ವಿಟ್ಲ, ಕೇಪು: ಸಚಿವ ಖಾದರ್ ಅವರಿಗೆ ಸ್ವಾಗತ
Team Udayavani, Jun 23, 2018, 4:09 PM IST
ವಿಟ್ಲ : ಖಾಸಗಿ ಕಾರ್ಯಕ್ರಮ ನಿಮಿತ್ತ ಕೇಪು ಗ್ರಾಮಕ್ಕೆ ಆಗಮಿಸಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರಿಗೆ ವಿಟ್ಲ ನಗರ ಕಾಂಗ್ರೆಸ್ ಹಾಗೂ ಕೇಪು ಗ್ರಾಮ ಸಮಿತಿ ವತಿಯಿಂದ ಸ್ವಾಗತ ಕೋರಲಾಯಿತು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ, ವಿಟ್ಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಕೆ.ಎಂ. ಅಶ್ರಫ್, ವಿಟ್ಲ ಪ.ಪಂ. ನಾಮ ನಿರ್ದೇಶಿತ ಸದಸ್ಯ ವಿ.ಎಚ್. ಸಮೀರ್ ಪಳಿಕೆ, ಅಬ್ದುಲ್ ರಹಿಮಾನ್ ಕುರುಂಬಳ, ವಸಂತ ಶೆಟ್ಟಿ ಕೂಡೂರು ಮೊದಲಾದವರು ಉಪಸ್ಥಿತರಿದ್ದರು.
ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಬಾಳೆಕಲ್ಲು, ಕೇಪು ಗ್ರಾ.ಪಂ. ಸದಸ್ಯರಾದ ಅಬ್ದುಲ್ ಕರೀಂ ಕುದ್ದುಪದವು, ಸುಮಿತ್ರಾ, ಕೇಶವ ಉಪಾಧ್ಯಾಯ, ಪುಣಚ ಸೇವಾ ಸಹಕಾರಿ ಸಂಘದ ನಿರ್ದೇಶಕ ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ ಮತ್ತಿತರರು ಉಪಸ್ಥಿತರಿದ್ದರು.