ಬಿಳಿನೆಲೆ: ಆಮ್ನಿ ಮೇಲೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ


Team Udayavani, Jun 24, 2018, 6:00 AM IST

ss-29.jpg

ಕಡಬ: ಚಲಿಸುತ್ತಿದ್ದ ಆಮ್ನಿ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿ ಹಾನಿಗೈದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಶನಿವಾರ ಸಂಭವಿಸಿದೆ.   

ಕಾರಿನಲ್ಲಿ ಒಂದೇ ಕುಟುಂಬದ 9 ಮಂದಿ ಪ್ರಯಾಣಿಸುತ್ತಿದ್ದು,  ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಉಳಿದವರು  ಅಪಾಯದಿಂದ ಪಾರಾಗಿದ್ದಾರೆ. ಅದೇ ದಾರಿಯಾಗಿ ಬಂದ ಸರಕಾರಿ ಬಸ್ಸೊಂದರ ಚಾಲಕ ಜೋರಾಗಿ ಹಾರ್ನ್ ಬಾರಿಸಿದ್ದರಿಂದ ಆನೆ ಕಾಡಿನತ್ತ ಓಡಿದ್ದು ಹೆಚ್ಚಿನ ಅಪಾಯ ತಪ್ಪಿದೆ.

ಚಿಕ್ಕಮಗಳೂರು ಮೂಲದ ತರೀಕೆರಿ ತಾಲೂಕು ಕುಡೂರು ಕುಟುಂಬದ ಯಾತ್ರಾರ್ಥಿ ಗಳು ಧರ್ಮಸ್ಥಳ‌ ಕ್ಷೇತ್ರ ದರ್ಶನ ಮುಗಿಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಬೆಳಗ್ಗೆ 7 ಗಂಟೆಯ ಹೊತ್ತಿಗೆ ಬಿಳಿನೆಲೆ ಸಿಪಿಸಿಆರ್‌ಐ ಬಳಿ ಬರುತ್ತಿದ್ದಂತೆ ಹಠಾತ್ತಾಗಿ ದೊಡ್ಡ ಗಾತ್ರದ ಆನೆಯೊಂದು ಕಾರಿಗೆ ಅಡ್ಡ ಬಂದಿತು. ಗಲಿಬಿಲಿಗೊಂಡ ಚಾಲಕ ಪ್ರಭುಕುಮಾರ್‌ ಕಾರನ್ನು ರಸ್ತೆ ಬದಿ ನಿಲ್ಲಿಸಿದರು. ಆನೆಯು ದಂತ ಹಾಗೂ ಸೊಂಡಿಲಿನಿಂದ ಕಾರಿನ ಮುಂಭಾಗಕ್ಕೆ ತಿವಿದು, ಮುಂಗಾಲಿನಿಂದ ತುಳಿದು ಹಾನಿ ಮಾಡಿತು. 

ಅಷ್ಟರಲ್ಲಿ ಸರಕಾರಿ ಬಸ್ಸೊಂದು ಆ ದಾರಿಯಾಗಿ ಬಂದಿದ್ದು, ಅದರ ಚಾಲಕ ದೀರ್ಘ‌ವಾಗಿ ಹಾರ್ನ್ ಬಾರಿಸಿದರು. ಗಲಿಬಿಲಿಗೊಂಡ ಆನೆಯು ಕಾರನ್ನು ಬಿಟ್ಟು ಕಾಡಿನತ್ತ ಓಡಿ ಮರೆಯಾಗಿದ್ದರಿಂದ  ಸಂಭಾವ್ಯ ಅಪಾಯವೊಂದು ತಪ್ಪಿತು. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಾಳುಗಳನ್ನು ಸ್ಥಳೀಯ ಆಟೋ ಚಾಲಕ ಸುಬ್ರಹ್ಮಣ್ಯ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಕಡಬ ಪೊಲೀಸರು, ಅರಣ್ಯ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಎಚ್ಚರಿಕೆ ಫಲಕವಿಲ್ಲ
ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ  ದಟ್ಟ ಅರಣ್ಯದ ಮೂಲಕ ಸಾಗುತ್ತಿದ್ದು ಕೆಲವು ಸ್ಥಳಗಳಲ್ಲಿ ಕಾಡಾನೆ ಸಹಿತ ವನ್ಯ ಪ್ರಾಣಿಗಳು ರಸ್ತೆ ದಾಟುತ್ತವೆ. ಇಂತಹ ಸೂಕ್ಷ್ಮ ಸ್ಥಳಗಳಲ್ಲಿ  ಅರಣ್ಯ ಇಲಾಖೆ ಎಚ್ಚರಿಕೆ ಫಲಕ ಅಳವಡಿಸಿ ಮುನ್ನಚ್ಚರಿಕೆ ವಹಿಸಬೇಕಿತ್ತು. ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸ್ಥಳೀಯರಿಂದ ವ್ಯಕ್ತವಾಗಿದೆ.

ಸರಿಯಾದ ಸಮಯಕ್ಕೆ ಬಸ್‌ ಬಂದು ಹಾರ್ನ್ ಹಾಕಿದ ಪರಿಣಾಮ ದೊಡ್ಡ ಅನಾಹುತವೊಂದು  ತಪ್ಪಿದೆ. ಸುಬ್ರಹ್ಮಣ್ಯ ಸ್ವಾಮಿಯೇ ಬಸ್‌ ಚಾಲಕನ ರೂಪದಲ್ಲಿ ಬಂದು ನಮ್ಮನ್ನು ಪಾರು ಮಾಡಿದ್ದಾನೆ.
– ಗಿರೀಶ್‌, ಗಾಯಾಳು

ನಮ್ಮ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಸ್ಥಳ ಮಹಜರು ನಡೆಸಿದ್ದಾರೆ. ಸ್ಥಳದಲ್ಲಿ ಆನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದು, ವಾಹನ ಜಖಂಗೊಂಡಿದೆ. ಪ್ರಯಾಣಿಕರಿಗೆ ಅಪಾಯ ಸಂಭವಿಸಿಲ್ಲ. ವಾಹನದ ಮಾಲಕರು ವಾಹನಕ್ಕೆ ವಿಮೆ ಪಡೆದುಕೊಳ್ಳಲು ಘಟನೆಯ ಬಗ್ಗೆ  ಅರಣ್ಯ ಇಲಾಖೆಯಿಂದ ಮಾಹಿತಿ ಬಯಸಿದರೆ ಪೂರಕ ದಾಖಲೆ ಒದಗಿಸಲು ನಾವು ಬದ್ಧರಿದ್ದೇವೆ.
-ಎಚ್‌.ಎನ್‌. ಜಗನ್ನಾಥ್‌, ಸ. ಅರಣ್ಯ ಸಂರಕ್ಷಣಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.