ಪ್ರಯಾಣದರ ಹೆಚ್ಚಳ: ಸಂಚಾರ ನಿಯಂತ್ರಕ ತರಾಟೆಗೆ


Team Udayavani, Jun 2, 2018, 4:20 AM IST

xpress-bus-1-6.jpg

ಉಪ್ಪಿನಂಗಡಿ: ಮಂಗಳೂರು – ಸುಬ್ರಹ್ಮಣ್ಯ ನಡುವೆ ಸಂಚರಿಸುವ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್‌ ಗಳನ್ನೇ ವೇಗದೂತ ಬಸ್‌ಗಳನ್ನಾಗಿ ಪರಿವರ್ತಿಸಿದ್ದು, ಪ್ರಯಾಣ ದರ ಹೆಚ್ಚಿಸಿರುವ ಕುರಿತು  ಆಕ್ರೋಶ ವ್ಯಕ್ತಪಡಿಸಿರುವ ಪ್ರಯಾಣಿಕರು ಶುಕ್ರವಾರ ಇಲ್ಲಿನ ಕೆ.ಎಸ್‌.ಆರ್‌.ಟಿ.ಸಿ. ಸಂಚಾರ ನಿಯಂತ್ರಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಈ ಮೊದಲು ಸಾಮಾನ್ಯ ಬಸ್‌ಗಳಲ್ಲಿ 51 ರೂ. ಟಿಕೆಟ್‌ ಇರುತ್ತಿತ್ತು. ಈಗ ಅಷ್ಟೇ ಸಂಖ್ಯೆಯ ನಿಲುಗಡೆಗಳನ್ನು ನೀಡಿ, 106 ರೂ. ಸ್ವೀಕರಿಸಲಾಗುತ್ತಿದೆ. ಉಪ್ಪಿನಂಗಡಿಯಿಂದ ಕಡಬಕ್ಕೆ 33 ರೂ. ಇದ್ದ ಟಿಕೆಟ್‌ ದರ ವೇಗದೂತ ಎಂಬ ಕಾರಣಕ್ಕೆ 6 ರೂ. ಹೆಚ್ಚಳವಾಗಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕಡಬದಿಂದ ಶುಕ್ರವಾರ ಸುಬ್ರಹ್ಮಣ್ಯ- ಮಂಗಳೂರು ವೇಗದೂತ ಬಸ್‌ ನಲ್ಲಿ ಬಂದ ಕೆಲ ಪ್ರಯಾಣಿಕರು ಏಕಾಏಕಿ ಟಿಕೆಟ್‌ ದರ ಹೆಚ್ಚಿಸಿದ ಕುರಿತು ಸಂಚಾರ ನಿಯಂತ್ರಕರನ್ನು ತರಾಟೆಗೆ ತೆಗೆದುಕೊಂಡರು. ಸಾಮಾನ್ಯ ಬಸ್‌ ಗಳಂತೆ ಸಿಕ್ಕಸಿಕ್ಕಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು, ಇಳಿಸುವುದು ಮಾಡುತ್ತಿವೆ. ಅವಧಿಯೇನೂ ಕಡಿಮೆಯಾಗಿಲ್ಲ. ದರ ಮಾತ್ರ ಏಕೆ ಹೆಚ್ಚು ಎಂದು ಪ್ರಶ್ನಿಸಿದರು.

ಕೆ.ಎಸ್‌.ಆರ್‌.ಟಿ.ಸಿ. ಡಿಸಿ ದೀಪಕ್‌ ಮಾತನಾಡಿ, ಮೊದಲು ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಸಾಮಾನ್ಯ ಬಸ್‌ ಗಳು ಮಾತ್ರ ಪ್ರಯಾಣಿಸುತ್ತಿದ್ದವು. ಪ್ರಯಾಣದ ಅವಧಿ ಹೆಚ್ಚುವುದರಿಂದ 106 ಕಿ.ಮೀ.ನಷ್ಟು ದೂರ ಸಾಮಾನ್ಯ ಬಸ್‌ ನಲ್ಲಿ ಪ್ರಯಾಣಿಸಲು ಜನ ಇಷ್ಟಪಡುತ್ತಿಲ್ಲ. ಈಗ ಎಲ್ಲ ಬಸ್‌ ಗಳನ್ನು ವೇಗದೂತ ಬಸ್‌ ಗಳಾಗಿ ಬದಲಿಸಿ, ಟಿಕೆಟ್‌ ದರ ಹೆಚ್ಚಿಸಲಾಗಿದೆ. ಸ್ಥಳೀಯರಿಗೆ ತೊಂದರೆಯಾಗದಂತೆ ಎರಡು ಸಾಮಾನ್ಯ ಬಸ್‌ಗಳನ್ನು ಉಪ್ಪಿನಂಗಡಿಯಿಂದ ಸುಬ್ರಹ್ಮಣ್ಯಕ್ಕೆ ಪುತ್ತೂರು ಡಿಪೋದವರು ಹಾಕಬೇಕಿತ್ತು. ಅವರು ಸ್ಪಂದಿಸಿಲ್ಲ. ಹೀಗಾಗಿ, ಮಂಗಳೂರು ಡಿಪೋದಿಂದಲೇ ಎರಡು ಸಾಮಾನ್ಯ ಬಸ್‌ ಓಡಿಸಲಾಗುವುದು. ವೇಗದೂತ ಬಸ್‌ ಗಳು ಇತರೆ ಸಾಮಾನ್ಯ ಬಸ್‌ ಗಳಂತೆ ಎಲ್ಲ ಕಡೆ ನಿಲ್ಲುತ್ತವೆ ಎಂಬ ದೂರಿನ ಕುರಿತು ಪರಿಶೀಲಿಸಿ, ನಿಗದಿತ ಸ್ಥಳದಲ್ಲಿ ಮಾತ್ರ ನಿಲುಗಡೆಗೊಳಿಸಲು ಸೂಚಿಸಲಾಗುವುದು ಎಂದು ತಿಳಿಸಿದರು.


ಹೆಸರಿಗೆ ಮಾತ್ರ ವೇಗದೂತ!

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಪುತ್ತೂರು ತಾಲೂಕು ದಲಿತ್‌ ಸೇವಾ ಸಮಿತಿಯ ಅಧ್ಯಕ್ಷ ರಾಜು ಹೊಸ್ಮಠ, ಮಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ಬಸ್‌ಗಳು ಹೆಸರಿಗೆ ಮಾತ್ರ ವೇಗದೂತ ಬಸ್‌ಗಳಾಗಿ ಬದಲಾಗಿವೆ. ಕಡಬದಿಂದ ಉಪ್ಪಿನಂಗಡಿಗೆ ಸಂಚರಿಸಲು ಸಾಮಾನ್ಯ ಬಸ್‌ಗಳು ಒಂದು ಗಂಟೆ ತೆಗೆದುಕೊಳ್ಳುತ್ತವೆ. ಈಗಲೂ ಅಷ್ಟೇ ಅವಧಿ, ನಿಲುಗಡೆಗಳಿವೆ. ದರ ಹೆಚ್ಚಳ ಮಾಡಿರುವ ಉದ್ದೇಶವೇನು ಎಂದು ಪ್ರಶ್ನಿಸಿದರು. ಪ್ರಯಾಣದರ ಇಳಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ದಲಿತ್‌ ಸೇವಾ ಸಮಿತಿಯಿಂದ ಮನವಿ ಸಲ್ಲಿಸಲಾಗುವುದು ಎಂದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.