139 ವರ್ಷ ಹಳೆಯ ವಿಟ್ಲ  ಶಾಲೆ ದಾಖಲೆ


Team Udayavani, Jun 17, 2018, 6:00 AM IST

q-25.jpg

ವಿಟ್ಲ: ಕನ್ನಡ ಮಾಧ್ಯಮ ಸರಕಾರಿ ಶಾಲೆಗಳು ಮುಚ್ಚುತ್ತಿರುವಂತೆ 139 ವರ್ಷ ಹಳೆಯ ವಿಟ್ಲದ ಶಾಲೆ ದಾಖಲೆ ಬರೆದಿದೆ. ಇಲ್ಲಿನ 1ನೇ ತರಗತಿಗೆ ಬರೋಬ್ಬರಿ 124 ಮಕ್ಕಳು ದಾಖಲಾಗಿದ್ದಾರೆ. ಜತೆಗೆ 2ರಿಂದ 8ನೇ ತರಗತಿ ವರೆಗೆ ಈ ಶೈಕ್ಷಣಿಕ ವರ್ಷದಲ್ಲಿ ಅತಿ ಹೆಚ್ಚು ದಾಖಲಾತಿ ಆಗಿದೆ. 

1ನೇ ತರಗತಿಗೆ 124 ಮಕ್ಕಳು
ಶುಕ್ರವಾರ ವರೆಗೆ 1ನೇ ತರಗತಿಗೆ 124 ಮಕ್ಕಳ ಸೇರ್ಪಡೆ ಆಗಿದೆ. 2ನೇ ತರಗತಿಗೆ 10, 3-12, 4-5, 5- 17, 6-49, 7-13, 8ನೇ ತರಗತಿಗೆ 16 ಮಕ್ಕಳು ಸೇರಿ ಒಟ್ಟು ಈ ವರ್ಷ 245 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. ಆಂಗ್ಲ ಮಾಧ್ಯಮದ 21 ಸಹಿತ ಈ ವರ್ಷ ವಿದ್ಯಾರ್ಥಿಗಳ ಸಂಖ್ಯೆ 953 ಆಗಿದೆ. ಪೂರ್ವ ಪ್ರಾಥಮಿಕದಲ್ಲಿ 205 ಮಕ್ಕಳು ಸೇರಿದ್ದಾರೆ. ಎಲ್‌ಕೆಜಿಗೆ 101, ಯುಕೆಜಿಗೆ 104 ಮಕ್ಕಳು ಸೇರ್ಪಡೆಗೊಂಡಿದ್ದಾರೆ. ನ್ಪೋಕನ್‌ ಇಂಗ್ಲಿಷ್‌ ತರಗತಿಗಳೂ ಇವೆ.

ಮುಖ್ಯ ಶಿಕ್ಷಕರೇ ಇಲ್ಲ!
ಈ ಶಾಲೆಯಲ್ಲಿ ಮುಖ್ಯ ಶಿಕ್ಷಕರೇ ಇಲ್ಲ. ಬಿ. ವಿಶ್ವನಾಥ ಗೌಡ ಪ್ರಭಾರ ಮುಖ್ಯೋಪಾಧ್ಯಾಯರಾಗಿದ್ದಾರೆ. ಸರಕಾರ ಒದಗಿಸಿದ ಶಿಕ್ಷಕರ ಸಂಖ್ಯೆ 15. ಈ ವರ್ಷ ಮಕ್ಕಳ ಸಂಖ್ಯೆ ಹೆಚ್ಚಿದ್ದು, ಇನ್ನೂ 5 ಶಿಕ್ಷಕರ ಆವಶ್ಯಕತೆಯಿದೆ. 11 ಗೌರವ ಶಿಕ್ಷಕರಿದ್ದಾರೆ. ಪೂ. ಪ್ರಾ. ಶಿಕ್ಷಣಕ್ಕೆ ಸುಬ್ರಾಯ ಪೈ 4 ಶಿಕ್ಷಕರು ಮತ್ತು ಐವರು ಸಹಾಯಕರನ್ನು ಒದಗಿಸಿದ್ದಾರೆ.  

ದಾಖಲೆಗೆ ಪೈ-ರೈ ಕಾರಣ
ಶಾಲೆಯ ಹಳೆ ವಿದ್ಯಾರ್ಥಿ ಸುಬ್ರಾಯ ಪೈ ಭಾರತೀ ಜನಾರ್ದನ ಸೇವಾ ಟ್ರಸ್ಟ್‌ ಮೂಲಕ ಈ ಶಾಲೆಯನ್ನು ದತ್ತು ಸ್ವೀಕರಿಸಿ ಸೌಲಭ್ಯ ಕಲ್ಪಿಸಿದರು. ಹಳೆ ವಿದ್ಯಾರ್ಥಿ ಅಜಿತ್‌ ಕುಮಾರ್‌ ರೈ ಸುಪ್ರಜಿತ್‌ ಫೌಂಡೇಶನ್‌ ಮೂಲಕ ಈ ಶಾಲೆಗೆ ಅವರ ತಂದೆ ಡಾ| ಮಂಜುನಾಥ ರೈ ಮತ್ತು ತಾಯಿ ಹೇಮಾವತಿ ರೈ ಅವರ ನೆನಪಿಗಾಗಿ 1.25 ಕೋಟಿ ರೂ.ಗಳ ಮೂರು ಮಹಡಿಯ ಕಟ್ಟಡ ನೀಡಿದ್ದಾರೆ. ರೈ ಅವರ ಇಂಗ್ಲೆಂಡ್‌ ಗೆಳೆಯ ಪೀಠೊಪಕರಣ ನೀಡಿದ್ದಾರೆ.  ನಿವೃತ್ತ ಪ್ರಾಂಶುಪಾಲ ಎಂ. ಅನಂತಕೃಷ್ಣ ಹೆಬ್ಟಾರ್‌, ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನ ಉಪಾಹಾರ, ಆರ್‌ಕೆ ಆರ್ಟ್ಸ್ ನಿರ್ದೇಶಕ ರಾಜೇಶ್‌ ವಿಟ್ಲ ಅವರಿಂದ ನಾಟ್ಯ ತರಬೇತಿ, ರಂಗ ತರಬೇತಿ ಇದೆ. ಸರಕಾರ 18 ಲಕ್ಷ ರೂ.ಗಳ ಅನುದಾನದಲ್ಲಿ ಎರಡು ಕೊಠಡಿಗಳನ್ನು ಒದಗಿಸಿದೆ.

ಸುಬ್ರಾಯ ಪೈ, ಅಜಿತ್‌ ಕುಮಾರ್‌ ರೈ, ಶಿಕ್ಷಣ ಇಲಾಖೆ ನಮ್ಮ ಶಾಲೆಗೆ ಸ್ಫೂರ್ತಿ ನೀಡಿದೆ.  ಶಿಕ್ಷಕರು ಒಂದೇ ತಂಡವಾಗಿ ಶ್ರಮಿಸುತ್ತಿದ್ದಾರೆ. ಸ್ಥಳೀಯರ ಸಹಕಾರವೂ ಸಿಕ್ಕಿದೆ. ಇದೆಲ್ಲವೂ  ಮಕ್ಕಳ ಭಾಗ್ಯ. 
ಬಿ. ವಿಶ್ವನಾಥ ಗೌಡ, ಪ್ರಭಾರ ಮುಖ್ಯೋಪಾಧ್ಯಾಯರು

ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.