ಶಿರಾಡಿ ಹೆದ್ದಾರಿಯಲ್ಲಿ ಸಾಗಲು ಸರತಿ ಸಾಲು!


Team Udayavani, Jul 16, 2018, 1:02 PM IST

16-july-10.jpg

ನೆಲ್ಯಾಡಿ : ಆರು ತಿಂಗಳುಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್‌ ರಸ್ತೆ, ರವಿವಾರ ಉದ್ಘಾಟನೆ ಆಗುತ್ತದೆ. ತಕ್ಷಣದಿಂದಲೇ ಹೆದ್ದಾರಿಯಲ್ಲಿ ಸಾಗಲು ಬೆಳಿಗ್ಗೆಯಿಂದಲೇ ಗುಂಡ್ಯ ಆಸುಪಾಸು ವಾಹನಗಳ ಸರತಿ ಸಾಲು ಕಂಡುಬಂದಿತು. ಘನ ವಾಹನಗಳು ಗುಂಡ್ಯ ರಸ್ತೆ ಅಂಚಿನಲ್ಲೇ ಠಿಕಾಣಿ ಹೂಡಿದ್ದವು. ಬೆಂಗಳೂರು ಕಡೆಗೆ ಸಾಗುವ ಯಾತ್ರಾರ್ಥಿಗಳು, ಪ್ರವಾಸಿಗರು ಕಾದು ಕುಳಿತರು. ಆದರೆ ಕಾರ್ಯಕ್ರಮ ಮುಗಿಯದೇ ವಾಹನ ಸಂಚಾರಕ್ಕೆ ಅವಕಾಶ ನೀಡದೇ ಇರುವುದರಿಂದ ಸರತಿ ಸಾಲು ದೊಡ್ಡದಾಗಿ ಬೆಳೆಯುತ್ತಾ ಸಾಗಿತು.

ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭೇಟಿ ನೀಡುವ ಪ್ರವಾಸಿಗರು ಸ್ವಲ್ಪ ಹೊತ್ತು ಕಾದು ಕುಳಿತು, ಬಳಿಕ ಚಾರ್ಮಾಡಿ ರಸ್ತೆಯಿಂದ ಸಾಗಲು ಮುಂದಾದರು. ಗುಂಡ್ಯ ಜಂಕ್ಷನ್‌ನಲ್ಲೇ ಕಾರ್ಯಕ್ರಮವಿದ್ದ ಕಾರಣ ತೆವಳುತ್ತಾ ಸಾಗುವುದು ಅನಿವಾರ್ಯ ಆಯಿತು. ಸುಮಾರು ಮೂರು ಗಂಟೆ ಹೊತ್ತಿಗೆ ಸಭಾ ಕಾರ್ಯಕ್ರಮ ಮುಗಿಯುತ್ತಿದ್ದಂತೆ, ಶಿರಾಡಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಅಷ್ಟರವರೆಗೆ ಗುಂಡ್ಯ- ಸುಬ್ರಹ್ಮಣ್ಯ ಹಾದಿಯಲ್ಲಿ ಸಾಲುಗಟ್ಟಿ ನಿಂತಿದ್ದ ವಾಹನಗಳು ಕರಗತೊಡಗಿದವು. 3.45ರ ಹೊತ್ತಿಗೆ ಸಂಚಾರ ವ್ಯವಸ್ಥೆ ಸುಸ್ಥಿತಿಗೆ ಬಂದಿತು. 

ತಡವಾಗಿ ಉದ್ಘಾಟನೆ
ಅಪರಾಹ್ನ 11 ಗಂಟೆಗೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಹಾಸನ ಕಡೆಯಿಂದ ಜನಪ್ರತಿನಿಧಿಗಳು ತಡವಾಗಿ ಬಂದಿದ್ದರಿಂದ ಅಪರಾಹ್ನ 12.45ಕ್ಕೆ ಕೆಂಪುಹೊಳೆಯಲ್ಲಿ ರಸ್ತೆ ಉದ್ಘಾಟನೆ ನೆರವೇರಿಸಲಾಯಿತು. ಇದು ಕಾಮಗಾರಿ ಆರಂಭವಾದ ಸ್ಥಳ. 12.38 ಕಿ.ಮೀ. ಕಾಮಗಾರಿ ಕೊನೆಗೊಂಡ ಗುಂಡ್ಯದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 1 ಗಂಟೆಗೆ ಆರಂಭಗೊಂಡ ಸಭಾ ಕಾರ್ಯಕ್ರಮ 2.45ರವರೆಗೂ ನಡೆಯಿತು.

ರಸ್ತೆ ಉದ್ಘಾಟನೆ
ಒಟ್ಟು 26 ಕಿ.ಮೀ. ಉದ್ದದ ಶಿರಾಡಿ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ಪೂರ್ಣಗೊಂಡಂತಾಗಿದೆ. ಎರಡನೇ ಹಂತದ ಕಾಮಗಾರಿಯಲ್ಲಿ 74 ಕೋಟಿ ರೂ. ಬಳಸಿಕೊಂಡು 12.38 ಕಿ.ಮೀ. ದೂರ ಕಾಮಗಾರಿ ನಡೆಸಲಾಗಿದೆ. ಈ ಕಾಮಗಾರಿ ಕೆಂಪುಹೊಳೆ ಸೇತುವೆಯಿಂದ ಗುಂಡ್ಯದವರೆಗೆ ನಡೆದಿದೆ. ಇನ್ನು ತಡೆಗೋಡೆ ಹಾಗೂ ಕಾಂಕ್ರೀಟ್‌ ರಸ್ತೆ ಅಂಚಿಗೆ ಮಣ್ಣು ಹಾಕುವ ಕೆಲಸ ಬಾಕಿ ಇರುವುದರಿಂದ, ವಾಹನ ಸವಾರರು ಜಾಗೃತೆಯಿಂದ ಸಾಗುವುದು ಉತ್ತಮ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.