ಪೂರ್ಣಕಾಲಿಕ ಶಿಕ್ಷಕರಿಲ್ಲದೇ ಮುಚ್ಚುತ್ತಿವೆ ಸರಕಾರಿ ಶಾಲೆಗಳು !


Team Udayavani, Jul 3, 2018, 9:48 AM IST

poornakalika-shale.jpg

ಸುಳ್ಯ: ಕೆಲವು ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇರುವ ಹಾಗೆಯೇ ಹಲವು ಶಾಲೆಗಳಲ್ಲಿ ಪೂರ್ಣಕಾಲಿಕ ಶಿಕ್ಷಕರ ಸಂಖ್ಯೆಯೇ ಶೂನ್ಯ…! ಇದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸರಕಾರಿ ಶಾಲೆಗಳ ಸದ್ಯದ ಸ್ಥಿತಿ. ಸರಕಾರಿ ಶಾಲೆಗಳಿಗೆ ಮಕ್ಕಳು ಬರುವುದಿಲ್ಲ ಎಂಬ ಆರೋಪ ಇದ್ದದ್ದೇ. ಆದರೆ ತೆರೆಮರೆಯ ಕಥೆಯೂ ಬೇರೆ.ಹಲವು ಶಾಲೆಗಳಲ್ಲಿ ಮಂಜೂರುಗೊಳಿಸಿದ ಶಿಕ್ಷಕ ಹುದ್ದೆಗಳನ್ನೇ ಭರ್ತಿ ಮಾಡಿಲ್ಲ ಎಂಬುದು ವಾಸ್ತವ.

ಅಚ್ಚರಿಯ ಸಂಗತಿ ಅಂದರೆ, ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ ಸ್ಥಾನಗಳಿಸುವ ದ. ಕನ್ನಡ ಜಿಲ್ಲೆಯ 18 ಮತ್ತು ಉಡುಪಿ ಜಿಲ್ಲೆಯ 9 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಬ್ಬನೂ ಪೂರ್ಣಕಾಲಿಕ ಶಿಕ್ಷಕರಿಲ್ಲ. ಹತ್ತಿರದ ಶಾಲೆಗಳಿಂದ ಡೆಪ್ಯೂಟೇಶನ್‌ನಡಿ ಆಗಮಿಸುವ ಶಿಕ್ಷಕರೇ ಆಧಾರ. ತಾತ್ಕಾಲಿಕ ನೆಲೆಯಲ್ಲಿ ಶಿಕ್ಷಕರನ್ನು ಹೊಂದಿರುವ ಶಾಲೆಗಳಿಗೆ ಪೂರ್ಣಕಾಲಿಕ ಶಿಕ್ಷಕರನ್ನು ನೇಮಕಗೊಳಿಸುವ ಪ್ರಕ್ರಿಯೆಯನ್ನೇ ಹಲವು ವರ್ಷಗಳಿಂದ ನಡೆಸದಿರುವುದು ಇದಕ್ಕೆ  ಕಾರಣ.

ಶೂನ್ಯ ಶಿಕ್ಷಕರ ಶಾಲೆ 
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಮಂಗಳೂರು ದಕ್ಷಿಣ ಬ್ಲಾಕ್‌ ಹೊರತುಪಡಿಸಿ ಉಳಿದ ಎಲ್ಲ ಬ್ಲಾಕ್‌ಗಳಲ್ಲಿ ಪೂರ್ಣಕಾಲಿಕ ಶಿಕ್ಷಕರ ನೇಮಕಾತಿ ಆಗದ ಶಾಲೆಗಳಿವೆ. 2017-18ರಲ್ಲಿ 16 ಶಾಲೆಗಳಲ್ಲಿ ಪೂರ್ಣಕಾಲಿಕ ಶಿಕ್ಷಕರು ಇರಲಿಲ್ಲ. 2018-19ರಲ್ಲಿ ಇದು 18ಕ್ಕೆ ಏರಿದೆ. ವರ್ಷದಿಂದ ವರ್ಷಕ್ಕೆ ಇವುಗಳ ಸಂಖ್ಯೆ ಹೆಚ್ಚುತ್ತಿದೆ.

ಎಲ್ಲೆಲ್ಲಿ ಇಲ್ಲ?
ಸುಳ್ಯ ತಾಲೂಕಿನ ಕಮಿಲ, ಮೈತಡ್ಕ, ಕರಂಗಲ್ಲು, ಪೈಕ, ಹೇಮಲ, ಕಟ್ಟಗೋವಿಂದ ನಗರ, ಮುಗೇರು, ರಂಗತ್ತಮಲೆ ಪ್ರಾಥಮಿಕ ಶಾಲೆಗಳಲ್ಲಿ ಪೂರ್ಣಕಾಲಿಕ ಶಿಕ್ಷಕರಿಲ್ಲ. ಇದರಲ್ಲಿ ರಂಗತ್ತಮಲೆ ಶಾಲೆ ಈ ಬಾರಿ ಮಕ್ಕಳು-ಶಿಕ್ಷಕರು ಇಲ್ಲದೆ ಬೀಗಮುದ್ರೆ ಕಂಡಿದೆ. ಪುತ್ತೂರು ತಾಲೂಕಿನಲ್ಲಿ ಪಲ್ಲತ್ತಾರು, ಕೋಂರ್ಬಡ್ಕ, ಕುಮಾರಮಂಗಲ, ಬಲ್ಯಪಟ್ಟೆ, ಇಡ್ಯಡ್ಕ, ಬೆಳ್ತಂಗಡಿ ತಾಲೂಕಿನ ಬದಿಪಲ್ಕೆ, ಕುಂಟಲಪಲ್ಕೆ ಪಂಡಿಂಜ್ಯವಾಲ್ಯ, ಬಂಟ್ವಾಳದಲ್ಲಿ ಅಮೈ, ಮಂಗಳೂರು ಉತ್ತರ ಬ್ಲಾಕ್‌ನ ಉಳೆಪಾಡಿ ಶಾಲೆಗಳದ್ದೂ ಇದೇ ಸ್ಥಿತಿ.

ಉಡುಪಿ ಜಿಲ್ಲೆ
ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರಿನ 9 ಶಾಲೆಗಳು ಪೂರ್ಣಕಾಲಿಕ ಶಿಕ್ಷಕರಿಲ್ಲದ ಪಟ್ಟಿಯಲ್ಲಿ ಸೇರಿವೆ. ಬ್ರಹ್ಮಾವರ, ಕಾರ್ಕಳ, ಉಡುಪಿಯಲ್ಲಿ ಆ ಸಮಸ್ಯೆ ಇಲ್ಲ ಅನ್ನುತ್ತಿದೆ ಇಲಾಖೆ. 2017-18ರಲ್ಲಿ ಜಿಲ್ಲೆಯಲ್ಲಿ 5 ಶಾಲೆ ಗಳು ಶೂನ್ಯ ಶಿಕ್ಷಕರನ್ನು ಹೊಂದಿದ್ದವು. ಈ ವರ್ಷ ಎರಡು ಬ್ಲಾಕ್‌ಗಳಲ್ಲಿ ಆ ಸಂಖ್ಯೆ 9ಕ್ಕೆ ಏರಿದೆ. 2016-17ರಲ್ಲಿ ಶಿಕ್ಷಕರ ಬೇಡಿಕೆಯೇ ಇಲ್ಲದ ಜಿಲ್ಲೆಗಳ ಪಟ್ಟಿಯಲ್ಲಿ ಉಡುಪಿ ಸೇರಿತ್ತು. 2017-18ರಲ್ಲಿ 67 ಶಿಕ್ಷಕರ ಕೊರತೆ ಕಂಡಿತ್ತು. ಈ ಸಾಲಿನಲ್ಲಿ ಆ ಸಂಖ್ಯೆ 85ಕ್ಕೂ ಮೀರಿದೆ.

ಡೆಪ್ಯುಟೇಶನ್‌ಗೆ ಮೊರೆ!
ಪೂರ್ಣಕಾಲಿಕ ಶಿಕ್ಷಕರು ಇಲ್ಲದೆಡೆ ತಾತ್ಕಾಲಿಕವಾಗಿ ಹತ್ತಿರದ ಶಾಲೆಗಳಿಂದ ಡೆಪ್ಯುಟೇಶನ್‌ನಡಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಎರವಲು ನೀತಿಯಿಂದ ಎರಡು ಶಾಲೆಗಳಲ್ಲೂ ಪಾಠ ಪ್ರವಚನಕ್ಕೆ ತೊಂದರೆ ಆಗುತ್ತಿದೆ. ತಾತ್ಕಾಲಿಕ ಎಂದು ನಿಯೋಜನೆ ಮಾಡಿ ಕೊನೆಗೆ ಅದೇ ಶಾಲೆಯಲ್ಲಿ ನಿವೃತ್ತಿ ಹೊಂದುವ ತನಕವೂ ಮುಂದುವರಿದ ಉದಾಹರಣೆಗಳಿವೆ.

ಅನುಮತಿ ನೀಡಿದ್ದೇವೆ
ದ. ಕನ್ನಡ ಜಿಲ್ಲೆಯಲ್ಲಿ ಅಗತ್ಯವಿರುವ ಸರಕಾರಿ ಪ್ರಾಥಮಿಕ ಶಾಲೆಗಳಿಗೆ ಪೂರ್ಣಕಾಲಿಕ ಶಿಕ್ಷಕರ ನೇಮಕ ವಾಗುವವರೆಗೂ ಎಸ್‌ಡಿಎಂಸಿ ಮೂಲಕ 524 ಮಂದಿ ಅತಿಥಿ ಶಿಕ್ಷಕರನ್ನು ನೇಮಿಸಲು ಅನುಮತಿ ನೀಡಲಾಗಿದೆ. ಇವರಿಗೆ ಶಿಕ್ಷಣ ಇಲಾಖೆ ಮೂಲಕವೇ ವೇತನ ಪಾವತಿಸಲಾಗುತ್ತಿದೆ.
– ವೈ. ಶಿವರಾಮಯ್ಯ, DDPI, ಮಂಗಳೂರು

ತಾತ್ಕಾಲಿಕ ಪ್ರಕ್ರಿಯೆ
ಪೂರ್ಣಕಾಲಿಕ ಶಿಕ್ಷಕರು ಇಲ್ಲದ ಶಾಲೆಗಳಿಗೆ ಡೆಪ್ಯುಟೇಶನ್‌ ನೆಲೆಯಲ್ಲಿ ಶಿಕ್ಷಕರನ್ನು ನಿಯೋಜಿಸಲಾಗುತ್ತದೆ. ನೇಮಕಾತಿ ಆದ ಬಳಿಕ ಅವರು ಮೂಲ ಶಾಲೆಗೆ ಮರಳುತ್ತಾರೆ. ಅದೊಂದು ತಾತ್ಕಾಲಿಕ ಪಕ್ರಿಯೆ. ಕುಂದಾಪುರದಲ್ಲಿ ಒಂದೆರಡು ಶಾಲೆಗಳಲ್ಲಿ ಪೂರ್ಣಕಾಲಿಕ ಶಿಕ್ಷಕರು ಇಲ್ಲದ ಕಾರಣ, ನಿಯೋಜನೆ ಮೇರೆಗೆ ಶಿಕ್ಷಕರನ್ನು  ನೇಮಿಸಲಾಗಿದೆ. ಉಳಿದೆಡೆ ಅಂತಹ ಸಮಸ್ಯೆ ಇಲ್ಲ.
– ಆಶೋಕ್‌ ಕಾಮತ್‌, ಕ್ಷೇತ್ರ ಶಿಕ್ಷಣಾಧಿಕಾರಿ, ಕುಂದಾಪುರ

— ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.