ನದಿ ಸ್ವಚ್ಛತೆ ಅತ್ಯಂತ ಪುಣ್ಯದ ಕಾರ್ಯ: ಡಾ| ಹೆಗ್ಗಡೆ


Team Udayavani, Jun 6, 2018, 2:25 AM IST

yuva-brigade-5-6.jpg

ಬೆಳ್ತಂಗಡಿ: ನೇತ್ರಾವತಿ ನದಿ ಸ್ವಚ್ಛತಾ ಅಭಿಯಾನದೊಂದಿಗೆ ಭಕ್ತರಿಗೆ ಉತ್ತಮ ಸಂಸ್ಕಾರ ಮತ್ತು ಜ್ಞಾನದಾನವನ್ನು ಚಕ್ರವರ್ತಿ ಸೂಲಿಬೆಲೆ ಹಾಗೂ ತಂಡದ ಎಲ್ಲ ಕಾರ್ಯಕರ್ತರು ನೀಡಿದ್ದಾರೆ. ದೃಢ ಸಂಕಲ್ಪದಿಂದ ಹಾಗೂ ಶ್ರದ್ಧಾ-ಭಕ್ತಿಯಿಂದ ಮಾಡಿದ ನದಿ ಸ್ವಚ್ಛತಾ ಕಾರ್ಯ ಅತ್ಯಂತ ಪುಣ್ಯದ ಕಾರ್ಯವಾಗಿದ್ದು ಧರ್ಮಸ್ಥಳಕ್ಕೆ ದೊಡ್ಡ ಸೇವೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ನುಡಿದರು. ಅವರು ಧರ್ಮಸ್ಥಳದ ಬೀಡಿನಲ್ಲಿ ನೇತ್ರಾವತಿ ನದಿ ಸ್ನಾನಘಟ್ಟ ಬಳಿ ನೇತ್ರಾವತಿ ನದಿಯ ಸ್ವಚ್ಛತಾ ಅಭಿಯಾನ ಆಯೋಜಿಸಿದ್ದ ಯುವಾ ಬ್ರಿಗೇಡ್‌ ಕಾರ್ಯಕರ್ತರ ಸೇವೆ ಶ್ಲಾಘಿಸಿ ಅಭಿನಂದಿಸಿ ಮಾತನಾಡಿದರು.

ಅಭಯದಾನ ಸರ್ವದಾನಗಳಲ್ಲಿ ಶ್ರೇಷ್ಠವಾಗಿದೆ. ಧರ್ಮಸ್ಥಳ ಅಭಯದಾನ ನೀಡುವ ಪವಿತ್ರ ಕ್ಷೇತ್ರವಾಗಿದೆ. ವ್ಯವಹಾರದಲ್ಲಿ ಸೋಲು, ಕಷ್ಟ, ನಷ್ಟ ಉಂಟಾದಾಗ, ಕೌಟುಂಬಿಕ ಕಲಹವಾದಾಗ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆ ಉಂಟಾದಾಗ, ನೊಂದು, ಬೆಂದು, ಭಯ, ಭೀತಿಯಿಂದ ಧರ್ಮಸ್ಥಳಕ್ಕೆ ಬಂದ ಭಕ್ತರಿಗೆ ಹೆದರಬೇಡಿ ಎಂಬ ಅಭಯದಾನ ನೀಡಲಾಗುತ್ತದೆ. ಮನೆಯಲ್ಲಿ ಹಿರಿಯರು ನೊಂದು ಕಣ್ಣೀರು ಸುರಿಸಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಪೂರ್ವಜರ ಶಾಪ ದೋಷ ಪರಿಹಾರ, ವಾಕ್‌ ದೋಷ ನಿವೃತ್ತಿ, ಕೌಟುಂಬಿಕ ಕಲಹ, ಮನಸ್ತಾಪ ನಿವಾರಣೆಗಾಗಿ ಭಕ್ತರು ಪರಿಹಾರ ಕೋರಿ ಧರ್ಮಸ್ಥಳಕ್ಕೆ ಬರುತ್ತಾರೆ. ಅವರಿಗೆ ಅಭಯ ನೀಡಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿ, ಆಶೀರ್ವಾದ ಪಡೆದು, ತಪ್ಪುಕಾಣಿಕೆ ಹಾಕಿ ಕ್ಷಮೆ ಯಾಚಿಸುವಂತೆ ತಿಳಿಸಲಾಗುತ್ತದೆ ಎಂದರು.

ಯುವ ಬ್ರಿಗೇಡ್‌ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಚತುರ್ವಿಧ ದಾನ ಪರಂಪರೆ, ಶಿಸ್ತು, ಸ್ವಚ್ಛತೆ, ದಕ್ಷತೆ ಮತ್ತು ಸೇವಾ ಕಾರ್ಯ ಹಾಗೂ ಆಧುನಿಕ ತಂತ್ರಜ್ಞಾನ ಬಳಕೆಯಲ್ಲಿ ಧರ್ಮಸ್ಥಳ ಎಲ್ಲ ದೇವಸ್ಥಾನಗಳಿಗೆ ಮಾದರಿಯಾಗಿದೆ. ವೀರೇಂದ್ರ ಹೆಗ್ಗಡೆಯವರ ಪ್ರೀತಿ ಮತ್ತು ಆಶೀರ್ವಾದ ಯುವಾ ಬ್ರಿಗೇಡ್‌ ಕಾರ್ಯಕರ್ತರ ಮೇಲೆ ಇರಲಿ ಎಂದರು. ಹೆಗ್ಗಡೆಯವರು ಚಕ್ರವರ್ತಿ ಸೂಲಿಬೆಲೆ ಅವರನ್ನು ಗೌರವಿಸಿ ಅಭಿನಂದಿಸಿದರು.

ಶ್ರದ್ಧಾ – ಭಕ್ತಿ
ಧರ್ಮಸ್ಥಳದಲ್ಲಿ ವಿಶಿಷ್ಟ ಶಿಸ್ತು, ಸಂಪ್ರದಾಯ ಮತ್ತು ಪರಂಪರೆ ಇದೆ. ಮಾತುಬಿಡ ಮಂಜುನಾಥ ಎಂಬ ಮಾತು ಎಲ್ಲರಿಗೂ ಚಿರಪರಿಚಿತವಿದೆ. ಧರ್ಮಸ್ಥಳದಿಂದ ಒಂದು ಕಲ್ಲನ್ನೂ ಹೊರಗೆ ತೆಗೆದುಕೊಂಡು ಹೋಗಬಾರದು ಎಂಬ ಸಂಪ್ರದಾಯವಿದೆ. ಶ್ರೀ ಮಂಜುನಾಥ ಸ್ವಾಮಿಯ ಮೇಲೆ ಶ್ರದ್ಧಾ – ಭಕ್ತಿ ಹಾಗೂ ಅಣ್ಣಪ್ಪ ಸ್ವಾಮಿಯ ಭಯದಿಂದ ಎಲ್ಲ ಕೆಲಸಗಳು ಸುಗಮವಾಗಿ ನಡೆಯುತ್ತವೆ ಎಂದು ಹೆಗ್ಗಡೆ ಅವರು ನುಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.