ಶಿರಾಡಿ: ನಿಷೇಧ ಇದ್ದರೂ ಘನ ವಾಹನ ಸಂಚಾರ
Team Udayavani, Jul 19, 2018, 3:42 PM IST
ಪುತ್ತೂರು/ ನೆಲ್ಯಾಡಿ: ನಿಷೇಧ ಆದೇಶದ ಹೊರತಾಗಿಯೂ ಶಿರಾಡಿ ರಸ್ತೆಯಾಗಿ ಸಾಗಲು ಘನ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಬುಧವಾರ ಕಂಡುಬಂದಿದೆ. ಬುಧವಾರ ಸಂಜೆ ವೇಳೆಗೆ ಘನ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಗುಂಡ್ಯ ಬಳಿ 2 ತಾಸು ಟ್ರಾಫಿಕ್ ಜಾಮ್ ಉಂಟಾಯಿತು.
ಮಂಗಳೂರಿನಿಂದ ಹಾಗೂ ಸಕಲೇಶಪುರ ಭಾಗದಿಂದ ಘನ ವಾಹನ ಸಂಚಾರ ಬುಧವಾರವೂ ಮುಂದುವರಿದಿದೆ. ಜುಲೈ 18ರಿಂದ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಮಂಗಳವಾರ ಘನ ವಾಹನಗಳು ಸಂಚರಿಸಿದ್ದ ಹಿನ್ನೆಲೆಯಲ್ಲಿ ಬುಧವಾರವೂ ಸಂಚಾರ ಇದೆ ಎಂದೇ ಭಾವಿಸಿದ್ದರು. ಈ ನಡುವೆ ಘನವಾಹನ ಚಾಲಕರು ಸ್ಥಳದಲ್ಲಿ ನಿಯೋಜಿತರಾಗಿದ್ದ ಪೊಲೀಸರೊಂದಿಗೆ ವಾಹನ ಬಿಡುವಂತೆ ಒತ್ತಾಯಿಸಿ ಆಕ್ರೋಶ ವ್ಯಕ್ತ ಪಡಿಸು ತ್ತಿರುವುದೂ ಕಂಡುಬಂದಿದೆ.
ಆದೇಶ ಹೊರಡಿಸಿದ್ದ ಜಿಲ್ಲಾಡಳಿತ, ಇದರ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲು ವಿಫಲ ಆಗಿರುವುದೇ ಈ ಅವ್ಯವಸ್ಥೆಗೆ ಕಾರಣ ಎಂದು ಗುಂಡ್ಯ ನಿವಾಸಿಗಳು ದೂರಿದ್ದಾರೆ. ಮಂಗಳೂರು ಕಡೆಯಿಂದ ಬರುವ ವಾಹನಗಳನ್ನು ಮಾಣಿಯಲ್ಲಿ ತಡೆದು, ಬೇರೆ ದಾರಿ ತೋರಿಸಬೇಕಿತ್ತು. ಹಾಸನ ಕಡೆಯಿಂದ ಬರುವ ವಾಹನಗಳಿಗೆ ಅಲ್ಲಿಯೇ ತಡೆ ಒಡ್ಡಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ