ಬೆಳ್ತಂಗಡಿ: 40 ಶಂಕಿತ ಡೆಂಗ್ಯೂ ಪ್ರಕರಣ


Team Udayavani, May 29, 2018, 4:15 AM IST

lead-28-5.jpg

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಬೀಳುತ್ತಿರುವ ಮಳೆಯಿಂದ ತಾಲೂಕಿನಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿವೆ. ಜನತೆ ತೀವ್ರ ತೆರನಾದ ಜ್ವರ ಮೊದಲಾದ ಕಾಯಿಲೆಗಳಿಂದ ಬಳಲುತ್ತಿದ್ದು, ಹಲವೆಡೆ ಶಂಕಿತ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಆದರೆ ತಾಲೂಕು ಆಸ್ಪತ್ರೆ ಪ್ರಯೋಗಾಲಯಲ್ಲಿ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿಲ್ಲ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಂಕಿತ ಪ್ರಕರಣಗಳು ಪತ್ತೆಯಾಗುತ್ತಿದೆ. ರಬ್ಬರ್‌ ತೋಟಗಳಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಶಂಕಿತ ಡೆಂಗ್ಯೂ ಪತ್ತೆಯಾಗುತ್ತಿದೆ. ಈಗ ಕಳೆಂಜ ಹಾಗೂ ಕಾಯರ್ತಡ್ಕದಲ್ಲೂ ಡೆಂಗ್ಯೂ ಸಮಸ್ಯೆ ಎದುರಾಗಿದೆ.

ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಎಂದಿಗಿಂತ ಹೆಚ್ಚಿನ ಸರತಿ ಸಾಲು ಇದ್ದು, ಜನತೆ ತಮ್ಮ ಕಾಯಿಲೆಗಳ ಬಗ್ಗೆ ಖಚಿತಪಡಿಸಿಕೊಳ್ಳುತ್ತಿದ್ದಾರೆ. ಪ್ರಯೋಗಾಲಯ ಹಾಗೂ ವಿವಿಧ ವಿಭಾಗಗಳ ಮುಂದೆ ಹೆಚ್ಚಿನ ಜನಸಂದಣಿ ಕಂಡುಬರುತ್ತಿದೆ. ಮಳೆ ಆಗಮಿಸಿ ವಾತಾವರಣ ಬದಲಾಗುತ್ತಿರುವುದರಿಂದ ವಿವಿಧ ರೋಗಗಳು ಬರುತ್ತಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ನಿಯಂತ್ರಣಕ್ಕೆ ಕ್ರಮ
ಸರಕಾರಿ ಆಸ್ಪತ್ರೆ ಅಧಿಕಾರಿಗಳು ರಕ್ತದ ಮಾದರಿಯಲ್ಲಿರುವ ಪ್ಲೇಟ್‌ ಲೆಟ್‌ ಗಳನ್ನು ಪರಿಗಣಿಸುವ ವಿಧಾನ ಖಾಸಗಿ ಆಸ್ಪತ್ರೆಗಳಲ್ಲಿ ಇರುವುದಕ್ಕಿಂತ ಭಿನ್ನವಾಗಿರುವುದರಿಂದ ಪತ್ತೆ ವಿಧಾನದಲ್ಲಿ ವ್ಯತ್ಯಾಸವಿದೆ ಎನ್ನಲಾಗಿದೆ. ಈಗಾಗಲೇ ಮಾದರಿಗಳನ್ನು ಜಿಲ್ಲಾ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಇದೀಗ ರೋಗಗಳು ಪತ್ತೆಯಾಗಿರುವ ಪ್ರದೇಶಗಳಲ್ಲಿ ವೈದ್ಯಾಧಿಕಾರಿಕಾರಿಗಳು ತುರ್ತು ಕ್ರಮ ಕೈಗೊಳ್ಳುತ್ತಿದ್ದಾರೆ.

ಜಿಲ್ಲಾ ಪ್ರಯೋಗಾಲಯಕ್ಕೆ ಮಾದರಿ
ತಾಲೂಕಿನ ಕಳೆಂಜ ಹಾಗೂ ಕಾಯರ್ತಡ್ಕದಲ್ಲಿ 25, ಬಳಂಜದಲ್ಲಿ 15 ಶಂಕಿತ ಡೆಂಗ್ಯೂ ಪ್ರಕರಣಗಳು ಸೇರಿದಂತೆ ತಾಲೂಕಿನ ವಿವಿಧೆಡೆ ಒಟ್ಟು 40 ಶಂಕಿತ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಎಲ್ಲ ಶಂಕಿತ ಪ್ರಕರಣಗಳು ಖಾಸಗಿ ಆಸ್ಪತ್ರೆಗಳಲ್ಲಿ ಪತ್ತೆಯಾಗಿದ್ದು, ದೃಢೀಕರಣಕ್ಕೆ ಜಿಲ್ಲಾ ಪ್ರಯೋಗಾಲಯಕ್ಕೆ ರಕ್ತದ ಮಾದರಿ ರವಾನಿಸಲಾಗಿದೆ. ಕೆಲ ದಿನಗಳಲ್ಲಿ ರೋಗದ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ.

ನೀರು ನಿಲ್ಲದಿರಲಿ
ರಬ್ಬರ್‌ ತೋಟ, ನೀರಿನ ತೊಟ್ಟಿ, ಮೊದಲಾದೆಡೆ ನೀರು ನಿಂತು ಲಾರ್ವಾಗಳು ಉತ್ಪತ್ತಿಯಾಗಿ ಸೊಳ್ಳೆಗಳ ಮೂಲಕ ರೋಗ ಹರಡುತ್ತಿದೆ. ಆದ್ದರಿಂದ ನೀರು ನಿಲ್ಲದಂತೆ ಮಾಡಿದಲ್ಲಿ ರೋಗ ತಡೆಯಲು ಸಾಧ್ಯ ಎಂಬುದು ಆರೋಗ್ಯಾಧಿಕಾರಿಗಳ ಸಲಹೆ. ಸಾರ್ವಜನಿಕರು ಎಲ್ಲೂ ನೀರು ನಿಲ್ಲದಂತೆ ಮಾಡಿದಲ್ಲಿ ರೋಗ ತಡೆಗಟ್ಟಬಹುದು.

ನಿಯಂತ್ರಣ ಕ್ರಮ
ಶಂಕಿತ ಡೆಂಗ್ಯೂ ಪ್ರಕರಣಗಳು ಕಂಡು ಬಂದ ಪ್ರದೇಶಗಳಲ್ಲಿ ಫಾಗಿಂಗ್‌ ಹಾಗೂ ರೋಗನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ರಕ್ತದ ಮಾದರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ವರದಿ ಬರಬೇಕಿದೆ. ವೈದ್ಯಾಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕಕರು ಮನೆಗಳಲ್ಲಿ ಸೊಳ್ಳೆಪರದೆ ಉಪಯೋಗಿಸಬೇಕು. ಕನಿಷ್ಠ ಕತ್ತಲಾಗುವ ವೇಳೆ ಕಿಟಕಿ ಬಾಗಿಲು ಹಾಕುವುದು ಅಗತ್ಯ. ಆದ ರೀತಿ ನೀರಿನ ಬಳಕೆಯಲ್ಲೂ ಎಚ್ಚರಿಕೆ ವಹಿಸಬೇಕಿದೆ.
– ಡಾ| ಕಲಾಮಧು ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿ

ಫಾಗಿಂಗ್‌
ತಾಲೂಕಿನಲ್ಲಿ ಸಾಂಕ್ರಾಮಿಕ ರೋಗ ತಡೆಯಲು ಫಾಗಿಂಗ್‌ ಮಾಡುವಂತೆ ಪಟ್ಟಣ ಪಂಚಾಯತ್‌ ಗೆ ಪತ್ರ ಬರೆಯಲಾಗಿದೆ. ರೋಗಗಳು ಕಂಡು ಬಂದಿರುವ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಾಗಿಂಗ್‌ ಮಾಡಲು ಪಿಡಿಒಗಳಿಗೆ ಸೂಚನೆ ನೀಡುವ ಮೂಲಕ ರೋಗ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುವುದು.
– ಟಿ.ಸಿ. ಹಾದಿಮನಿ, ತಹಶೀಲ್ದಾರ್‌

— ಹರ್ಷಿತ್‌ ಪಿಂಡಿವನ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.