ಸರಕಾರ ಸ್ನಾನಘಟ್ಟ ಮಾಲಿನ್ಯ ನಿಷೇಧಿಸಲಿ: ಹೆಗ್ಗಡೆ


Team Udayavani, Jun 4, 2018, 7:30 AM IST

13.jpg

ಬೆಳ್ತಂಗಡಿ: ಹುಡುಕಿದಷ್ಟು ಸಿಗುವ ಬಟ್ಟೆಗಳ ರಾಶಿ. ಅಲ್ಲಲ್ಲಿ ದೇವರ ಫೋಟೋಗಳು, ಭಕ್ತರು ಎಸೆದ ರಾಶಿಗಟ್ಟಲೆ ತೆಂಗಿನಕಾಯಿ, ಕನ್ನಡಿ, ಬಾಚಣಿಕೆ, ಟೂತ್‌ಬ್ರಶ್‌, ಚಪ್ಪಲಿ, ಪ್ಲಾಸ್ಟಿಕ್‌ ವಸ್ತು, ಮಕ್ಕಳ ಆಟಿಕೆಗಳು ಎಲ್ಲ ಸೇರಿ ಸಿಕ್ಕಿದ್ದು ಬರೊಬ್ಬರಿ 13ಕ್ಕೂ ಹೆಚ್ಚು ಲೋಡುಗಳಷ್ಟು ಕಸ… ಪವಿತ್ರ ನದಿ ನೇತ್ರಾವತಿ ತನ್ನ ಒಡಲಿನಲ್ಲಿ ಇಷ್ಟು ಕಶ್ಮಲಗಳನ್ನು ಅಡಗಿಸಿಟ್ಟುಕೊಂಡಿರುವುದು ತಿಳಿದದ್ದು ಯುವ ಬ್ರಿಗೇಡ್‌ ಕಾರ್ಯಕರ್ತರಿಂದ ನದಿ ಸ್ನಾನಘಟ್ಟ ಬಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಿಂದ. ವಿವಿಧ ರೀತಿಯ ವ್ಯವಸ್ಥೆ, ಸಮರ್ಪಕ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಹಾಕಿ ಧ್ವನಿವರ್ಧಕ ಮೂಲಕವೂ ಸೂಚನೆ ನೀಡುತ್ತಿದ್ದರೂ ಭಕ್ತರ ನಡವಳಿಕೆಗೆ ಯುವ ಬ್ರಿಗೇಡ್‌ನಿಂದಲೇ ಆಶ್ಚರ್ಯ ವ್ಯಕ್ತವಾಗಿದೆ.

ಬೆಂಗಳೂರಿನ ಯುವ ಬ್ರಿಗೇಡ್‌ ಮಾರ್ಗದರ್ಶಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹಾಗೂ ರಾಜ್ಯ ಸಂಚಾಲಕ ಚಂದ್ರಶೇಖರ್‌ ನೇತೃತ್ವದಲ್ಲಿ ರವಿವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನದಿಯ ಸ್ವತ್ಛತಾ ಕಾರ್ಯ ನಡೆಯಿತು. ಸ್ವಚ್ಛತಾ ಕಾರ್ಯ ಸ್ಥಳಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್‌, ಸುಪ್ರಿಯಾ ಹಷೇìಂದ್ರ ಕುಮಾರ್‌ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ರಾಜ್ಯದಲ್ಲಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿರುವ ಪುಣ್ಯ ಕ್ಷೇತ್ರಗಳ ನದಿಗಳು ಮಲಿನಗೊಳ್ಳುತ್ತಿವೆ. ಧರ್ಮಸ್ಥಳ ದಲ್ಲಿ ಭಕ್ತರು ಬೇಡವಾದ ಬಟ್ಟೆಬರೆ, ತ್ಯಾಜ್ಯ, ಫೋಟೊ ಗಳನ್ನು ನದಿಯಲ್ಲಿ ವಿಲೇವಾರಿ ಮಾಡದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಲ್ಲಿ ಕಸದ ಡಬ್ಬಿಗಳನ್ನು ಇರಿಸಲಾಗಿದೆಯಲ್ಲದೆ ಸೂಚನೆ ಫಲಕ ಹಾಕಿ ಮೈಕ್‌ ಮೂಲಕವೂ ಎಚ್ಚರ ಮೂಡಿಸಲಾಗುತ್ತಿದೆ. ಆದರೂ ಜನತೆ ಅರಿತುಕೊಳ್ಳುತ್ತಿಲ್ಲ. ಸ್ನಾನ ಮಾಡಿ ನದಿ ನೀರಿನಲ್ಲೇ ಬಟ್ಟೆ ಒಗೆಯುವುದರಿಂದ, ತ್ಯಾಜ್ಯ ವಿಸರ್ಜಿಸುವುದರಿಂದ ಪಾವಿತ್ರ್ಯಕ್ಕೆ ಧಕ್ಕೆ ಯಾಗುತ್ತದೆ. ಜತೆಗೆ ಅನಾರೋಗ್ಯಕರ ಪರಿಸರವೂ ನಿರ್ಮಾಣವಾಗುತ್ತದೆ. ತೀರ್ಥಕ್ಷೇತ್ರಗಳ ನದಿಗಳಲ್ಲಿ ಬಟ್ಟೆ ಒಗೆಯದಂತೆ ಸರಕಾರವೇ ಕಡ್ಡಾಯ ಹಾಗೂ ಕಟ್ಟುನಿಟ್ಟಿನ ಕಾನೂನು ಜಾರಿ ಮಾಡಬೇಕು. ಇದರಿಂದ ಸ್ವಲ್ಪ ಮಟ್ಟಿಗಾದರೂ ಮಾಲಿನ್ಯ ಕಡಿಮೆಯಾಗಬಹುದು ಎಂದರು.

ಐವರಿಗೆ ಗಾಯ
ಸ್ವತ್ಛತಾ ಕಾರ್ಯದ ವೇಳೆ ಐವರಿಗೆ ಗಾಯವುಂಟಾಯಿತು. ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಪರಸ್ಪರ ಜತೆಯಾಗಿ ಘೋಷಣೆಗಳನ್ನು ಕೂಗುವ ಮೂಲಕ ಕಾರ್ಯ ಕರ್ತರು ಸ್ವತ್ಛತಾ ಕಾರ್ಯದಲ್ಲಿ ಒಬ್ಬರನ್ನೊಬ್ಬರು ಹುರಿದುಂಬಿಸಿದರು. ದೇವರ ದರ್ಶನ ಮಧ್ಯಾಹ್ನ 3 ಗಂಟೆಯ ವರೆಗೂ ಸ್ವಚ್ಛತಾ ಕಾರ್ಯ ನಡೆಸಿದ ಕಾರ್ಯಕರ್ತರು ಬಳಿಕ ಸ್ನಾನ ಪೂರೈಸಿ, ದೇವರ ದರ್ಶನ ಪಡೆದರು. ಬಳಿಕ ಬೀಡಿನಲ್ಲಿ ಡಾ| ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಯುವ ಬ್ರಿಗೇಡ್‌ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಯುವ ಬ್ರಿಗೇಡ್‌ ರಾಜ್ಯ ಮಟ್ಟದ ಬೈಠಕ್‌ ನಡೆಯಿತು. ದೇವಸ್ಥಾನದ ವತಿಯಿಂದ ಕಾರ್ಯಕರ್ತರಿಗೆ ಉಚಿತ ಊಟ, ವಸತಿ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು.

ಕಣ ಕಣದಲ್ಲೂ  ಶಿವ
ಸ್ವಚ್ಛತೆ ವೇಳೆ ದೊರೆಯುವ ದೇವರ ಫೋಟೊಗಳನ್ನು ಒಂದೆಡೆ ಸಂಗ್ರಹಿಸಲಾಗುತ್ತದೆ. ಬಳಿಕ ಫೋಟೋಗಳ ಫ್ರೇಮ್‌ ಹಾಗೂ ಗಾಜು ತೆಗೆಯಲಾಗುತ್ತದೆ. ದೇವರ ಚಿತ್ರಗಳನ್ನು ಸಂಗ್ರಹಿಸಿ ಒಂದೆಡೆ ಹೂಳಲಾಗುತ್ತದೆ. ಹೂಳಿದ ಜಾಗದಲ್ಲಿ ಆರಳೀ ಗಿಡ ನೆಟ್ಟು ಬೆಳೆಸಲಾಗುತ್ತದೆ. ಈ ಪ್ರಕ್ರಿಯೆಗೆ “ಕಣ ಕಣದಲ್ಲೂ ಶಿವ’ ಎಂಬ ಹೆಸರಿಡಲಾಗಿದೆ. ಈಗಾಗಲೇ ಈ ರೀತಿ ಮೂರು ಹಂತಗಳಲ್ಲಿ ಸ್ವತ್ಛತೆ ನಡೆಸಿದ್ದು, ಧರ್ಮಸ್ಥಳದಲ್ಲಿ ನಾಲ್ಕನೇ ಹಂತದ ಸ್ವಚ್ಛತೆ ನಡೆಸಲಾಗಿದೆ.

ಡಾಕ್ಟರ್‌, ಎಂಜಿನಿಯರ್‌, ವಿಜ್ಞಾನಿಗಳೂ ಹಾಜರ್‌!
ರಾಜ್ಯದೆಲ್ಲೆಡೆಯಿಂದ ಆಗಮಿಸಿದ ಸುಮಾರು 500ಕ್ಕೂ ಮಿಕ್ಕಿ ಕಾರ್ಯಕರ್ತರು ಕಸ, ಕೊಳೆ ಲೆಕ್ಕಿಸದೆ ನೀರಿಗಿಳಿದು ಸ್ವತ್ಛತೆ ನಡೆಸಿ ದರು. ಕೇರಳ, ಗೋವಾದಿಂದಲೂ ಕಾರ್ಯ ಕರ್ತರು ಆಗಮಿ ಸಿದ್ದರು ಎಂಬುದು ವಿಶೇಷ. ಡಾಕ್ಟರ್‌, ಎಂಜಿನಿಯರ್‌, ವಿಜ್ಞಾನಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು, ನಿವೃತ್ತರು, ಖಾಸಗಿ ಸಂಸ್ಥೆ ಉದ್ಯೋಗಿಗಳು ಭಾಗ ವಹಿ ಸಿದ್ದರು. ಸೋದರಿ ನಿವೇದಿತಾ ಪ್ರತಿಷ್ಠಾನದ 15 ಮಂದಿ ಮಹಿಳೆಯರೂ ಪಾಲ್ಗೊಂಡಿದ್ದರು.

ಆಂದೋಲನ ರಾಷ್ಟ್ರವ್ಯಾಪಿ ಆಗಲಿ
ಭಕ್ತರು ಹೊಣೆಗಾರಿಕೆಯಿಂದ ನದಿಯ ಪಾವಿತ್ರ್ಯ ಕಾಪಾಡಬೇಕು. ಯುವಕರು, ಮುಖ್ಯವಾಗಿ ಶಾಲಾ-ಕಾಲೇಜುಗಳಲ್ಲಿರುವ ಎನ್‌.ಸಿ.ಸಿ. ಹಾಗೂ ಎನ್‌.ಎಸ್‌.ಎಸ್‌. ಸ್ವಯಂ ಸೇವಕರು ನದಿ ಸ್ವತ್ಛತೆ ಮತ್ತು ಪಾವಿತ್ರ್ಯ ಕಾಪಾಡುವ ಬಗ್ಗೆ ಅರಿವು, ಜಾಗೃತಿ ಮೂಡಿಸಬೇಕು. ಇದು ರಾಷ್ಟ್ರವ್ಯಾಪಿ ಆಂದೋಲನವಾದಲ್ಲಿ ಶುಚಿತ್ವ  ಕಾಪಾಡಲು ಸಾಧ್ಯ.
– ಡಾ| ಡಿ. ವೀರೇಂದ್ರ ಹೆಗ್ಗಡೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ

ಬಿದಿರು ನಾಟಿ
ಧರ್ಮಸ್ಥಳದಲ್ಲಿ ಕಸ, ಬಟ್ಟೆ ಹಾಕಲು ವಿಶೇಷ ವ್ಯವಸ್ಥೆ ಮಾಡಿ, ಸೂಚನಾ ಫಲಕ ಹಾಕಿರುವುದರಿಂದ ಕಸ ಕಡಿಮೆ ಇರಬಹುದೆಂದು ಭಾವಿಸಿದ್ದೆವು. ಆದರೆ ನೀರಿಗೆ ಇಳಿದ ಮೇಲೆ ನಿಜ ಅರಿವಾಯಿತು. ರಾಜ್ಯದ ಮೂಲೆ ಮೂಲೆಗಳಲ್ಲಿ ಕಲ್ಯಾಣಿ, ನದಿಗಳ ಸ್ವಚ್ಛತೆ ಜತೆಗೆ  ಜಲ ಮೂಲಗಳನ್ನು ಉಳಿಸಿಕೊಳ್ಳುವ ಕಾರ್ಯ ಯುವ ಬ್ರಿಗೇಡ್‌ನಿಂದ ನಡೆಯುತ್ತದೆ. ಮುಂದೆ ಮಳೆ ಆರಂಭ  ವಾದ ಕೂಡಲೇ ನದಿಗಳ ಜಲಾನಯನ ಪ್ರದೇಶ ಗಳಲ್ಲಿ ಬಿದಿರಿನ ಗಿಡಗಳನ್ನು ನೆಡುವ ಕಾರ್ಯ ಮಾಡಲಾಗುತ್ತದೆ.
– ಚಕ್ರವರ್ತಿ ಸೂಲಿಬೆಲೆ ಯುವ ಬ್ರಿಗೇಡ್‌ ಮಾರ್ಗದರ್ಶಕ

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.