ತಳೆಂಜಿ ಗುಡ್ಡದಲ್ಲಿ ಲೋಡುಗಟ್ಟಲೆ ಕೋಳಿ ತ್ಯಾಜ್ಯ!


Team Udayavani, Jul 12, 2018, 11:39 AM IST

12-july-6.jpg

ಈಶ್ವರಮಂಗಲ: ಬಡಗನ್ನೂರು ಗ್ರಾಮದ ತಳೆಂಜಿ ಗುಡ್ಡದ ಸಮೀಪ ಲಾರಿಗಟ್ಟಲೆ ಕೋಳಿತ್ಯಾಜ್ಯ ಎಸೆದಿದ್ದು ಪತ್ತೆಯಾ ಗಿದ್ದು, ಮಳೆ ನೀರಿನೊಂದಿಗೆ ತ್ಯಾಜ್ಯದ ನೀರು ಬೆರೆತು ಪರಿಸರವೆಲ್ಲ ದುರ್ನಾತ ಬೀರುತ್ತಿದೆ. ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಮುಡಿಪಿನಡ್ಕ-ಮೈಂದನಡ್ಕ ಜಿ.ಪಂ. ರಸ್ತೆಯ ತಳೆಂಜಿ ಗುಡ್ಡದ ಸಮೀಪದ ಚಂದು ಕ್ಲೂಡು ರಸ್ತೆಯ ಬದಿ ಒಂದು ಲೋಡ್‌ನ‌ಷ್ಟು ಕೋಳಿ ತ್ಯಾಜ್ಯ ತುಂಬಿದ ಪ್ಲಾಸ್ಟಿಕ್‌ ಗೋಣಿಗಳು ಪತ್ತೆಯಾಗಿವೆ. ಸುರಿ ಯುತ್ತಿರುವ ಮಳೆಗೆ ತ್ಯಾಜ್ಯ ನೀರು ಸುತ್ತಲಿನ ಪರಿಸರವನ್ನು ಮಲಿನಗೊಳಿಸಿದೆ. ಸ್ಥಳೀಯರು ಈ ಕುರಿತು ಬಡಗನ್ನೂರು ಗ್ರಾ.ಪಂ. ಅಧ್ಯಕ್ಷ ಕೇಶವ ಗೌಡ ಕನ್ನಯ ಅವರಿಗೆ ಮಾಹಿತಿ ನೀಡಿದ್ದಾರೆ. ತಳೆಂಜಿ ಗುಡ್ಡದಲ್ಲಿ ಒಂದು ಬದಿಯಲ್ಲಿ ತ್ಯಾಜ್ಯ ಎಸೆದು ಮಲಿನವಾದರೆ ಮತ್ತೊಂದು ಕಡೆ ಸಮಾರಂಭದ ಪ್ಲಾಸ್ಟಿಕ್‌ ಬಾಟಲ್‌ಗ‌ಳು, ಕಾಗದದ ಕಸಗಳ ರಾಶಿ ಇದೆ.

ಸಿಸಿ ಕೆಮರಾ ನೆರವು?
ಹಲವು ವರ್ಷದ ಹಿಂದೆ ಪಡುವನ್ನೂರು ಗ್ರಾಮದ ಕನ್ನಡ್ಕ ಎಂಬಲ್ಲಿ ಕೋಳಿತ್ಯಾಜ್ಯವನ್ನು ಎಸೆಯಲಾಗಿತ್ತು. ಇದರಿಂದ ಪರಿಸರ ಕಲುಷಿತಗೊಂಡಿತ್ತು. ಗ್ರಾಮಸ್ಥರು, ಇಲಾಖೆಗಳ ಸಹಯೋಗದಲ್ಲಿ ಕೋಳಿ ತ್ಯಾಜ್ಯವನ್ನು ತೆರವುಗೊಳಿಸಿ ವಿಲೇವಾರಿ ಮಾಡಲಾಯಿತು. ತ್ಯಾಜ್ಯ ಎಸೆದವರ ಪತ್ತೆಗಾಗಿ ಪೊಲೀಸರ ಜತೆ ಗ್ರಾಮಸ್ಥರೇ ತಂಡವನ್ನು ರಚಿಸಿ ಪತ್ತೆ ಕಾರ್ಯಕ್ಕೆ ಕಾದು ಕುಳಿತಿದ್ದರು. ಆದರೆ ಮುಂದೆ ಇಂತಹ ಘಟನೆ ಮರುಕಳಿಸಲೇ ಇಲ್ಲ. ಹಲವು ಕಾಲದ ಬಳಿಕ ಬಡಗನ್ನೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಕೋಳಿ ತ್ಯಾಜ್ಯ ಕಂಡು ಬಂದಿದ್ದು, ಪೊಲೀಸ್‌ ಇಲಾಖೆ ದಾನಿಗಳು ಕೊಡುಗೆಯಾಗಿ ನೀಡಿದ ಆಯಕಟ್ಟಿನ ಪ್ರದೇಶದಲ್ಲಿ ಆಳವಡಿಸಿದ ಸಿಸಿ ಕೆಮರಾ ನೆರವಾಗಲಿದೆಯೇ? ಎಂಬುದನ್ನು ಕಾದು ನೋಡಬೇಕಾಗಿದೆ.

ಕೋಳಿತ್ಯಾಜ್ಯವನ್ನು ಲಾರಿಗಳಲ್ಲಿ ತಂದು ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗುವ ತಂಡ ಇದೆ ಎನ್ನುವ ಬಲವಾದ ಸಂಶಯ ಸಾರ್ವಜನಿಕರನ್ನು ಕಾಡುತ್ತಿದೆ. ಬಲ್ನಾಡು-ಬೆಟ್ಟಂಪಾಡಿ ಗ್ರಾಮದ ಗಡಿಭಾಗದ ಸರೋಳಿಕಾನದಲ್ಲಿ ಬುಧವಾರ ಲೋಡುಗಟ್ಟಲೆ ಕೋಳಿತ್ಯಾಜ್ಯ ರಾಶಿ ಹಾಕಿದ ಘಟನೆ ನಡೆದ 24 ಗಂಟೆಗಳಲ್ಲೇ ಇಂತಹದೇ ಮತ್ತೊಂದು ಘಟನೆ ನಡೆದಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ಕೇರಳ ಪ್ರದೇಶದಿಂದ ಕೋಳಿ ತ್ಯಾಜ್ಯವನ್ನು ಸಂಗ್ರಹಿಸಿ, ಕರ್ನಾಟಕ ಭಾಗಕ್ಕೆ ತಂದು ಸುರಿಯುವ ಸಾಧ್ಯತೆ ಇದೆ.

ಸೂಕ್ತ ಕ್ರಮ
ಪಂಚಾಯತ್‌ನಿಂದ ಈಶ್ವರಮಂಗಲ ಪೊಲೀಸ್‌ ಹೊರಠಾಣೆಗೆ, ಸಂಪ್ಯ ಠಾಣೆಗೆ ಮೌಖಿಕ ದೂರು ನೀಡಲಾಗಿದೆ. ತ್ಯಾಜ್ಯದ ಮೇಲೆ ಮಣ್ಣನ್ನು ಹಾಕಿ ವಿಲೇವಾರಿ ಮಾಡಲಾಗುವುದು. ಕೋಳಿತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಬೇಕು.
– ಕೇಶವ ಗೌಡ ಕನ್ನಯ,
 ಅಧ್ಯಕ್ಷರು, ಬಡಗನ್ನೂರು ಗ್ರಾ.ಪಂ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.