ಎಂಡೋ ಸಂತ್ರಸ್ತರಿಗೆ ಬಜೆಟ್‌ನಲ್ಲಿ  ಏನೂ ಇಲ್ಲ


Team Udayavani, Jul 6, 2018, 9:36 AM IST

endo-sulfan-photo-600.jpg

ಬೆಳ್ತಂಗಡಿ: ಎಂಡೋ ಸಂತ್ರಸ್ತರಿಗೆ ಈ ಬಜೆಟ್‌ನಲ್ಲೂ ಸರಕಾರ ಏನೂ ಕೊಟ್ಟಿಲ್ಲ; ಅಧಿವೇಶನದಲ್ಲಾದರೂ ಜನಪ್ರತಿನಿಧಿಗಳು ತಮ್ಮ ಧ್ವನಿಯಾಗುತ್ತಾರೆ ಎಂದು ಇವರು ಕಾಯುತ್ತಿದ್ದಾರೆ. ಕೇರಳ ಸರಕಾರವು ಎಂಡೋ ಸಂತ್ರಸ್ತರಿಗೆ ಪರಿಹಾರ ವಿಚಾರದಲ್ಲಿ ದಿಟ್ಟ ನಿಲುವು ತಳೆದು ಅವರ ಬಹುತೇಕ ಬೇಡಿಕೆ ಈಡೇರಿಸಿದೆ. ರಾಜ್ಯದಲ್ಲೂ ಎಂಡೋ ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ ಧನ, ಪೌಷ್ಟಿಕ ಆಹಾರ ಒದಗಣೆ, ಸುಸಜ್ಜಿತ ಎಂಡೋ ಪುನರ್ವಸತಿ ಕೇಂದ್ರ ಸ್ಥಾಪನೆ, ಸಂತ್ರಸ್ತರ ಚಿಕಿತ್ಸೆಗೆ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಬಳಸಬೇಕೆಂಬುದು ಪ್ರಮುಖ ಬೇಡಿಕೆಗಳು. ಜಿಲ್ಲೆಯ ವಿವಿಧೆಡೆ 3,500ಕ್ಕೂ ಹೆಚ್ಚು ಎಂಡೋ ಸಂತ್ರಸ್ತರಿಗೆ ಮಾಸಾಶನ ಮಾತ್ರ ಸಿಗುತ್ತಿರುವುದು. ಇದರಲ್ಲೂ 700 ಸಂತ್ರಸ್ತರಿಗೆ ಮಾಸಾಶನವೂ ಸಿಗುತ್ತಿಲ್ಲ. ಕಳೆದ ಬಾರಿ ಮಾಸಾಶನ ಮೊತ್ತ ಏರಿಕೆಯಾಗಿದ್ದರೂ ಎಂಡೋ ಪೀಡಿತರಿಗೆ ಸಿಕ್ಕಿಲ್ಲವೆಂಬ ಆರೋಪವಿದೆ.

92 ಗ್ರಾಮ ಎಂಡೋ ಪೀಡಿತ
ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಸುಳ್ಯ ತಾಲೂಕುಗಳಲ್ಲಿ ಎಂಡೋ ಪೀಡಿತರಿರುವ 92 ಗ್ರಾಮಗಳನ್ನು ಗುರುತಿಸಿದ್ದು, 3,612 ಸಂತ್ರಸ್ತರಿದ್ದಾರೆ. 112 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಂಡೋ ಪೀಡಿತರ ಆರೈಕೆಗಾಗಿ ಜಿಲ್ಲೆಗೆ 8 ಪಾಲನ ಕೇಂದ್ರಗಳನ್ನು ನೀಡುವುದಾಗಿ ಸರಕಾರ ಹೇಳಿದ್ದರೂ ಬೆಳ್ತಂಗಡಿಯ ಕೊಕ್ಕಡ ಹಾಗೂ ಪುತ್ತೂರಿನ ಕೊಯಿಲದಲ್ಲಿ ಮಾತ್ರ ಇವೆ. ಉಜಿರೆಯಲ್ಲಿ ಪಾಲನ ಕೇಂದ್ರಕ್ಕೆ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದ್ದರೂ ಜಾರಿಗೊಂಡಿಲ್ಲ.

ಕೇರಳ ಸರಕಾರವು ಅಲ್ಲಿನ ಎಂಡೋ ಸಂತ್ರಸ್ತರಿಗೆ ಸ್ಮಾರ್ಟ್‌ ಕಾರ್ಡ್‌ ನೀಡಿದ್ದು, ಮಂಗಳೂರಿನ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಲಭ್ಯವಿದೆ. ಕರ್ನಾಟಕ ಸರಕಾರವು ಇಲ್ಲಿನ ಎಂಟು ಮೆಡಿಕಲ್‌ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಂಡು ಕಾರ್ಡ್‌ ವಿತರಿಸುವಂತೆ ಸಂತ್ರಸ್ತರು ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾಡಳಿತವು ಹಲವು ಸಭೆಗಳಲ್ಲಿ ಎಂಡೋ ಸಂತ್ರಸ್ತರಿಗೆ ಪೌಷ್ಟಿಕ ಆಹಾರ ನೀಡಲಾಗುತ್ತದೆ ಎಂದು ಹೇಳಿದ್ದರೂ ಅದಿನ್ನೂ ಸಂತ್ರಸ್ತರನ್ನು ಮುಟ್ಟಿಲ್ಲ. 

ಪ್ರಮುಖವಾಗಿ ಶಾಶ್ವತ ಪುನರ್ವ ಸತಿ ಕೇಂದ್ರ, 5 ಲಕ್ಷ ರೂ. ಪರಿಹಾರ ಧನ ಪ್ರಮುಖ ಬೇಡಿಕೆ. ಸರಕಾರದ ಕೆಲವು ಸೌಲಭ್ಯಗಳಿಂದಾಗಿ ಕೆಲವು ಮಂದಿ ಸಂತ್ರಸ್ತರು ಎಸೆಸೆಲ್ಸಿ ಉತ್ತೀರ್ಣರಾಗಿದ್ದಾರೆ, ಒಂದಿಬ್ಬರು ನಡೆಯುವ ಸ್ಥಿತಿ ತಲುಪಿದ್ದಾರೆ. ಇನ್ನಷ್ಟು ಸೌಲಭ್ಯಗಳು ಸಿಕ್ಕಿದರೆ ಅವರ ನರಕಯಾತನೆ ಕಡಿಮೆಯಾಗಬಹುದು. ಕೇರಳದಂತೆ ನಮ್ಮ ಸರಕಾರವೂ ಪರಿಹಾರಕ್ಕೆ ಮುಂದಾಗಬೇಕು.
– ಶ್ರೀಧರ ಗೌಡ ಕೆಂಗುಡೇಲು ಎಂಡೋಪರ ಹೋರಾಟಗಾರ

ಸೌಲಭ್ಯಕ್ಕೆ ಪ್ರಾಮಾಣಿಕ ಪ್ರಯತ್ನ
ಬಜೆಟ್‌ನಲ್ಲಿ ಎಂಡೋ ಸಂತ್ರಸ್ತರಿಗೆ ಏನೂ ಕೊಡದಿರುವ ಕುರಿತು ನೋವಿದೆ. ಇವರಿಗೆ ಸೌಲಭ್ಯ ದೊರಕಿಸಿ ಕೊಡುವುದು ನನ್ನ ಮೊದಲ ಆದ್ಯತೆ, ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
– ಹರೀಶ್‌ ಪೂಂಜಾ, ಶಾಸಕರು, ಬೆಳ್ತಂಗಡಿ

— ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.