ಕಾಲು ಬಲಹೀನ ಬಾಲೆಗೆ ಲಕ್ಷ ರೂ. ನೆರವು


Team Udayavani, Sep 13, 2018, 4:35 AM IST

vesha-12-9.jpg

ಕಟಪಾಡಿ: ಬಡವರು, ನೊಂದವರ ಸೇವೆಯ ಮೂಲಕ ದೇವರನ್ನು ಕಾಣುವ ಕೆಲಸ ಫ್ರೆಂಡ್ಸ್‌ ಸರ್ಕಲ್‌ ಪಳ್ಳಿಗುಡ್ಡೆ ಯುವಕರ ತಂಡದಿಂದ ನಡೆದಿದೆ. ಸರ್ವರಲ್ಲಿಯೂ ರಾಷ್ಟ್ರಧ್ವಜದಡಿ ಸಹಬಾಳ್ವೆ ನಡೆಸುವ ಪರಿಕಲ್ಪನೆಯು ಬರಬೇಕಿದ್ದು, ಮಾತೃಭಕ್ತಿ, ದೇವ ಭಕ್ತಿ, ದೇಶ ಭಕ್ತಿ ಮನಮಾಡಲಿ ಎಂದು ಕೇಮಾರು ಸಾಂದೀಪನಿ ಆಶ್ರಮದ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಹೇಳಿದರು.

ಬುಧವಾರ ವಿನೋಬಾ ನಗರದಲ್ಲಿ ಫ್ರೆಂಡ್ಸ್‌ ಸರ್ಕಲ್‌ ಪಳ್ಳಿಗುಡ್ಡೆ ಯುವಕರ ತಂಡವು ಹುಟ್ಟಿನಿಂದಲೇ ತನ್ನೆರಡೂ ಕಾಲುಗಳ ಬಲ ಕಳೆದುಕೊಂಡಿರುವ ಪೊಸಾರು ಎಂಬಲ್ಲಿನ ಕಸ್ವಿ ಎಂಬ 4 ವರ್ಷದ ಬಾಲೆಯ ಶಸ್ತ್ರ ಚಿಕಿತ್ಸೆಯ ವೆಚ್ಚ ಭರಿಸಲು ಕೃಷ್ಣಾಷ್ಟಮಿಯ ಸಂದರ್ಭ ವೇಷ ಧರಿಸಿ ಸಂಗ್ರಹಗೊಂಡ‌ ಹಣದಲ್ಲಿ ಒಂದು ಲಕ್ಷ ರೂಪಾಯಿಯನ್ನು ಪೋಷಕರಿಗೆ ಹಸ್ತಾಂತರಿಸಿ ತಮ್ಮ  ಆಶೀರ್ವಚನದಲ್ಲಿ ಮಾತನಾಡಿದರು.

ಅಂಬಾಡಿ ಸಿಎಸ್‌ಐ ಚರ್ಚ್‌ನ ಧರ್ಮಗುರು ವಂ|ಎಡ್ವಿನ್‌ ಜೋಸೆಫ್‌ ಮಾತನಾಡಿ, ನೊಂದ ಮನಸ್ಸಿನ ನೋವಿಗೆ ಸ್ಪಂದಿಸುವ ಮೂಲಕ ದೇವರು ಪ್ರೀತಿಸುವ ಚಟುವಟಿಕೆಯು ಯುವತಂಡದಿಂದ ನಡೆದಿದ್ದು, ಬಾಲೆಯ ಬದುಕು ಹಸನಾಗಲಿ ಎಂದರು. ಕಟಪಾಡಿ ಜುಮ್ಮಾ ಮಸೀದಿಯ ಧರ್ಮಗುರು  ಯೂಸುಫ್‌ ಜುವಾರಿ ಮಾತನಾಡಿ, ದಾರಿ ತಪ್ಪಿದವರನ್ನು ಸರಿದಾರಿಗೆ ಕೊಂಡೊಯ್ಯುವುದೇ ಧರ್ಮಗಳ ಮೂಲ. ಕಷ್ಟಕಾಲದಲ್ಲಿ ಸಹಾಯ ಮಾಡುವ ಮಾನವೀಯತೆ ಇಲ್ಲಿ ಮೌಲ್ಯ ಪಡೆದುಕೊಂಡಿದೆ ಎಂದರು.

ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಕುಮಾರಚಂದ್ರ ಮಾತನಾಡಿ, ಅಮೂಲ್ಯವಾದ ದೇಶದ ಯುವ ಸಂಪತ್ತು ದುರ್ವ್ಯಸನ ಮುಕ್ತರಾಗಬೇಕು. ಜನಸಾಮಾನ್ಯರ ಸಂಕಷ್ಟದಲ್ಲಿ ಆಸರೆಯಾಗುವುದು ಶ್ರೇಷ್ಠ ಸೇವೆಯಾಗಿದೆ. ಇಂತಹ ಸಂಸ್ಥೆಯು ಉನ್ನತಿಗೇರಬಲ್ಲುದು ಎಂದರು.

ಈ ಸಂದರ್ಭ ವೈದ್ಯಕೀಯ ಶುಶ್ರೂಶೆ ಮತ್ತು ಮನೆ ರಿಪೇರಿಗೆ ಸಹಾಯಧನವನ್ನು ವಿತರಿಸಲಾಯಿತು. ವೇಷಧಾರಿ ಗೌರೀಶ್‌ ಪೂಜಾರಿ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು. ಜಿಪಂ ಸದಸ್ಯೆ ಗೀತಾಂಜಲಿ ಎಂ.ಸುವರ್ಣ, ತಾಲೂಕು ಪಂಚಾಯತ್‌ ಸದಸ್ಯ ರಾಜೇಶ್‌ ಕುಮಾರ್‌ ಅಂಬಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಚಂದ್ರಕಲಾ, ಸಂಸ್ಥೆಯ ಪ್ರಮುಖರಾದ ಭಾಸ್ಕರ್‌ ಕಾಂಚನ್‌, ರಮೇಶ್‌ ಕೋಟ್ಯಾನ್‌, ಸುರೇಶ್‌ ಮೇಸ್ತ್ರಿ, ಪ್ರಭಾಕರ್‌ ಕೋಟ್ಯಾನ್‌, ಉದಯ ಪೂಜಾರಿ, ರಾಹುಲ್‌ ಪೂಜಾರಿ ಉಪಸ್ಥಿತರಿದ್ದರು. ಗೀತಾಂಜಲಿ ಸುವರ್ಣ ಸ್ವಾಗತಿಸಿದರು. ಚಂದ್ರಕಲಾ ವಂದಿಸಿದರು. ರಾಜು ಸಂತೆಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.