ತೆಂಗಿನ ಮರಗಳಿಗೆ ಸಾಂಕ್ರಾಮಿಕ ರೋಗ?


Team Udayavani, Jun 28, 2018, 2:00 AM IST

coconut-27-6.jpg

ಆಲಂಕಾರು: ಬೇಸಿಗೆಯ ಸುಡು ಬಿಸಿಲಿನಲ್ಲಿಯೂ ವಿದ್ಯುತ್‌ ಸಮಸ್ಯೆ ಮಧ್ಯೆ ಬದುಕಿಸಿ ಉಳಿಸಿದ ಕೃಷಿ ಇದೀಗ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿರುವುದು ರೈತಾಪಿ ಜನತೆಯಲ್ಲಿ ಆತಂಕ ಮೂಡಿಸಿದೆ. ಕರಾವಳಿ ಭಾಗದಲ್ಲಿ ಅಡಿಕೆ ಕೃಷಿಯೊಂದಿಗೆ ತೆಂಗು ಪ್ರಮುಖ ಕೃಷಿಯಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ತೆಂಗಿನ ಕೃಷಿ ಬೇರುರೋಗಕ್ಕೆ ಬಲಿಯಾಗಿರುವುದು ರೈತಾಪಿ ಜನತೆಗೆ ಬಿಡಿಸಲಾಗದ ಒಗಟಾಗಿದೆ.

ಕೆಲವು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾ|ನ ರೈತರ ಅಡಿಕೆ ಕೃಷಿಯನ್ನು ಬಹಳಷ್ಟು ಕಾಡಿದ ಬೇರು ಹುಳು ರೋಗ ಇದೀಗ ಪುತ್ತೂರು ತಾಲೂಕಿನ ರೈತರ ತೆಂಗಿನ ಮರಕ್ಕೆ ಬಾಧಿಸಿದೆಯೇ ಎಂಬ ಸಂಶಯ ರೈತರನ್ನು ಕಾಡತೊಡಗಿದೆ. ರೋಗ ಬಾಧಿಸಿದ ಆರು ತಿಂಗಳಲ್ಲಿ ತೆಂಗಿನ ಮರ ಸಾಯುತ್ತಿದ್ದು, ಇಲ್ಲಿಯವರೆಗೆ ಯಾವ ಔಷಧಿಯೂ ಫ‌ಲ ನೀಡಿಲ್ಲ. ಆರಂಭದಲ್ಲಿ ಯಾವುದೇ ರೋಗ ಲಕ್ಷಣಗಳು ಕಾಣುವುದಿಲ್ಲ. ರೋಗಕ್ಕೆ ತುತ್ತಾದ ಮರದ ಕೊನೆಯ ಸಿರಿಯೊಂದನ್ನು ಬಿಟ್ಟು ಉಳಿದ ಗರಿಗಳು ಏಕಾಏಕಿ ಬಾಗುತ್ತವೆ. ಫ‌ಸಲು ಬರುವ ಮರವಾದರೆ ತೆಂಗಿನ ಗೊನೆಯೊಂದಿಗೆ ಬಾಗುತ್ತದೆ. ಬಳಿಕ ಎಳತ್ತು ಸೀಯಾಳ ಸಮೇತ ಇದ್ದ ತೆಂಗಿನಕಾಯಿ ಉದುರಲು ಆರಂಭವಾಗುತ್ತದೆ. ಹೀಗೆ ಉದುರಲು ಪ್ರಾರಂಭವಾದ ತೆಂಗಿನಕಾಯಿಗಳು ಎರಡರಿಂದ ಮೂರು ತಿಂಗಳ ವರೆಗೆ ಉದುರುತ್ತವೆ. ಆರು ತಿಂಗಳಲ್ಲಿ ತೆಂಗಿನ ಮರ ಸಾಯುತ್ತದೆ. ಯಾವುದೇ ಕೀಟನಾಶಕ, ಔಷಧಿ ಸಿಂಪಡಿಸಿದರೂ ಹತೋಟಿಗೆ ಬಾರದೆ ಸಾವನ್ನಪ್ಪುತ್ತಿವೆ.

ಪುತ್ತೂರಿಗೆ ಹೊಸತು
ಸುಳ್ಯ ತಾಲೂಕಿನಾದ್ಯಂತ ಅಡಿಕೆ ಮರಗಳಿಗೆ ಬೇರು ರೋಗ ಬಾಧಿಸಿ ರೈತಾಪಿ ಜನತೆಯನ್ನು ಹೈರಾಣಾಗಿಸಿತ್ತು. ಬಳಿಕದ ದಿನಗಳಲ್ಲಿ ಆಧುನಿಕ ರಾಸಾಯನಿಕ ಕ್ರಿಮಿನಾಶಕ ಔಷಧಿ ಬಳಸಿ ಈ ರೋಗವನ್ನು ಹತೋಟಿಗೆ ತರಲಾಗಿತ್ತು. ಆದರೆ, ಇದೀಗ ಪುತ್ತೂರು ತಾಲೂಕಿನ ರೈತರ ತೆಂಗಿನ ಮರಕ್ಕೆ ಈ ರೋಗ ಅಂಟಿಕೊಂಡು ಹಲವಾರು ತೆಂಗಿನ ಮರಗಳನ್ನು ಬಲಿ ಪಡೆದುಕೊಂಡಿದೆ. ಈ ಮೂಲಕ ರೈತರ ಆದಾಯಕ್ಕೆ ಹೊಡೆತ ಬಿದ್ದಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮುತುವರ್ಜಿ ವಹಿಸಿ ಕ್ರಮ ಕೈಗೊಳ್ಳಬೇಕಾಗಿದೆ.

ಮಾಹಿತಿ ಸಂಗ್ರಹಿಸುತ್ತೇವೆ
ಬೇರು ಹುಳುಗಳ ರೋಗ ತೆಂಗಿನ ಬೆಳೆಗೆ ಅಷ್ಟಾಗಿ ಬರುವುದಿಲ್ಲ. ಹತ್ತಿ ಹುಳದಿಂದ ತೆಂಗು ಫ‌ಂಗಸ್‌ ರೋಗಗಳಿಗೆ ಹೆಚ್ಚು ಬಲಿಯಾಗುತ್ತದೆ. ಇದು ವೈರಲ್‌ ಆಗಿ ಮತ್ತೂಂದು ಮರಕ್ಕೂ ಹರಡುತ್ತದೆ. ಸಾಯುತ್ತಿರುವ ತೆಂಗಿನ ಮರಗಳ ಬಗ್ಗೆ ಸಮಗ್ರ ಮಾಹಿತಿಗಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಸಂಪೂರ್ಣ ಮಾಹಿತಿ ಪಡೆಯಲಾಗುವುದು.
– ಎಚ್‌.ಆರ್‌. ನಾಯಕ್‌, ತೋಟಗಾರಿಕಾ ಜಿಲ್ಲಾ ನಿರ್ದೇಶಕ

— ಸದಾನಂದ ಆಲಂಕಾರು

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.