ಅಸ್ವಸ್ಥ ಭಿಕ್ಷುಕನಿಗೆ ಕದಂಬ ಸಂಘಟನೆಯಿಂದ ಚಿಕಿತ್ಸೆ
Team Udayavani, Jul 5, 2018, 3:05 AM IST
ಕಡಬ: ಸುಮಾರು 15 ದಿನಗಳಿಂದ ಅನ್ನ, ನೀರು ಇಲ್ಲದೆ ಕಡಬದ ಕಾಲೇಜು ರಸ್ತೆಯ ಬಳಿ ಅಸ್ವಸ್ಥಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ವೃದ್ಧ ಭಿಕ್ಷುಕನನ್ನು ಕಡಬದ ಕದಂಬ ಸಾಮಾಜಿಕ ಸಂಘಟನೆಯ ಪ್ರಮುಖರು ಪಂ.ನ ನೆರವಿನೊಂದಿಗೆ ಸೋಮವಾರ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಹಲವು ವರ್ಷಗಳಿಂದ ಕಡಬ ಪೇಟೆಯಲ್ಲಿ ಭಿಕ್ಷೆ ಬೇಡುತ್ತ, ಮನೆ ಹಾಗೂ ಹೊಟೇಲ್ ಗಳಲ್ಲಿ ಕೊಟ್ಟ ತಿಂಡಿ ತಿನ್ನುತ್ತ ಬದುಕುತ್ತಿದ್ದ ವೃದ್ಧ ಭಿಕ್ಷುಕ ಅಸ್ವಸ್ಥನಾಗಿ ಜೀವನ್ಮರಣ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಕದಂಬ ಸಂಘಟನೆಯ ಅಧ್ಯಕ್ಷ ಕೆ. ಸೀತಾರಾಮ ಗೌಡ, ಸ್ನೇಹಿತರೊಂದಿಗೆ ಸ್ಥಳಕ್ಕೆ ತೆರಳಿ, 108 ಆ್ಯಂಬುಲೆನ್ಸ್ನಲ್ಲಿ ಸಾಗಿಸಿ, ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದರು. ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಪಿಡಿಒ ಚೆನ್ನಪ್ಪ ಗೌಡ ಕಜೆಮೂಲೆ ಸ್ಥಳದಲ್ಲಿದ್ದು, ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ