ಅರ್ತಿಲ: ಲಾರಿಗಳು ಢಿಕ್ಕಿ; ಸಂಚಾರ ಅಸ್ತವ್ಯಸ್ತ
Team Udayavani, Jun 24, 2018, 11:58 AM IST
ಮಡಂತ್ಯಾರು: ಮಂಗಳೂರು -ಧರ್ಮಸ್ಥಳ ರಾ.ಹೆ.ಯ ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಅರ್ತಿಲ ಸಮೀಪ ಶನಿವಾರ ಬೆಳಗ್ಗೆ ಲಾರಿಗಳು ಮುಖಾಮುಖೀ ಢಿಕ್ಕಿ ಸಂಭವಿಸಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಘಟನೆಯಿಂದಾಗಿ ಲಾರಿಗಳೆರಡೂ ಜಖಂಗೊಂಡು ರಸ್ತೆ ಮಧ್ಯೆ ಇದ್ದ ಕಾರಣ ಸುಮಾರು 3 ಗಂಟೆಗೂ ಹೆಚ್ಚು ಸಮಯ ರಸ್ತೆ ಬ್ಲಾಕ್ ಆಗಿತ್ತು. ವಾಹನಗಳೆಲ್ಲ ರಸ್ತೆಯಲ್ಲೇ ಸುಮಾರು 3 ಕಿ.ಮೀ. ವರೆಗೂ ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಸಾರ್ವಜನಿಕರು ಪರದಾಡುವಂತಾಗಿತ್ತು.
ಬೈಕ್ ಸವಾರರು ಸಿಕ್ಕ ಜಾಗದಲ್ಲಿ ನುಸುಳಿಕೊಂಡು ಹೋದರೆ, ಘನ ವಾಹನಗಳು ಹಿಂದಕ್ಕೂ ಬರಲಾಗದೆ, ಮುಂದೆಯೂ ಹೋಗಲಾರದೆ ಲಾರಿಗಳ ತೆರವು ಆಗುವವರೆಗೆ ರಸ್ತೆಯಲ್ಲೇ ನಿಲ್ಲುವಂತಾಯಿತು. ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಠಾಣಾಧಿಕಾರಿ ಸತೀಶ್ ಬಲ್ಲಾಳ್, ಎಎಸ್ಐ ಲಕ್ಷ್ಮಣ್, ಆಸೀಫ್ ಮತ್ತು ಸಿಬಂದಿ ಸ್ಥಳಕ್ಕೆ ಆಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ