಬ್ದಾರಿಯ ಉತ್ತರ ಸಿಗುತ್ತದೆ. ಸಂಜೆಯ ವೇಳೆ ಉಪ್ಪಿನಂಗಡಿ ಮತ್ತು ಮಂಗಳೂರಿನತ್ತ ಹೆಚ್ಚುವರಿ ಬಸ್‌ ಬೇಕು ಎನ್ನುವ ಬೇಡಿಕೆ ಇರುವಾಗಲೇ ಇದ್ದ ಬಸ್‌ ನ್ನು ರದ್ದು ಮಾಡಿದ್ದಾರೆ. ದೂರು ನೀಡಲು ಹೋದರೆ ಕೇಳಿಸಿಕೊಳ್ಳುವ ವ್ಯವಧಾನ ಅಧಿಕಾರಿಗಳಲ್ಲಿಲ್ಲ. ಮಾಹಿತಿ ಬೇಕಾದರೆ ಲಿಖಿತ ದೂರು ನೀಡಿ ಎಂದು ಉದ್ಧಟತನದಿಂದ ಮಾತನಾಡುತ್ತಾರೆ. ಜನಪ್ರತಿನಿಧಿಗಳು ಮಧ್ಯೆಪ್ರವೇಶಿಸಿ, ಸಮಸ್ಯೆ ಬಗೆಹರಿಸಬೇಕು.
– ಶಿವರಾಮ ಎಂ.ಎಸ್‌., ಅಧ್ಯಕ್ಷರು, ಕಡಬ ವರ್ತಕ ಸಂಘ

— ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.