ಚೆನ್ನೈತ್ತೋಡಿ, ಕಾವಳಮೂಡೂರು: ಅಪಾರ ಹಾನಿ


Team Udayavani, Jun 15, 2018, 2:20 AM IST

kavalamuduru-14-6.jpg

ಪುಂಜಾಲಕಟ್ಟೆ: ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬಂಟ್ವಾಳ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ತೋಡುಗಳಲ್ಲಿ ನೀರಿನ ಪ್ರವಾಹ ಹೆಚ್ಚಾಗಿ ಗದ್ದೆಯ ಬದುಗಳು ಕೊಚ್ಚಿ ಹೋಗಿ ಬಯಲುಗದ್ದೆ ಜಲಾವೃತವಾಗಿದೆ. ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ನಾಣ್ಯಪ್ಪ ಪೂಜಾರಿ ಅವರ ಎರಡು ಎಕ್ರೆ ಗದ್ದೆ ಸಂಪೂರ್ಣ ಜಲಾವೃತವಾಗಿದ್ದು, ಬೆಳೆ ನಾಶವಾಗಿದೆ. ಪತ್ತುರ್ಲೆಯಿಂದ ಬೆಟ್ಟುಗದ್ದೆಯವರೆಗೆ ಗದ್ದೆ ಬದು ಕೊಚ್ಚಿ ಹೋಗಿದೆ. ಇಲ್ಲಿನ ಗಂಗಾಧರ ಪೂಜಾರಿ, ಸುಂದರ ಪೂಜಾರಿ, ದುಗುರಮ್ಮ, ಲೀಲಾ ಮೂಲ್ಯೊಟ್ಟು, ರುಕ್ಮಿಣಿ, ಗೋಪಿ, ನಾಲೊಡಿ ಡೊಂಬಯ, ಹೊಸಮನೆ ನಾರಾಯಣ ಪೂಜಾರಿ, ದೋತಿಮಾರ್‌ ಕಲ್ಯಾಣಿ, ರಾಜು ಪೂಜಾರಿ ಅವರ ಗದ್ದೆಗಳಲ್ಲಿ ಕೆಸರು ಸಹಿತ ನೀರು ತುಂಬಿ ಬೆಳೆ ನಾಶವಾಗಿ ಲಕ್ಷಾಂತರ ರೂ. ನಷ್ಟವಾಗಿದೆ.

ವಿದ್ಯುತ್‌ ಸಂಪರ್ಕ ಕಡಿತ 
ಗಾಳಿ, ಮಳೆಗೆ ಮರದ ಗೆಲ್ಲುಗಳು ವಿದ್ಯುತ್‌ ತಂತಿಗಳ ಮೇಲೆ ಬಿದ್ದು, ವಿದ್ಯುತ್‌ ಸಂಪರ್ಕ ಕಡಿದಿದೆ. ಜಿ.ಪಂ. ಎಂ. ತುಂಗಪ್ಪ ಬಂಗೇರ  ಕಂದಾಯ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಿ ನಷ್ಟದ ವಿವರ ನೀಡಲು ಸೂಚಿಸಿದ್ದಾರೆ. ಪಂ. ಅಭಿವೃದ್ಧಿ ಅಧಿಕಾರಿ ಧರ್ಮರಾಜ್‌, ಮಾಜಿ  ಪಂ. ಸದಸ್ಯ ಪ್ರಕಾಶ್‌ ಶೆಟ್ಟಿ ಕಕ್ಕಿಬೆಟ್ಟು, ಗ್ರಾ.ಪಂ. ಸದಸ್ಯರಾದ ಮೋಹನದಾಸ ಗಟ್ಟಿ, ಲಕ್ಷ್ಮೀ ನಾರಾಯಣ ಪೂಜಾರಿ,  ಸ್ಥಳೀಯ ಪ್ರಮುಖರಾದ ಬೂಬ ಪೂಜಾರಿ ಕುದ್ಕಂದೋಡಿ, ನಾರಾಯಣ ಪೂಜಾರಿ, ಲೋಕನಾಥ ಪೂಜಾರಿ, ಸುಂದರ ಪೂಜಾರಿ ಮತ್ತಿತರರು ಆಗಮಿಸಿ ತಾತ್ಕಾಲಿಕ ಸಹಾಯ ನೀಡಿದ್ದಾರೆ.

ಕಾವಳಮೂಡೂರಿನ ಕೆದ್ದಳಿಕೆ ಸಮೀಪದ ಕೋಡಿಪೀರ್ಯದಲ್ಲಿ ಯಶೋಧರ ಅವರ ತೋಟದ ಬದಿಯ ಗುಡ್ಡದ ಮಣ್ಣು ಜರಿದು ತೋಡಿಗೆ ಬಿದ್ದು, ತಡೆಯುಂಟಾಗಿ ನೀರು ಗದ್ದೆಗೆ ನುಗ್ಗಿ ಹಾನಿಯುಂಟಾಗಿದೆ. ಇಲ್ಲಿನ ಕಾರಿಂಜಬೈಲು, ಪೆರುವಾರು ಕಡೆಗಳಲ್ಲಿ ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿ ಉಂಟಾಗಿದೆ. ಅಡಿಕೆ ಮರ ಗಳು ಮುರಿದು ಬಿದ್ದಿವೆ. ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌ ಕಾವಳ ಮೂಡೂರು ಪಿಡಿಒ ಅಧಿಕಾರಿ ವೇದವ ಸ್ಥಳಗಳಿಗೆ ತೆರಳಿದ್ದಾರೆ. ಕಂದಾಯ ಇಲಾಖಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.


ಬೆಳ್ತಂಗಡಿ:
ಚಾರ್ಮಾಡಿ ಘಾಟಿಯ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಘಾಟಿಯ ನಿರ್ವಹಣ ಕಾರ್ಯವನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ವೀಕ್ಷಿಸಿದರು. ಹಸನಬ್ಬ ಚಾರ್ಮಾಡಿ, ಜಿ.ಪಂ. ಸದಸ್ಯರಾದ ನಮಿತಾ, ಧರಣೇಂದ್ರ ಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಬೆಳ್ತಂಗಡಿ ಕಾರ್ಮಿಕ ಘಟಕ (ಗ್ರಾಮೀಣ) ಅಧ್ಯಕ್ಷ  ಮೋಹನ್‌ ಗೌಡ ಕಲ್ಮಂಜ ಮೊದಲಾದವರಿದ್ದರು. ಈ ಸಂದರ್ಭ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಹೆದ್ದಾರಿ ಬದಿಯ ಚರಂಡಿಗಳ ನಿರ್ವಹಣೆಯಾಗದ ಕುರಿತು ರಾ.ಹೆ. ಪ್ರಾಧಿಕಾರದ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ತೀವ್ರ ತರಾಟೆಗೆ ತೆಗೆದುಕೊಂಡು ಇನ್ನು 10 ದಿನಗಳೊಳಗೆ ಸರಿಪಡಿಸುವಂತೆ ಸೂಚಿಸಿದರು. ಮಾಜಿ ಶಾಸಕರು ಅಧಿಕಾರಿ ಜತೆ ಮಾತನಾಡುವ ವೀಡಿಯೋ ಈಗ ವೈರಲ್‌ ಆಗಿದೆ.


ಬೆಳ್ತಂಗಡಿ: ಗುರುವಾಯನಕೆರೆ ಬಳಿ ಮನೆ ಆವರಣಕ್ಕೆ ಚರಂಡಿ ನೀರು ನುಗ್ಗಿದೆ.

ಬೆಳ್ತಂಗಡಿ: ಲಾೖಲ- ಅಗರಿ ಸಡಕ್‌ ರಸ್ತೆಯ ಕಾವಟೆ ಬಳಿ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದಿದೆ.

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯ ಮುಂಭಾಗ ಆವರಣ ಗೋಡೆ ಕುಸಿದಿದೆ.

ಕೊಡಂಬೆಟ್ಟುವಿನಲ್ಲಿ ತೋಡಿನ ಬದು ಒಡೆದು ಗದ್ದೆಗಳಿಗೆ ನೀರು ನುಗ್ಗಿದೆ.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.