ಭಾರೀ ಮಳೆ ಭೂ ಕುಸಿತ, ಮನೆಗಳಿಗೆ ಹಾನಿ


Team Udayavani, Jun 15, 2018, 2:40 AM IST

bhukusita-14-6.jpg

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಭಾರೀ ಮಳೆಯಿಂದಾಗಿ ಭೂ ಕುಸಿತ ಹಾಗೂ ಮನೆಗಳಿಗೆ ಹಾನಿ ಉಂಟಾಗಿದ್ದು, ಶಾಸಕ ಹರೀಶ್‌ ಪೂಂಜ ಅವರು ಸಂಬಂಧಿತ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ, ಸಮಸ್ಯೆ ಬಗೆಹರಿಸುವ ಭರವಸೆಯಿತ್ತರು. ರೆಂಕೆದ ಗುತ್ತು ಬಳಿ ಮಹಿಳೆಯರು ವಾಸವಿದ್ದ ಮನೆಗೆ ಹಾನಿಯಾಗಿದೆ. ಇಂದಬೆಟ್ಟು ಗ್ರಾಮದ ಫಾತಿಮಾ ಹಾಗೂ ಬಂಗಾಡಿಯ ಮಹಮದ್‌ ಅವರ ಮನೆಗೆ ಹಾನಿಯಾಗಿದೆ. ಲಾೖಲ ಗ್ರಾಮದ ಕಾವಟೆ ನಿವಾಸಿ ನಟರಾಜ್‌ ಗೌಡ ಅವರ ಮನೆ ಮೇಲೆ ಗುಡ್ಡ ಕುಸಿದಿದ್ದು, ಕಿಟಕಿ ಮೂಲಕ ಮಣ್ಣು ಮನೆಯ ಒಳಗೆ ಬಂದಿದೆ. ಇದರಿಂದಾಗಿ ಮನೆ ಪೂರ್ತಿ ಕೆಸರಿನಿಂದ ಆವೃತವಾಗಿದೆ. ಅಂಕಾಜೆಯ ಉಮೇಶ್‌ ಗೌಡ ಅವರ ಮನೆ ಬಳಿ ಗುಡ್ಡ ಕುಸಿದು ಹಾನಿಯಾಗಿದೆ. ಪ್ರಕಾಶ್‌, ಆನಂದ್‌, ಕಲಾವತಿ, ಲಲಿತಾ ಅವರ ಮನೆಗಳೂ ಅಪಾಯದ ಸ್ಥಿತಿಯಲ್ಲಿದ್ದು, ಶಾಸಕ ಹರೀಶ್‌ ಪೂಂಜ ಭೇಟಿ ನೀಡಿದರು.

ಸಂಚಾರ ಸ್ಥಗಿತ
ಲಾೖಲ – ಅಗರಿ ಸಡಕ್‌ ರಸ್ತೆಯಲ್ಲಿ ಕಾವಟೆ ಬಳಿ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಆಗಮಿ ಸಿದ ಶಾಸಕ ಹರೀಶ್‌ ಪೂಂಜ ಕ್ರಮ ಕೈಗೊಳ್ಳಲು ಸೂಚಿಸಿದರು.

ಹೊಳೆ: ನಿವಾಸಿಗಳಿಗೆ ಜಾಗ
ಲಾೖಲ ಗಾಂಧಿನಗರ ಬಳಿ ಹೊಳೆ ಬದಿ ವಾಸಿಸುತ್ತಿದ್ದ ವಸಂತಿ, ಜಗನ್ನಾಥ, ಶ್ರೀಧರ, ಜಗನ್ನಾಥ್‌, ಶಾರದಾ, ಚಂದ್ರಶೇಖರ ಅವರ ಜಾಗ ಹೆಚ್ಚು ಮಳೆ ಬಂದಾಗ ಮುಳುಗಡೆಯಾಗುತ್ತಿದ್ದು, ಸಮೀಪದಲ್ಲಿದ್ದ ಡಿಸಿ ಮನ್ನಾ ಭೂಮಿ ಗುರುತಿಸಿ 6 ಕುಟುಂಬಗಳಿಗೂ ತಲಾ 2.5 ಸೆಂಟ್ಸ್‌ ಜಾಗ ನೀಡಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಸ್ಥಳದಲ್ಲಿ ಕಂದಾಯಾಧಿಕಾರಿ ರವಿ, ಪಿಡಿಒ ಪ್ರಕಾಶ್‌ ಶೆಟ್ಟಿ, ಕಾನಿಷ್ಕಾ, ಗ್ರಾ.ಪಂ ಉಪಾಧ್ಯಕ್ಷ ಗಿರೀಶ್‌ ಡೋಂಗ್ರೆ, ತಾ.ಪಂ. ಸದಸ್ಯ ಸುಧಾಕರ, ಕೃಷ್ಣಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಪೂಂಜ ಅಭಯ
ಶಾಸಕ ಹರೀಶ್‌ ಪೂಂಜ ಅವರು ಫೇಸ್‌ ಬುಕ್‌ ಮೂಲಕ ಸಾರ್ವಜನಿಕರಿಗೆ ಅಭಯ ನೀಡಿದ್ದಾರೆ. ತಾಲೂಕಿನಲ್ಲಿ ಸಮಸ್ಯೆಗಳಾದಲ್ಲಿ ನೇರವಾಗಿ ಸಂಪರ್ಕಿಸಲು ದೂರವಾಣಿ ಸಂಖ್ಯೆಯನ್ನು ನೀಡಿದ್ದಾರೆ. ಜಾಗರೂಕರಾಗಿರಿ, ನಿಧಾನವಾಗಿ ವಾಹನ ಚಲಾಯಿಸಿ ಎನ್ನುವ ಮೂಲಕ ಕಾಳಜಿ ಮೆರೆದಿದ್ದಾರೆ. ತಮ್ಮ ಊರುಗಳಲ್ಲಿ ಜನರಿಗೆ ಸಹಾಯ ಬೇಕಾಗಬಹುದು, ಅಗತ್ಯ ವಸ್ತುಗಳು, ಔಷಧ ಮೊದಲಾದ ವ್ಯವಸ್ಥೆ ಬೇಕಾದವರಿಗೆ ಸಹಾಯ ಮಾಡುವಂತೆ ಸ್ವಯಂ ಸೇವಕರು, ಬಿಜೆಪಿ ಕಾರ್ಯಕರ್ತರು, ಯುವ ಮೋರ್ಚಾ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

10 ಕೋ. ರೂ. ಬಿಡುಗಡೆ ಮಾಡಿ
ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿದ್ದು, ಸೂಕ್ತ ಕ್ರಮಕೈಗೊಳ್ಳಲು ಹಾಗೂ ಪರ್ಯಾಯ ವ್ಯವಸ್ಥೆಗೆ ಸೂಚಿಸಲಾಗಿದೆ. ತಾಲೂಕಿನಲ್ಲಿ ಗರಿಷ್ಠ ಹಾನಿಯಾಗಿದ್ದು, ರಾಜ್ಯ ಸರಕಾರದ ಕಂದಾಯ ಸಚಿವರು ಕೂಡಲೇ ತಾಲೂಕಿಗೆ ವಿಶೇಷ ನಿಧಿಯಾಗಿ 10 ಕೋಟಿ ರೂ. ಬಿಡುಗಡೆ ಮಾಡಬೇಕಿದೆ. ಸುರಕ್ಷತಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದು, ಸಮಸ್ಯೆ ಕುರಿತು ತತ್‌ ಕ್ಷಣ ವರದಿ ನೀಡುವಂತೆ ಸೂಚಿಸಲಾಗಿದೆ.
– ಹರೀಶ್‌ ಪೂಂಜ, ಶಾಸಕರು

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.