ಮುಚ್ಚುವ ಆತಂಕದಲ್ಲಿ ಹಾಡಿಕಲ್ಲು ಸರಕಾರಿ ಶಾಲೆ


Team Udayavani, Jun 26, 2018, 3:00 AM IST

hadikallu-school-25-6.jpg

ಸುಬ್ರಹ್ಮಣ್ಯ: ಪೂರ್ಣ ನಾಗರಿಕತೆಗೆ ಇನ್ನೂ ತೆರೆದುಕೊಂಡಿಲ್ಲದ ಊರಿದು. ಇಂದಿಗೂ ಕಾಲ್ನಡಿಗೆ ಇಲ್ಲವೆ ಖಾಸಗಿ ವಾಹನಗಳ ಮೂಲಕವೇ ಓಡಾಡುತ್ತಿರುವ ಗ್ರಾಮಸ್ಥರು. ಇತ್ತೀಚೆಗಷ್ಟೆ ಈ ಊರಿಗೆ ಶಂಕಿತ ನಕ್ಸಲರು ಬಂದಿದ್ದರು. ಇಲ್ಲಿನ ಸರಕಾರಿ ಶಾಲೆಯಲ್ಲಿ ಎರಡು ತರಗತಿಗಳಲ್ಲಿ ಮಕ್ಕಳೇ ಇಲ್ಲ. ಭವಿಷ್ಯದಲ್ಲಿ ಈ ಶಾಲೆ ಮುಚ್ಚುವ ಭೀತಿ ಎದುರಿಸುತ್ತಿದೆ. ಹಾಡಿಕಲ್ಲು ಊರಿನ ಹೆಸರು ಕೆಲ ದಿನಗಳಿಂದ ಸಾರ್ವಜನಿಕ ವಲಯದಲ್ಲಿ ಹೆಚ್ಚು ಪ್ರಚಾರದಲ್ಲಿದೆ. ಇದಕ್ಕೆ ಕಾರಣ ಈ ಊರಿಗೆ ಇತ್ತೀಚೆಗಷ್ಟೆ ಮೂವರು ಶಂಕಿತ ನಕ್ಸಲರು ಬಂದಿದ್ದರು. ಅಂತಹ ಊರಿನಲ್ಲಿ ಶಿಕ್ಷಣ ಒದಗಿಸುವ ಸ.ಹಿ.ಪ್ರಾ. ಶಾಲೆ ಮುಚ್ಚುವ ಸ್ಥಿತಿಯಲ್ಲಿದೆ.

ಗೊಂಡಾರಣ್ಯದ ನಡುವಿರುವ ಹಾಡಿಕಲ್ಲಿನಲ್ಲಿ 1978ರಲ್ಲಿ ಸ.ಕಿ.ಪ್ರಾ. ಶಾಲೆ ನಿರ್ಮಾಣಗೊಂಡಿತ್ತು. ಸ್ಥಳೀಯ ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗಿತ್ತು. ರಸ್ತೆ, ವಾಹನ ವ್ಯವಸ್ಥೆ ಇಲ್ಲದೆ ಇರುವಾಗ ಕಾಲ ಬುಡದಲ್ಲೇ ಪ್ರಾಥಮಿಕ ಶಿಕ್ಷಣ ದೊರೆಯಲು ಈ ಶಾಲೆ ಅವಕಾಶ ಮಾಡಿಕೊಟ್ಟಿತ್ತು. ಇಲ್ಲಿ ಕಲಿತ ಮಕ್ಕಳು ಹೆಚ್ಚಿನ ಶಿಕ್ಷಣವನ್ನು ಬೇರೆಡೆ ಪಡೆಯಲು ಅನುಕೂಲ ಮಾಡಿಕೊಟ್ಟಿತ್ತು.

ಒಂದರಿಂದ ಐದನೇ ತರಗತಿ ತನಕ ಇರುವ ಈ ಸರಕಾರಿ ಶಾಲೆಯಲ್ಲಿ ಇರುವ ಒಟ್ಟು ಮಕ್ಕಳ ಸಂಖ್ಯೆ 6 ಮಾತ್ರ. ಕಳೆದ ವರ್ಷ ಮತ್ತು ಈ ವರ್ಷ ಶಾಲೆಗೆ ಹೊಸದಾಗಿ ಮಕ್ಕಳು ದಾಖಲಾಗಿಲ್ಲ. ಶಾಲೆಯ ಒಂದು ಮತ್ತು ಎರಡನೇ ತರಗತಿಯಲ್ಲಿ ಮಕ್ಕಳೇ ಇಲ್ಲ. ಮೂರನೇ ತರಗತಿಯಲ್ಲಿ ಇಬ್ಬರು, ನಾಲ್ಕನೇ ತರಗತಿಯಲ್ಲಿ ಮೂವರು ಹಾಗೂ ಐದನೇ ತರಗತಿಯಲ್ಲಿ ಓರ್ವ ವಿದ್ಯಾರ್ಥಿ ಮಾತ್ರ ಓದುತ್ತಿದ್ದಾರೆ. ಶಾಲೆಯಲ್ಲಿ ನೀರು, ಸುಸಜ್ಜಿತ ಕಟ್ಟಡ ಇದೆ. ಆಟದ ಮೈದಾನ ಇದೆ. ಕೊಠಡಿಗಳು ತರಗತಿಗೆ ತಕ್ಕಂತೆ ಇಲ್ಲ. ಒಂದೇ ಹಾಲ್‌ ನಲ್ಲಿ ಎರಡು ಕೊಠಡಿ ಮಾಡಿಕೊಂಡು ಒಂದರಲ್ಲಿ ನಲಿಕಲಿ ತರಗತಿಯ ಮೂಲಕ ಮೊದಲ ಮೂರು ತರಗತಿಗಳನ್ನು ಹಾಗೂ ಇನ್ನೊಂದು ಕೊಠಡಿಯಲ್ಲಿ ಮತ್ತೆರಡು ತರಗತಿಗಳನ್ನು ಒಟ್ಟಿಗೆ ನಡೆಸಲಾಗುತ್ತಿದೆ.

ಆಟಕ್ಕೂ ಪಾಠಕ್ಕೂ ಇವರೇ
ಶಾಲೆಯಲ್ಲಿ ಒಬ್ಬರೇ ಶಿಕ್ಷಕರಿದ್ದಾರೆ. ಶಾಲೆಯ ಎಲ್ಲ ಚಟುವಟಿಕೆಯನ್ನು ಈ ಶಿಕ್ಷಕರೇ ನಿರ್ವಹಿಸಬೇಕು. ಸ್ವಚ್ಛತೆ, ಅಟೆಂಡರ್‌ ಎಲ್ಲ ಕಾರ್ಯಗಳನ್ನು ಇವರೇ ಮಾಡಬೇಕು. ಪಾಠಕ್ಕೂ ಇವರೇ ಶಿಕ್ಷಕರು, ಆಟಕ್ಕೂ ಇವರೇ ತರಬೇತುದಾರರು. ಮಕ್ಕಳ ಮತ್ತು ಶಾಲೆಯ ಇತರೆ ಎಲ್ಲ ಚಟುವಟಿಕೆಗಳ ಹೊಣೆಗಾರಿಕೆಯನ್ನೂ ತಲೆ ಮೇಲೆ ಹೊತ್ತುಕೊಳ್ಳಬೇಕು. ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಇದ್ದು, ಒಬ್ಬರು ಮಹಿಳಾ ಸಿಬಂದಿ ಅಡುಗೆ ತಯಾರಿಕೆಯಲ್ಲಿ ನಿರತರಾಗಿದ್ದಾರೆ. ಇರುವ ಓರ್ವ ಶಿಕ್ಷಕ ಇಲಾಖೆ ಸಭೆಗಳಿಗೆ ತೆರಳುವ ವೇಳೆ ಮಕ್ಕಳಿಗೆ ರಜೆ ಘೋಷಿಸಬೇಕಷ್ಟೇ.

‘ಇಲ್ಲ’ಗಳ ಸವಾಲು
ತಾಲೂಕು ಕೇಂದ್ರದಿಂದ ದೂರದಲ್ಲಿ ಕಾಡಿನ ತಪ್ಪಲಿನಲ್ಲಿ ಇರುವ ಊರಿನಲ್ಲಿ ಈ ಶಾಲೆ ಇದೆ. ಇಲ್ಲಿಗೆ ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲ. ಸಂಪರ್ಕ ಸೇತುವೆಗಳಿಲ್ಲ. ವಿದ್ಯುತ್‌, ದೂರವಾಣಿ, ಮೊಬೈಲ್‌ ಯಾವ ವ್ಯವಸ್ಥೆಗಳೂ ಇಲ್ಲ. ನೆಟ್‌ ವರ್ಕ್‌ ಸಿಗಬೇಕಿದ್ದರೆ ಗುಡ್ಡ ಹತ್ತಬೇಕು ಇಲ್ಲವೇ ಐದು ಮೈಲು ದೂರ ನಡೆದು ಸಿಗ್ನಲ್‌ ಇರುವಲ್ಲಿಗೆ ಬರಬೇಕು. ಇಂತಹ ಸ್ಥಳದಲ್ಲಿ ಇರುವ ಶಾಲೆ ಇಲ್ಲಿಯವರಿಗೆ ಆಪದ್ಭಂಧವ. ಪ. ಜಾತಿ, ಪ. ಪಂಗಡ ಸಹಿತ ಇತರೆ ವರ್ಗದವರು ಇಲ್ಲಿದ್ದಾರೆ.

ಸುದೀರ್ಘ‌ ಅವಧಿ ತೆರೆದಿದ್ದ ಈ ಶಾಲೆಗೆ ಇತ್ತೀಚಿನ ವರ್ಷಗಳಿಂದ ಮಕ್ಕಳ ಕೊರತೆ ಇದೆ. ಎರಡು ವರ್ಷಗಳಿಂದ ಮಕ್ಕಳು ಶಾಲೆಗೆ ದಾಖಲಾಗದೆ ಇರುವುದು ಶಾಲೆ ಮುಚ್ಚುವ ಮುನ್ಸೂಚನೆ ನೀಡಿದೆ. ಈಗ ಇರುವ ಮಕ್ಕಳ ಕಲಿಕೆ ಮೂರು ವರ್ಷದಲ್ಲಿ ಪೂರ್ಣಗೊಂಡ ಬಳಿಕ ಮಕ್ಕಳಿಲ್ಲದೆ ಶಾಲೆ ಮುಚ್ಚುವ ಹಂತಕ್ಕೆ ತಲುಪಲಿದೆ. ಈ ಸರಕಾರಿ ಶಾಲೆ ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಇಲ್ಲಿಯ ನಾಗರಿಕರನ್ನು ಕಾಡುತ್ತಿದೆ.

ಶಿಕ್ಷಕರಿಗೆ ಭಯ
ಇಲ್ಲಿ ಕರ್ತವ್ಯದಲ್ಲಿ ಇರುವ ಶಿಕ್ಷಕ ಮಡಪ್ಪಾಡಿಯಲ್ಲಿ ವಾಸವಿದ್ದಾರೆ. ಅಲ್ಲಿಂದ ಶಾಲೆಗೆ 6 ಕಿ.ಮೀ. ದೂರ. ಯಾವುದೇ ಸರಕಾರಿ ವಾಹನ ವ್ಯವಸ್ಥೆ ಇಲ್ಲ. ಕಾಡಿನ ಮಧ್ಯೆ ಹಾದುಹೋಗುವ ಕಚ್ಚಾ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅವರು ಸಂಚರಿಸುತ್ತಾರೆ. ಕಳೆದ ಎರಡೂವರೆ ವರ್ಷಗಳ ವೃತ್ತಿ ಅವಧಿಯಲ್ಲಿ ಅನೇಕ ಬಾರಿ ಕಾಡಾನೆ ಸಹಿತ ವನ್ಯಜೀವಿಗಳು ಎದುರಾಗಿ ಭಯ ಹುಟ್ಟಿಸಿವೆ ಎನ್ನುತ್ತಾರೆ ಚಿಕ್ಕಮಗಳೂರು ಮೂಲದ ಶಿಕ್ಷಕ ಪ್ರಸಾದ್‌ ನಾ¿åಕ್‌ ಅವರು.

ಸಭೆ ನಡೆಸುತ್ತೇವೆ
ಶಾಲೆಯಲ್ಲಿ  ಮಕ್ಕಳ ಕೊರತೆ ಇರುವುದು ದೊಡ್ಡ  ಸವಾಲಾಗಿದೆ. ನೂರಾರು ಮಕ್ಕಳ ಭವಿಷ್ಯ ರೂಪಿಸಿದ ಈ ಸರಕಾರಿ ಶಾಲೆಯನ್ನು ಉಳಿಸಿಕೊಳ್ಳುವುದು ನಮಗೆ ಅನಿವಾರ್ಯ. ಊರಿನವರು ಸೇರಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. 
– ದಮಯಂತಿ ಮುಂಡೋಡಿ ಶಾಲಾ SDMC ಅಧ್ಯಕ್ಷರು

— ಬಾಲಕೃಷ್ಣ  ಭೀಮಗುಳಿ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.