ಗಾಂಧಿನಗರ-ಸುದೆಕಾರು-ಕುರ್ಲೊಟ್ಟು ರಸ್ತೆಗೆ ಅಭಿವೃದ್ಧಿ ಭಾಗ್ಯವಿಲ್ಲ


Team Udayavani, Jun 28, 2018, 2:45 AM IST

kurlottu-road-27-6.jpg

ವೇಣೂರು: ಸುಮಾರು 50 ವರ್ಷಗಳ ಹಿಂದೆ ಗ್ರಾಮಸ್ಥರೇ ಸೇರಿ ನಿರ್ಮಿಸಿದ ಗಾಂಧಿನಗರ-ಸುದೆಕಾರು-ಕುರ್ಲೊಟ್ಟು ರಸ್ತೆಗೆ ಇಂದಿಗೂ ಅಭಿವೃದ್ಧಿ ಯೋಗ ಕೂಡಿ ಬಂದಿಲ್ಲ. ಇದೀಗ ರಸ್ತೆ ಕೆಸರುಗದ್ದೆಯಂತಾಗಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ರೈತರು ತೀರಾ ಸಂಕಷ್ಟ ಅನುಭವಿಸುವಂತಾಗಿದೆ.

300ಕ್ಕೂ ಅಧಿಕ ಕುಟುಂಬ
ವೇಣೂರು ಗ್ರಾ.ಪಂ. ವ್ಯಾಪ್ತಿಯ ಗಾಂಧಿನಗರದಿಂದ ಸುದೆಕಾರು ಮಾರ್ಗ ವಾಗಿ ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯ ಕುರ್ಲೊಟ್ಟುವನ್ನು ಸುಮಾರು 3 ಕಿ.ಮೀ. ಅಂತರದ ಈ ರಸ್ತೆಯನ್ನು ಎರಡೂ ಗ್ರಾ.ಪಂ. ವ್ಯಾಪ್ತಿಯ ಸುಮಾರು 300ಕ್ಕೂ ಅಧಿಕ ಕುಟುಂಬಗಳು ಆಶ್ರಯಿಸುವೆ.

ಸಾಮಗ್ರಿಗಳ ಸಾಗಾಟ ಕಷ್ಟ
ಇಲ್ಲಿಂದ ನೂರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳುವವರಿದ್ದಾರೆ. ಕಷ್ಟಪಟ್ಟು ವಾಹನಗಳು ಇಲ್ಲಿಗೆ ಬರುತ್ತಿದ್ದರೆ, ನಡೆದು ಹೋಗುವ ವಿದ್ಯಾರ್ಥಿಗಳ ಕಷ್ಟ ದೇವರಿಗೆ ಪ್ರೀತಿ. ಮಳೆಗಾಲದಲ್ಲಿ ರಿಕ್ಷಾಗಳೂ ಈ ರಸ್ತೆಗೆ ಬರಲು ಹಿಂದೇಟು ಹಾಕುತ್ತಿದ್ದು, ರೈತರು ದಿನ ಬಳಕೆ ಸಾಮಗ್ರಿಗಳನ್ನು, ಕೃಷಿ ಗೊಬ್ಬರವನ್ನು ಹೊತ್ತುಕೊಂಡು ಕೊಂಡೊಯ್ಯಬೇಕಾದ ಪರಿಸ್ಥಿತಿ ಇದೆ.

ಮನವಿಗಳಿಗೆ ಲೆಕ್ಕವಿಲ್ಲ
ಈ ರಸ್ತೆ ದುರಸ್ತಿಗೆ ಆಗ್ರಹಿಸಿ ಸಂಸದರಿಗೆ, ಶಾಸಕರಾಗಿದ್ದ ಕೆ. ವಸಂತ ಬಂಗೇರರಿಗೆ, ಜಿ.ಪಂ., ತಾ.ಪಂ. ಸದಸ್ಯರಿಗೆ ಲಿಖಿತವಾಗಿ ಹಲವು ಮನವಿ ನೀಡಲಾಗಿದೆ. ಈ ಸಂದರ್ಭ ಸಿಕ್ಕಿದ ಭರವಸೆ ಈವರೆಗೆ ಈಡೇರಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ. ಪ್ರತೀ ಮಳೆಗಾಲ ತುರ್ತು ದುರಸ್ತಿ ನಡೆಸಿ ಎಂದು ಗ್ರಾಮಸ್ಥರು ಪಂ.ಗೆ ಮನವಿ ನೀಡುವುದು ಮಾಮೂಲಿ ಎಂಬಂತಾಗಿದೆ. 2017ರಲ್ಲಿ ಗಾಂಧಿನಗರದಿಂದ ಸುಮಾರು 100 ಮೀಟರ್‌ಗೆ ಕಾಂಕ್ರೀಟ್‌ ಹಾಕಲಾಗಿದೆ.

ಪ್ರತಿಭಟನೆಯೂ ನಡೆಸಿದ್ದರು
ಈ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ವೇಣೂರು ಗ್ರಾ.ಪಂ. ಮುಂದೆ ಪ್ರತಿಭಟನೆ ನಡೆಸಿದ್ದರು. ಆಗ ಆಡಳಿತ ವರ್ಗ ಪಂ.ನಲ್ಲಿ ಅನುದಾನವಿಲ್ಲದ ಕಾರಣ ಶಾಸಕರಿಗೆ ಮನವಿ ನೀಡುವುದಾಗಿ ಭರವಸೆ ನೀಡಿತ್ತು. ರಸ್ತೆ ಕೆಸರುಮವಾಗಿರುವ ಕಾರಣ ವಾಹನ ಸಂಚಾರ ಕಷ್ಟವಾಗುತ್ತಿದೆ. ಗ್ರಾಮಸ್ಥರಿಗೆ ಅನಾರೋಗ್ಯ ಕಾಡಿದರೆ ದೇವರೇ ಗತಿ. ಈ ರಸ್ತೆ ದುರಸ್ತಿಗೆ ಆಗ್ರಹಿಸಿ ಶಾಸಕರು, ಸಂಸದರು, ಜಿ.ಪಂ. ಸದಸ್ಯರು ಸಹಿತ ಸ್ಥಳೀಯ ಜನಪ್ರತಿನಿಧಿಗಳಿಗೆ ಲಿಖಿತ ಮನವಿ ನೀಡಿದರೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮಣ್ಣಿನ ಈ ರಸ್ತೆಯಿಂದ ಮಳೆಗಾಲದಲ್ಲಿ ನಡೆದಾಡಲು ಅಸಾಧ್ಯವಾಗಿದೆ ಎಂದು ಸುದೆಕಾರು ಗ್ರಾಮದ ಆನಂದ ಪೂಜಾರಿ ಅಳಲು ತೋಡಿಕೊಂಡಿದ್ದಾರೆ.

50 ವರ್ಷ ಇತಿಹಾಸ
ಸುಮಾರು 50 ವರ್ಷಗಳ ಹಿಂದೆ ಗ್ರಾಮಸ್ಥರೇ ಸೇರಿ ಗಾಂಧಿನಗರ-ಸುದೆಕಾರ್‌-ಹೇಟಾವು-ಕುರ್ಲೊಟ್ಟು ಸಂಪರ್ಕದ ಸುಮಾರು 3 ಕಿ.ಮೀ. ರಸ್ತೆಯನ್ನು ರಚಿಸಿದ್ದಾರೆ. ಈ ರಸ್ತೆ ಡಾಮರು ಹಾಗೂ ಕೆಲವೆಡೆ ಕಾಂಕ್ರೀಟ್‌ ಕಾಮಗಾರಿ ನಡೆಸಿ ಎಂದು ಅಂದಿನಿಂದ ಇಂದಿನವರೆಗೂ ಮನವಿ ನೀಡು ತ್ತಲೇ ಬಂದಿದ್ದು, ಅಭಿವೃದ್ಧಿ ಮರೀಚಿಕೆಯಾಗಿಯೇ ಉಳಿದಿದೆ. ಈ ರಸ್ತೆ ಆರಂಬೋಡಿ ಗ್ರಾ.ಪಂ. ವ್ಯಾಪ್ತಿಯ ಗುಂಡೂರಿ ಗ್ರಾಮಕ್ಕೂ ನೇರ ಸಂಪರ್ಕ ಹೊಂದಿದೆ.

ರಸ್ತೆಅಭಿವೃದ್ಧಿ
ಗಾಂಧಿನಗರ-ಸುದೆಕಾರು ರಸ್ತೆ ಅಭಿವೃದ್ಧಿ ಬಗ್ಗೆ ಮನವಿ ಬಂದಿದೆ. ಸರಕಾರದಿಂದ ಅನುದಾನ ದೊರೆತ ಕೂಡಲೇ ಈ ರಸ್ತೆಯ ಅಭಿವೃದ್ಧಿಗೆ ಚಾಲನೆ ನೀಡಲಾಗುವುದು.
– ಹರೀಶ್‌ ಪೂಂಜ, ಶಾಸಕರು

ಗ್ರಾಮಸಭೆಯಲ್ಲಿ ನಿರ್ಣಯ
ಗಾಂಧಿನಗರ ರಸ್ತೆಗೆ ಈಗಾಗಲೇ NREG ಯೋಜನೆಯಡಿ 100 ಮೀ.ನಷ್ಟು ಕಾಂಕ್ರೀಟ್‌ ಹಾಕಲಾಗಿದೆ. ಗ್ರಾಮಸ್ಥರ ಸಹಕಾರದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ಮುಂದುವರಿಸಬಹುದು. ಗ್ರಾಮಸಭೆಯಲ್ಲಿ ನಿರ್ಣಯ ಕೈಗೊಂಡು ಶಾಸಕರಿಗೆ ನೀಡುತ್ತೇವೆ.
– ಅರುಣ್‌ ಕ್ರಾಸ್ತ, ಉಪಾಧ್ಯಕ್ಷರು, ವೇಣೂರು  ಗ್ರಾ.ಪಂ. 

— ಪದ್ಮನಾಭ ವೇಣೂರು

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.