ವಿಧಾನಪರಿಷತ್‌ನ ಎರಡು ಕ್ಷೇತ್ರಗಳಿಗೆ ಶಾಂತಿಯುತ ಮತದಾನ


Team Udayavani, Jun 9, 2018, 11:30 AM IST

9-june-8.jpg

ಪುತ್ತೂರು: ವಿಧಾನಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಶುಕ್ರವಾರ ತಾಲೂಕು ಕೇಂದ್ರದಲ್ಲಿ ಶಾಂತಿಯುತ ಮತದಾನ ಪ್ರಕ್ರಿಯೆ ನಡೆಯಿತು.

ತಾ.ಪಂ. ಕಚೇರಿ ವ್ಯಾಪ್ತಿಯ 3 ಮತದಾನ ಕೇಂದ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5ರ ತನಕ ಮತದಾನ ಪ್ರಕ್ರಿಯೆ ನಡೆಯಿತು. ಪದವೀಧರ ಮತದಾರ ಕ್ಷೇತ್ರದ ಮತ ಚಲಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ 18ರ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಒಟ್ಟು
875 ಮತದಾರರು, ಮತಗಟ್ಟೆ 18 ‘ಎ’ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ 875 ಮತದಾರರಿಗೆ ಮತದಾನ ಕೇಂದ್ರವನ್ನು ತೆರೆಯಲಾಗಿತ್ತು. ಶಿಕ್ಷಕ ಕ್ಷೇತ್ರದ ಮತದಾನಕ್ಕೆ ಸಂಬಂಧಿಸಿದಂತೆ ಸಾಮರ್ಥ್ಯಸೌಧದಲ್ಲಿ 805 ಮಂದಿ ಮತದಾರರಿಗೆ ಮತದಾನ ಕೇಂದ್ರವನ್ನು ತೆರೆಯಲಾಗಿತ್ತು.

ಕೇಂದ್ರ ಸಚಿವ, ಶಾಸಕರಿಂದ ಮತದಾನ
ಪುತ್ತೂರಿನಲ್ಲಿ ಮತದಾನ ಹಕ್ಕನ್ನು ಹೊಂದಿರುವ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಶಾಸಕ ಸಂಜೀವ ಮಠಂದೂರು ಅವರು ಬೆಳಗ್ಗೆ 10ರಿಂದ ಮತದಾನ ಕೇಂದ್ರಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು. ಬಿಜೆಪಿ ಪಕ್ಷದ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಆರ್‌.ಸಿ. ನಾರಾಯಣ, ಡಿ. ಶಂಭು ಭಟ್‌, ಪುಲಸ್ತ್ಯಾ ರೈ, ರಾಮದಾಸ್‌ ಹಾರಾಡಿ, ಚಂದ್ರಶೇಖರ್‌ ಬಪ್ಪಳಿಗೆ, ರಾಕೇಶ್‌ ರೈ ಕೆಡೆಂಜಿ ಮತಚಲಾಯಿಸಿದರು.

ಪದವೀಧರ ಕ್ಷೇತ್ರದ ಮತಗಟ್ಟೆಯಲ್ಲಿ ಸುಳ್ಯ ಹಾಗೂ ಮಡಪ್ಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾದ ಶ್ಯಾಮ್‌ಪ್ರಸಾದ್‌ ಮತ್ತು ಪ್ರವೀಣ್‌ ಕುಮಾರ್‌, ಶಿಕ್ಷಕ ಕ್ಷೇತ್ರದ ಮತಗಟ್ಟೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಶಿವರಾಜ್‌ ಮತಗಟ್ಟೆ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.

ಮತದಾರರಿಗೆ ನೀಡಲಾದ ನೇರಳೆ ಬಣ್ಣದ ಸ್ಕೆಚ್‌ ಪೆನ್‌ನಲ್ಲಿ ತಮ್ಮ ಆದ್ಯತೆಗೆ ಅನುಗುಣವಾಗಿ  ಪ್ರಾಶಸ್ತ್ಯದ ಮತವನ್ನು ಅಂಕೆಗಳ ಮೂಲಕ ಬ್ಯಾಲೆಟ್‌ ಪೇಪರ್‌ನಲ್ಲಿ ನಮೂದಿಸಿದರು. ಈ ಚುನಾವಣೆಗೆ ಇವಿಎಂ ಮತಯಂತ್ರದ ಬಳಕೆ ಇರಲಿಲ್ಲ.

ಬಿಗಿ ಭದ್ರತೆ
ಚುನಾವಣೆಯ ಹಿನ್ನೆಲೆಯಲ್ಲಿ ಮತದಾನ ಕೇಂದ್ರಗಳಲ್ಲಿ ಹಾಗೂ ಆವರಣದಲ್ಲಿ ಪಾರದರ್ಶಕ ಹಾಗೂ ಸುವ್ಯವಸ್ಥೆಯ ಹಿನ್ನೆಲೆಯಲ್ಲಿ ಸೆಕ್ಷನ್‌ ಹೇರಲಾಗಿತ್ತು. ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಪೊಲೀಸ್‌ ಬಂದೋಬಸ್ತ್ ನಡೆಸಲಾಗಿತ್ತು. ಪುತ್ತೂರು ಸಹಾಯಕ ಕಮಿಷನರ್‌ ಎಚ್‌. ಕೆ. ಕೃಷ್ಣಮೂರ್ತಿ ಸ್ಥಳದಲ್ಲಿ ಉಪಸ್ಥಿತರಿದ್ದು ವವಸ್ಥೆಯ ಪರಿಶೀಲನೆ ನಡೆಸಿದರು.

ಸುಳ್ಯ ಬಿರುಸಿನ ಮತದಾನ 
ಸುಳ್ಯ : ವಿಧಾನಪರಿಷತ್‌ ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಿಗೆ ಸಂಬಂಧಿಸಿ ಶುಕ್ರವಾರ ಸುಳ್ಯ ತಾಲೂಕು ಕಚೇರಿ ಮತ್ತು ಪಂಜ ನಾಡ ಕಚೇರಿ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು. ನೈಋತ್ಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿ ಸುಳ್ಯ ಮತಗಟ್ಟೆ 19ರಲ್ಲಿ 338 ಪುರುಷ, 206 ಮಹಿಳಾ ಮತದಾರರು ಸಹಿತ 544 ಮಂದಿ ಹಕ್ಕು ಚಲಾಯಿಸಿ, ಶೇ. 79.42 ಮತದಾನವಾಗಿದೆ. ಪಂಜ ಮತಗಟ್ಟೆ 20ರಲ್ಲಿ 86 ಪುರುಷರು, 71 ಮಹಿಳೆಯರು ಸಹಿತ 157 ಮಂದಿ ಹಕ್ಕು ಚಲಾಯಿಸಿ, ಶೇ. 85.33 ರಷ್ಟು ಮತದಾನವಾಗಿದೆ.

ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಂಬಂಧಿಸಿ ಸುಳ್ಯ ಮತಗಟ್ಟೆ ಸಂಖ್ಯೆ 19ರಲ್ಲಿ 192 ಪುರುಷ, 153 ಮಹಿಳಾ ಮತದಾರರು ಸಹಿತ 345 ಮಂದಿ ಹಕ್ಕು ಚಲಾಯಿಸಿ, ಶೇ. 81.37ರಷ್ಟು ಮತದಾನವಾಗಿದೆ. ಪಂಜ ಮತಗಟ್ಟೆ ಸಂಖ್ಯೆ 20ರಲ್ಲಿ 68 ಪುರುಷ ಮತ್ತು 37 ಮಹಿಳಾ ಮತದಾರರು ಸಹಿತ 105 ಮಂದಿ ಹಕ್ಕು ಚಲಾಯಿಸಿ, ಶೇ. 82.03 ಮತದಾನವಾಗಿದೆ. ಅಪರಾಹ್ನ 1 ಗಂಟೆ ಹೊತ್ತಿಗೆ ನೈಋತ್ಯ ಪದವೀಧರ ಕ್ಷೇತ್ರ ಮತಗಟ್ಟೆ 19ರಲ್ಲಿ 48.91, 20ರಲ್ಲಿ 62.50 ಹಾಗೂ ಶಿಕ್ಷಕರ ಕ್ಷೇತ್ರದ 19ರಲ್ಲಿ 59.67, 20ರಲ್ಲಿ 65.63 ಶೇ. ಮತದಾನವಾಗಿತ್ತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.