ಮಹಿಳೆ, ಮಗುವಿಗೆ ಇರಿದು ಚಿನ್ನಾಭರಣ ಲೂಟಿ


Team Udayavani, Jul 12, 2018, 4:34 PM IST

choori.jpg

ಬದಿಯಡ್ಕ: ಕಳ್ಳನೋರ್ವ ಮನೆಗೆ ನುಗ್ಗಿ ಮನೆಯಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಪುಟ್ಟ ಮಗುವಿಗೆ ಇರಿದು ಕೊಲೆಗೈಯುವುದಾಗಿ ಬೆದರಿಸಿ ಚಿನ್ನಾಭರಣಗಳನ್ನು ಲೂಟಿಗೈದ ಘಟನೆ ಇಲ್ಲಿಗೆ ಸಮೀಪದ ನೆಲ್ಲಿಕಟ್ಟೆ-ಪೈಕ ರಸ್ತೆಯ ಚೂರಿಪಳ್ಳದಲ್ಲಿ ಬುಧವಾರ ಮುಂಜಾನೆ ಮೂರು ಗಂಟೆ ಸುಮಾರಿಗೆ ಸಂಭವಿಸಿದೆ.

ಚೂರಿಪಳ್ಳ ಬದ್ರಿಯ ಮಂಜಿಲ್‌ ನಿವಾಸಿ ದಿ| ಬೀರಾನ್‌ ಹಾಜಿ ಅವರ ಮನೆಗೆ ಮುಂಜಾನೆ ಕಳ್ಳ ನುಗ್ಗಿದ್ದು, ಚಿನ್ನಾಭರಣ ಕೊಡಲು ನಿರಾಕರಿಸಿದ ಬೀರಾನ್‌ ಹಾಜಿ ಅವರ ಪತ್ನಿ ಆಮಿನಾ (52) ಮತ್ತು ಕೊಲ್ಲಿಯಲ್ಲಿರುವ ಪುತ್ರ ಆಫಿಸ್‌ ಅವರ ಪತ್ನಿ ಮರಿಯಾಂಬಿ (25) ಅವರಿಗೆ ಇರಿ ದ ದ್ದಲ್ಲದೆ, ಈಕೆಯ ಪುತ್ರ ಮೊಹಮ್ಮದ್‌ ಆದಿ (2)ಯನ್ನೂ ಗಾಯ ಗೊಳಿಸಿದ್ದಾನೆ.  

ಸದ್ದು ಕೇಳಿ ಎಚ್ಚೆತ್ತರು
ಬುಧವಾರ ಮುಂಜಾನೆ ಮನೆಯ ಹಿಂಬದಿಯ ಕಿಟಿಕಿಯ ಸರಳು ಮುರಿದು ಕಳ್ಳ ಒಳಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ತಡಕಾಡಿದಾಗ ಶಬ್ದ ಕೇಳಿ ಆಮಿನಾ ಎಚ್ಚೆತ್ತರು. ಅವರು ಬೆಳಕು ಹಾಯಿಸಿ ನೋಡಿದಾಗ ಕಳ್ಳ ಅವರ ಕಣ್ಣಿಗೆ ಮೆಣಸಿನಹುಡಿ ಎರಚಲು ಯತ್ನಿಸಿ ಅವರ ಕುತ್ತಿಗೆಗೆ ಚಾಕು ಇರಿಸಿ ಕೊಲೆಗೈಯುವುದಾಗಿ ಬೆದರಿಕೆ ಯೊಡ್ಡಿದನು. ಆಮಿನಾರ ಬೊಬ್ಬೆ ಕೇಳಿ ಮರಿಯಾಂಬಿ ಎದ್ದು ಅಲ್ಲಿಗೆ ಬಂದಿದ್ದು, ಅವರಿಗೂ ಇರಿಯಲು ಯತ್ನಿಸಿದ. ಬಳಿಕ ಕಳ್ಳನ ಕೈಯಿಂದ ತಪ್ಪಿಸಿ ಕೊಂಡ ಮಹಿಳೆಯರು ಕೊಠಡಿ ಯೊಳಗೆ ನುಗ್ಗಿ ಬಾಗಿಲಿನ ಚಿಲಕ ಹಾಕಿದರು.

ಮಲಯಾಳ ಮಾತನಾಡಿದ ಕಳ್ಳ
ಮನೆಗೆ ನುಗ್ಗಿದ ಕಳ್ಳ ಮಲಯಾಳ ಭಾಷೆಯಲ್ಲಿ ಮಾತನಾಡಿದ್ದಾನೆ. ಮನೆ ಯಲ್ಲಿದ್ದ ಮಹಿಳೆಯರು ಮಕ್ಕಳನ್ನು ಬಿಟ್ಟುಬಿಡುವಂತೆ ವಿನಂತಿಸಿದಾಗ ತನಗೆ ಕೆಲಸವಿಲ್ಲ, ಆದ್ದರಿಂದ ಚಿನ್ನಾ ಭರಣ ನೀಡಬೇಕು’ ಎಂದು ಹೇಳಿದ್ದ ಎಂದು ಗಾಯಗೊಂಡ ಮಹಿಳೆ ತಿಳಿಸಿ ದ್ದಾರೆ. ಈತ ಮುಖವಾಡ ಧರಿಸಿದ್ದು, ಕೈಗವಸುಗಳನ್ನು ಧರಿಸಿದ್ದ ಎಂದು ಮನೆಯವರು ತಿಳಿಸಿದ್ದಾರೆ.

ಪೊಲೀಸ್‌ ತನಿಖೆ
ಲೂಟಿ ನಡೆದ ಮನೆಗೆ ಕಾಸರ ಗೋಡು ಡಿವೈಎಸ್‌ಪಿ ಎಂ.ವಿ. ಸುಕು ಮಾರನ್‌, ಬದಿಯಡ್ಕ ಎಸ್‌.ಐ. ಮೆಲ್ವಿನ್‌ ಜೋಸ್‌ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಈ ಮನೆಯ ಪೂರ್ತಿ ಮಾಹಿತಿ ತಿಳಿದವನೇ ಲೂಟಿ ನಡೆಸಿದ್ದಾನೆಂದು ಶಂಕಿಸಲಾಗಿದೆ.

ಮಕ್ಕಳನ್ನು ಒತ್ತೆ ಇರಿಸಿಕೊಂಡ
ಕಳ್ಳನ ಕೈಯಿಂದ ಮಹಿಳೆಯರಿಬ್ಬರು ತಪ್ಪಿಸಿಕೊಂಡಾಗ ಆತ ಮತ್ತೂಂದು ಕೊಠಡಿಯತ್ತ ಧಾವಿಸಿದ. ಅಲ್ಲಿ ಮರಿಯಾಂಬಿಯ ಮಕ್ಕಳಾದ ಇಸಾ ಫಾತಿಮ (5), ಮೊಹಮ್ಮದ್‌ ಆದಿ (2) ನಿದ್ರಿಸುತ್ತಿದ್ದರು. ಇದನ್ನು ಗಮನಿಸಿದ ಕಳ್ಳ ಚಿನ್ನಾ ಭರಣ ನೀಡದಿದ್ದರೆ ಮಕ್ಕಳನ್ನು ಕೊಲೆಗೈಯುವುದಾಗಿ ಬೆದರಿಕೆ ಯೊಡ್ಡಿದನು. ಅಲ್ಲದೆ ಮಗು ಮೊಹಮ್ಮದ್‌ ಆದಿಗೆ ಇರಿದಿದ್ದು, ಇದರಿಂದ ಮಗುವಿನ ಕೈಗೆ ಗಾಯವಾಗಿದೆ. ಮಕ್ಕಳ ಆಕ್ರಂದನ ಕೇಳಿದ ಮಹಿಳೆಯರು ಕೋಣೆಯಿಂದ ಹೊರಬಂದು ಕಳ್ಳನಿಗೆ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ನೀಡಿದರು.
ಚಿನ್ನಾಭರಣ ಪಡೆದುಕೊಂಡ ಕಳ್ಳ ಒಳಗೆ ನುಗ್ಗಿದ ಕಿಟಿಕಿಯ ಮೂಲಕವೇ ಹೊರಹಾರಿ ಪರಾರಿಯಾದ. ಮಹಿಳೆಯರು ನೆರೆಮನೆ ಯವರಿಗೆ ವಿಷಯ ತಿಳಿಸಿದ್ದು, ಅವರು ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದರು.

10 ಪವನ್‌ ಚಿನ್ನ ಲೂಟಿ
ಮಹಿಳೆಯರು ಮತ್ತು ಮಗುವನ್ನು ಗಾಯಗೊಳಿಸಿದ ಕಳ್ಳ ಎರಡು ಚಿನ್ನದ ಸರ, ಒಂದು ಬಳೆ, ಎರಡೂವರೆ ಪವನ್‌ನ ಇನ್ನೊಂದು ಆಭರಣ ಕೊಂಡೊಯ್ದಿ ದ್ದಾನೆ. ಹತ್ತು ಪವನ್‌ ಚಿನ್ನಾಭರಣ ಕಳ್ಳ ಲೂಟಿ ಮಾಡಿದ್ದಾಗಿ ದೂರಲಾಗಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.