ಅಸಮರ್ಪಕ ಮೋರಿ ತೆರವುಗೊಳಿಸಲು ನೋಟಿಸ್‌ 


Team Udayavani, Jun 24, 2018, 2:12 PM IST

24-june-17.jpg

ಕಬಕ : ಮಳೆ ನೀರು ರಸ್ತೆಗೆ ಹರಿಯದಂತೆ ತಡೆಯುವ ಸಲುವಾಗಿ ಆಸಮರ್ಪಕವಾಗಿದ್ದ ಮೋರಿಗಳನ್ನು ತೆರವುಗೊಳಿಸಲು ಕಬಕ ಗ್ರಾ.ಪಂ.ನ ಸಾಮಾನ್ಯ ಸಭೆಯಲ್ಲಿ ಬುಧವಾರ ನಿರ್ಣಯ ಕೈಗೊಳ್ಳಲಾಯಿತು. ಕಬಕ ಗ್ರಾ.ಪಂ. ಸಾಮಾನ್ಯ ಸಭೆ ಅಧ್ಯಕ್ಷೆ ಪ್ರೀತಾ ಬಿ. ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ನ ರಾಜೀವ್‌ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು.

ಕಬಕದಿಂದ ಪೋಳ್ಯದ ವರೆಗಿನ ರಸ್ತೆ ಬದಿಯ ಅಂಗಡಿ, ಗ್ಯಾರೇಜು ಹಾಗೂ ಮನೆ ಮಾಲಕರು ರಸ್ತೆಯ ಬದಿಯಲ್ಲಿ ನೀರು ಹರಿಯುವ ಚರಂಡಿಗಳಿಗೆ ಅವೈಜ್ಞಾನಿಕ ಮೋರಿಗಳನ್ನು ಹಾಕಿದರಿಂದ ಅದರಲ್ಲಿ ಮಳೆ ನೀರು ಸಮರ್ಪಕವಾಗಿ ಹರಿಯದೆ ರಸ್ತೆಯಲ್ಲೇ ಹರಿಯುತ್ತಿದೆ. ಇದರಿಂದ ವಾಹನ ಸವಾರರಿಗೆ ಮತ್ತು ಶಾಲಾ ಮಕ್ಕಳಿಗೆ ತೊಂದರೆಯಾಗುತಿದೆ. ಕೆಲವು ಕಡೆ ಶಾಲೆಗೆ ನಡೆದುಕೊಂಡು ಹೋಗುವ ವಿದ್ಯಾರ್ಥಿಗಳ ಮೇಲೆ ಕೆಸರು ಮಿಶ್ರಿತ ನೀರು ಚಿಮ್ಮುತ್ತದೆ. ಈ
ಸಮಸ್ಯೆಗೆ ಮುಕ್ತಿ ಪಡೆಯಲು ಪೇಟೆಯಲ್ಲಿ ಆಳವಡಿಸಿದ ಖಾಸಗಿ ಚರಂಡಿಗಳನ್ನು ತೆರವುಗೊಳಿಸಿ ಸಮರ್ಪಕ ಮಳೆ ನೀರು ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸದಸ್ಯ ಶಾಬ ಕಬಕ ಆಗ್ರಹಿಸಿದರು.

ಇವರ ಮನವಿಯನ್ನು ಆಲಿಸಿದ ಸಭೆ ಸಹಮತ ವ್ಯಕ್ತಪಡಿಸಿ ಸಂಬಂಧ ಪಟ್ಟವರಿಗೆ ನೋಟಿಸ್‌ ಜಾರಿ ಮಾಡಿ ಮುಂದಿನ ಕ್ರಮ ಜರುಗಿಸಲು ತಿರ್ಮಾನಿಸಲಾಯಿತು. ಮುರ ಜಂಕ್ಷನ್‌ನಲ್ಲೂ ಚರಂಡಿ ಬ್ಲಾಕ್‌ ಆಗಿ ರಸ್ತೆಯಲ್ಲಿ ಮಳೆ ನೀರು ಹರಿಯುತ್ತಿದೆ. ಆಲ್ಲಿಯೂ ಪಂಚಾಯತ್‌ ಕಾರ್ಯಾಚರಣೆ ನಡೆಸಿ ಸಾರ್ವಜನಿಕ ತೊಂದರೆ ನಿವಾರಿಸಬೇಕು ಎಂದು ಸದಸ್ಯ ಪ್ರಶಾಂತ್‌ ಮುರ ತಿಳಿಸಿದರು. ಕಬಕ ಪೇಟೆಯಲ್ಲಿ ಅಕ್ರಮ ಗೂಡಂಗಡಿ ಕಟ್ಟಲಾಗುತಿದೆ ಎಂದು ಜಮೀರ್‌ ವಿದ್ಯಾಪುರ ಎಂಬವರು ಪ್ರಸ್ತಾವಿಸಿದರು. ಪಂಚಾಯತ್‌ ನೀರು ನಿರ್ವಾಹಕರಿಗೆ ಹಾಗೂ ಸಾರ್ವಜನಿಕರಿಗೆ ಇರುವ ಗೊಂದಲವನ್ನು ನಿವಾರಿಸುವಂತೆ ಪಂಚಾಯತ್‌ ನೀರು ನಿರ್ವಾಹಕ ಅಬ್ದುಲ್‌ ರಹಿಮಾನ್‌ ಅಂದು ಪಂಚಾಯತ್‌ಗೆ ಮನವಿ ಸಲ್ಲಿಸಿದರು.

ಭವಾನಿ ಶವ ಸಂಸ್ಕಾರಕ್ಕೆ ಅನುದಾನ
ಕಬಕ ವಿದ್ಯಾಪುರದಲ್ಲಿ ಇತ್ತೀಚೆಗೆ ನಿಧನರಾದ ಭವಾನಿ ಎಂಬವರ ಶವ ಸಂಸ್ಕಾರದ ಸಹಾಯಧನಕ್ಕೆ ಬಂದ ಅರ್ಜಿಯನ್ನು ಸ್ವೀಕರಿಸಿ 1,000 ರೂ. ಬಿಡುಗಡೆ ಮಾಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಸಾರ್ವಜನಿಕರಿಗೆ ಪಂಚಾಯತ್‌ನಿಂದ ನೀಡಲಾಗುವ ದೃಢ ಪತ್ರಿಕೆ ನಿರಾಕ್ಷೇಪಣಾ ಪತ್ರಗಳಿಗೆ 250 ರೂ. ಈಗಾಗಲೇ ಪಡೆಯಲಾಗುತ್ತಿದ್ದು ಇದರಿಂದ ಬಡವರಿಗೆ ಕಷ್ಟವಾಗುತ್ತಿದೆ. ಬಳಿಕ ಸಭೆಯಲ್ಲಿ ಚರ್ಚಿಸಿ ದೃಢ ಪತ್ರಕ್ಕೆ 100 ರೂ. ನಿಗದಿ ಮಾಡಲು ನಿರ್ಣಯಿಸಲಾಯಿತು.

ಮರ ತೆರವಿಗೆ ಆಗ್ರಹ
ಮಾಣಿ-ಮೈಸೂರು ರಾಷ್ಟ್ರ ಹೆದ್ದಾರಿಗೆ ಕುವೆತ್ತಿಲ ಎಂಬಲ್ಲಿ ಬೃಹದಾಕಾರದ ಮರವೊಂದು ಬೀಳುವ ಸ್ಥಿತಿಯಲ್ಲಿದೆ. ಇದನ್ನು ತೆರವುಗೊಳಿಬೇಕು ಎಂದು ಸ್ಥಳೀಯ ಸದಸ್ಯ ಶಾಬ ಆಗ್ರಹಿಸಿದರು. ಉಪಾಧ್ಯಕ್ಷೆ ಶಂಕರಿ ಜಿ. ಭಟ್‌, ಆಭಿವೃದ್ಧಿ ಅಧಿಕಾರಿ ಆಶಾ ಇ., ಕಾರ್ಯದರ್ಶಿ ಚಂದ್ರಮತಿ, ವಿಠಲ ಗೌಡ ಬನ, ಶಾಬ ಕೆ. ಪ್ರಶಾಂತ್‌ ಮುರ, ವಿನಯ ಕುಮಾರ್‌ ಕಲ್ಲೇಗ, ಮೋಹನ ಪಿ., ಬಾಲಕೃಷ್ಣ ಕಳಮೆಮಜಲು, ಬಾನುಮತಿ ಹೆಗ್ಡೆ, ರೂಪಾ, ಮಾಲತಿ, ಹರಿಣಾಕ್ಷಿ ಉಪಸ್ಥಿತರಿದ್ದರು . 

ಅಳವಡಿಸಿಕೊಡುವ ಪ್ರಶ್ನೆಯೇ ಇಲ್ಲ 
ಪಂಚಾಯತ್‌ ಸಂಬಂಧಪಟ್ಟವರಿಗೆ ನೋಟಿಸ್‌ ಜಾರಿ ಮಾಡಿಯೂ ಸ್ಪಂದನೆ ನೀಡದ ಸಾರ್ವಜನಿಕರ ಮನೆಯ ಮುಂದೆ ಇರುವ ಮೋರಿಗಳನ್ನು ತೆರವುಗೊಳಿಸಿದರೆ ಮತ್ತೆ ಪಂಚಾಯತ್‌ ಅನುದಾನದಲ್ಲಿ ಸರಿಪಡಿಸಲಾಗುವುದಿಲ್ಲ. ಪಂಚಾಯತ್‌ ನೀಡಿರುವ ನೋಟಿಸ್‌ ಬಂದ ತತ್‌ ಕ್ಷಣ ತಮ್ಮ ಮೋರಿಗಳನ್ನು ಮಳೆ ನೀರು ಹರಿಯುವಂತೆ ಸರಿಪಡಿಸಿಕೊಂಡು ಸಹಕರಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.