ಅಪಾಯಕಾರಿ ತಿರುವು ಸರಿಪಡಿಸಿ
Team Udayavani, Jun 24, 2018, 1:03 PM IST
ಪುತ್ತೂರು: ಮಂಜಲ್ಪಡ್ಪು ಬೈಪಾಸ್ ರಸ್ತೆಯಿಂದ ಉರ್ಲಾಂಡಿ ಪ್ರವೇಶಿಸುವ ದಾರಿಯಲ್ಲಿರುವ ಅಪಾಯಕಾರಿ ತಿರುವೊಂದು ಪಾದಚಾರಿಗಳಿಗೆ ಕಂಟಕವಾಗಿ ಪರಿಣಮಿಸಿದೆ. ವೇಗವಾಗಿ ಬರುವ ವಾಹನಗಳಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಇಲ್ಲಿರುವ ತಡೆಗೋಡೆ ಮುರಿದು ಬಿದ್ದಿದ್ದು, ಸಮಸ್ಯೆಗೆ ಆಹ್ವಾನ ನೀಡುತ್ತಿದೆ. ಪ್ರತಿನಿತ್ಯ ಶಾಲಾ ಮಕ್ಕಳು ಈ ರಸ್ತೆ ಮೂಲಕ ಸಂಚರಿಸುತ್ತಿದ್ದಾರೆ. ಆದ್ದರಿಂದ ಅಪಾಯದ ಸಂಭವ ಹೆಚ್ಚು. ಆದಷ್ಟು ಶೀಘ್ರ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.
ಮಳೆಗಾಲದಲ್ಲಿ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲೇ ನೀರು ಹರಿಯುತ್ತಿದೆ. ವೇಗವಾಗಿ ಬರುವ ವಾಹನಗಳಿಂದ ತೊಂದರೆ ಬೃಹದಾಕಾರವಾಗಿ ಬೆಳೆದು ನಿಂತಿದೆ.