ರೇಬಿಸ್‌ ಗೆ ನಾಟಿ ಔಷಧ ರಾಮಬಾಣ ; 5,000 ಜನರಿಗೆ ಚಿಕಿತ್ಸೆ


Team Udayavani, Jun 2, 2018, 4:40 AM IST

rabies.jpg

ಆಲಂಕಾರು: ಹುಚ್ಚುನಾಯಿ ಕಚ್ಚಿದರೆ ರೇಬಿಸ್‌ ರೋಗದ ಸಾಧ್ಯತೆ ಹೆಚ್ಚು. ಅದರಿಂದ ಪಾರಾಗಲು ರೇಬಿಸ್‌ ನಿರೋಧಕ ಚುಚ್ಚುಮದ್ದಿನ ಮೊರೆಹೋಗುತ್ತಾರೆ. ಇದರ ಮಧ್ಯೆ ಪುತ್ತೂರು ತಾಲೂಕು ಆಲಂಕಾರು ಗ್ರಾಮದ ಕೇಪುಳು ನಿವಾಸಿ ಅಣ್ಣಿ ಪೂಜಾರಿ ಎಂಬ ಪಂಡಿತರು 37 ವರ್ಷಗಳಿಂದ ಗಿಡಮೂಲಿಕೆಗಳನ್ನು ಬಳಸಿ ಔಷಧ ನೀಡುತ್ತಿದ್ದಾರೆ. ಈ ಔಷಧವನ್ನು ಒಂದು ಸಲ ತೆಗೆದುಕೊಂಡರೆ, ರೇಬಿಸ್‌ ವೈರಾಣು ನಿವಾರಣೆಯಾಗುತ್ತದೆ ಎಂದು ಇವರಿಂದ ಚಿಕಿತ್ಸೆ ಪಡೆದ ಅನೇಕರು ಹೇಳಿದ್ದಾರೆ.


ತಮ್ಮ ತಾಯಿಯ ತಾಯಿಯಿಂದ (ಅಜ್ಜಿ) ಈ ಔಷಧ ಕ್ರಮ ಕಲಿತ ಅಣ್ಣಿ ಪೂಜಾರಿ (66) ಈ ತನಕ 5 ಸಾವಿರಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ಕಡಿತಕ್ಕೆ ಔಷಧ ಕೊಟ್ಟಿದ್ದಾರೆ. ಮನುಷ್ಯರಿಗೆ ಮಾತ್ರವಲ್ಲದೆ, ಜಾನುವಾರು, ನಾಯಿ, ಕೋಳಿ, ಸಾಕು ಹಂದಿಗಳಿಗೂ ನಾಟಿ ಪದ್ಧತಿಯ ಔಷಧ ನೀಡಿ, ಗುಣಪಡಿಸಿದ್ದಾರೆ. ಅವರ ಈ ಸಾಧನೆಗೆ ಆಲಂಕಾರು ಸಿ.ಎ. ಬ್ಯಾಂಕ್‌, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಬಿಲ್ಲವ ಸಂಘ ಮುಂತಾದವು ಅವರನ್ನು ಸಮ್ಮಾನಿಸಿ, ಗೌರವಿಸಿವೆ. ಹುಚ್ಚು ನಾಯಿ ಕಚ್ಚಿದ ಮೇಲೆ ಮನುಷ್ಯರಿಗಾದರೆ 42ನೇ ದಿನ, ಪ್ರಾಣಿಗಳಿಗೆ ಕೇವಲ 20 ದಿನಗಳಲ್ಲಿ ರೇಬಿಸ್‌ ರೋಗ ಶುರುವಾಗುತ್ತದೆ. ಉಲ್ಬಣಿಸಿದ ಮೇಲೆ ಯಾವ ಚಿಕಿತ್ಸೆಯೂ ಫ‌ಲ ನೀಡುವುದಿಲ್ಲ. ಆಮೇಲೆ ಮೂರು ದಿನಗಳಷ್ಟೇ ಆಯಸ್ಸು.

ಅಣ್ಣಿ ಪೂಜಾರಿ ಅವರು ಕೊಡುವ ಔಷಧಕ್ಕೆ ದರ ನಿಗದಿಯಿಲ್ಲ. ಚಿಕಿತ್ಸೆ ಪಡೆದವರು ತಮಗೆ ತೋಚಿದಷ್ಟು ಹಣ ಕೊಡುತ್ತಾರೆ. ಹಲವು ಜನರಿಗೆ ಉಚಿತವಾಗಿ ಔಷಧ ವಿತರಿಸಿದ್ದೂ ಇದೆ. ಈ ಔಷಧಕ್ಕೆ ಯಾವುದೇ ಪಥ್ಯವಿಲ್ಲ. ಆದರೆ. ಚಿಕಿತ್ಸೆ ಪಡೆದ ದಿನ ಮದ್ಯ ಸೇವಿಸುವಂತಿಲ್ಲ. ರಾತ್ರಿ ಊಟ ಮಾಡಿದ ಮೇಲೆ ಔಷಧ ಸೇವಿಸಿ ನಿದ್ರಿಸಬೇಕು. ಬೆಳಗ್ಗೆ ತಲೆಯ ಮೇಲೆ ತಣ್ಣೀರು ಸ್ನಾನ ಮಾಡಿ, ತಣ್ಣೀರನ್ನೇ ಕುಡಿಯಬೇಕು. ಆಮೇಲೆ ದೈನಂದಿನ ಕೆಲಸಗಳಿಗೆ ಹೋಗಲು ಯಾವುದೇ ಅಡ್ಡಿಯಿಲ್ಲ.

ಶೀಘ್ರ ಗುಣಮುಖ
ಕೇಪುಳು ಅಣ್ಣಿ ಪೂಜಾರಿ ಅವರ ಸಹೋದರಿ ರಾಮಕುಂಜದಲ್ಲಿ ಔಷಧ ನೀಡುತ್ತಾರೆ. ಈಗ ಎಲ್ಲ ಕಡೆಗಳಲ್ಲಿ ರಬ್ಬರ್‌ ಕೃಷಿಯಿಂದಾಗಿ ಗಿಡ ಮೂಲಿಕೆಗಳು ನಾಶವಾಗಿವೆ. ಗಿಡಮೂಲಿಕೆಗಳಿಗಾಗಿ ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯದ ವರೆಗೆ ಅಲೆದಾಡಬೇಕಾಗುತ್ತದೆ ಎನ್ನುತ್ತಾರೆ, ಅಣ್ಣಿ ಪೂಜಾರಿ (ಮೊ. 9880140030). ರೇಬಿಸ್‌ಗೆ ಮಾತ್ರವಲ್ಲದೆ ವಿಷಕಾರಿ ಜೇಡ ಕಚ್ಚಿದರೂ ಮೂರು ದಿನಗಳ ಔಷಧ ನೀಡಿ, ಗುಣಪಡಿಸುತ್ತಾರೆ. ಮೂಲವ್ಯಾಧಿಗೂ ಚಿಕಿತ್ಸೆ ನೀಡುತ್ತಾರೆ. 

— ಸದಾನಂದ ಆಲಂಕಾರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.