ಜು. 21ರಂದು ಅರ್ಪಾಜೆ ಕೆರೆ ಗಡಿ ಗುರುತಿಸುವಿಕೆ 


Team Udayavani, Jul 20, 2018, 12:04 PM IST

20-july-7.jpg

ಕಡಬ : ಕೋಡಿಂಬಾಳ ಗ್ರಾಮದ ಅರ್ಪಾಜೆಯಲ್ಲಿ ಸರ್ವೆ ನಂ. 33/3ರಲ್ಲಿ 0.62 ಎಕ್ರೆ ವಿಸ್ತೀರ್ಣದಲ್ಲಿರುವ ಸರಕಾರಿ ಕೆರೆಯನ್ನು ಒತ್ತುವರಿ ಮೂಡಿ ಕೆರೆಯಲ್ಲಿ ನೀರು ಸಂಗ್ರಹವಾಗದಂತೆ ಮಾಡಲಾಗಿದೆ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಗಡಿ ಗುರುತು ಮಾಡಿ ಕೆರೆಯನ್ನು ಸಂರಕ್ಷಿಸಲು ಮುಂದಾಗಿರುವ ಕಂದಾಯ ಇಲಾಖೆ,
ಭೂ ಮಾಪನ ಇಲಾಖೆಯ ಮೂಲಕ ಕೆರೆಯನ್ನು ಅಳತೆ ಮಾಡಲು ಜು. 21ರಂದು ದಿನ ನಿಗದಿ ಮಾಡಿದೆ.

ಕೆರೆಯನ್ನು ಒತ್ತುವರಿ ಮಾಡಲಾಗಿದೆ ಎಂದು ಕಂದಾಯ ಇಲಾಖೆ ಹಾಗೂ ಗ್ರಾ.ಪಂ.ಗೆ ದೂರು ನೀಡಿ ಹಲವು ತಿಂಗಳು ಕಳೆದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಎರಡು ತಿಂಗಳ ಹಿಂದೆ ದೂರಿಗೆ ಸ್ಪಂದಿಸಿದ ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ ಅವರು, ಕೆರೆಯನ್ನು ಅಳೆದು ಗಡಿ ಗುರುತು ಮಾಡಿ ಅತಿಕ್ರಮಣ ನಡೆದಿದ್ದರೆ ಕೂಡಲೇ ತೆರವುಗೊಳಿಸುವಂತೆ ಕಡಬ ಕಂದಾಯ ನಿರೀಕ್ಷಕರಿಗೆ ಮೌಖೀಕ ಆದೇಶ ನೀಡಿದ್ದರು. ಕಂದಾಯ ನಿರೀಕ್ಷಕರು ಕೆರೆಯನ್ನು ಅಳತೆ ಮಾಡಿ ಗಡಿ ಗುರುತು ಮಾಡಿಕೊಡಲು ಪತ್ರ ಬರೆದಿದ್ದರೂ ಭೂ ಮಾಪನ ಇಲಾಖೆ ಕ್ರಮ ಕೈಗೊಂಡಿರಲಿಲ್ಲ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿತ್ತು. ಗುರುವಾರ ಜರಗಿದ ಕಡಬ ಗ್ರಾಮಸಭೆಯಲ್ಲೂ ಈ ವಿಚಾರ ಚರ್ಚೆಗೆ ಬಂದು ಕಂದಾಯ ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಗಮನ ಸೆಳೆದ ಸುದಿನ ವರದಿ
ಅರ್ಪಾಜೆ ಕೆರೆ ಒತ್ತುವರಿಯಾಗಿದೆ ಮತ್ತು ಕೆರೆಯಲ್ಲಿ ನೀರು ನಿಲ್ಲದಂತೆ ತೋಡು ನಿರ್ಮಿಸಲಾಗಿದೆ ಎನ್ನುವ ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಉದಯವಾಣಿ ಸುದಿನ ಸಚಿತ್ರ ವರದಿಗಳನ್ನು ಪ್ರಕಟಿಸಿ, ಇಲಾಖೆಗಳು ಹಾಗೂ ಪಂಚಾಯತ್‌ ಗಮನ ಸೆಳೆದಿತ್ತು. ಅರ್ಪಾಜೆ ಕೆರೆ ಉದೇರಿ, ನಾಲ್ಗುತ್ತು ಹಾಗೂ ಅರ್ಪಾಜೆ ಪರಿಸರದ ಕೃಷಿ ತೋಟಗಳಿಗೆ ಹಾಗೂ ಭತ್ತದ ಗದ್ದೆಗಳಿಗೆ ನೀರುಣಿಸುವ ಮೂಲಕ ಸಾರ್ವಜನಿಕರಿಗೆ ಸಹಕಾರಿಯಾಗಿತ್ತು. ಆದರೆ ಕೆರೆಯ ಪಶ್ಚಿಮ ಭಾಗದಲ್ಲಿ
ಹೆಚ್ಚುವರಿ ನೀರು ಹರಿದುಹೋಗಲು ಇರುವ ಕಾಲುವೆಯನ್ನು 7ರಿಂದ 8 ಅಡಿ ಆಳಗೊಳಿಸಿರುವುದರಿಂದ ನಿರಂತರ ಮಳೆ ಸುರಿದರೂ ಕೆರೆಯಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಹೀಗಾಗಿ, ಕೆರೆ ಬಯಲು ಪ್ರದೇಶದಂತಾಗಿದ್ದು, ಪರಿಸರದಲ್ಲಿ ಅಂತರ್ಜಲ ಮಟ್ಟವೂ ಕುಸಿದಿದೆ. ಕೆರೆಯ ಒತ್ತುವರಿಯನ್ನು ತೆರವುಗೊಳಿಸಿ ಕೆರೆಯ ನೀರು ಹರಿದುಹೋಗುವ ಕಾಲುವೆಯನ್ನು ಮುಚ್ಚಿಸಿ ಕೆರೆಯನ್ನು ಸಂರಕ್ಷಿಸಬೇಕೆಂದು ಸ್ಥಳೀಯರು ಜಿಲ್ಲಾಧಿಕಾರಿಗೆ ನೀಡಿದ ದೂರಿನಲ್ಲಿ ಮನವಿ ಮಾಡಿದ್ದರು.

ಈ ಮಧ್ಯೆ ಅರ್ಪಾಜೆ ಕೆರೆಯನ್ನು ಸ್ವಂತ ಖರ್ಚಿನಲ್ಲಿ ಗ್ರಾಮಸ್ಥರ ನೆರವಿನೊಂದಿಗೆ ಅಭಿವೃದ್ಧಿಪಡಿಸಲು ತಾಂತ್ರಿಕ ಅನುಮತಿ ನೀಡುವಂತೆ ಸ್ಥಳೀಯ ಕೃಷಿಕ ಚಾಕೋ ಫಿಲಿಪ್‌ ಅವರು ಕಡಬ ಗ್ರಾ.ಪಂ. ಹಾಗೂ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಕೆರೆಯ ಗಡಿ ಗುರುತು ಆಗದ ಕಾರಣ ಅವರ ಮನವಿಗೆ ಇಲಾಖೆಗಳಿಂದ ಯಾವುದೇ ಪೂರಕ ಸ್ಪಂದನೆ ಸಿಕ್ಕಿಲ.

ಗಡಿ ಗುರುತಿನ ಬಳಿಕ ಕ್ರಮ
ಕೆರೆಯನ್ನು ಅಭಿವೃದ್ಧಿಪಡಿಸಲು ಅನುಮತಿ ನೀಡುವಂತೆ ಕೃಷಿಕ ಚಾಕೋ ಫಿಲಿಪ್‌ ಅವರು ಪಂ. ಗೆ ಮನವಿ ಸಲ್ಲಿಸಿದ್ದಾರೆ. ಕೆರೆಗಳನ್ನು ಅಭಿವೃದ್ಧಿಪಡಿಸಲು ಪಂಚಾಯತ್‌ ಕೂಡ ಉತ್ಸುಕವಾಗಿದೆ. ಆದರೆ ಕೆರೆಯ ಗಡಿ ಗುರುತು ಆದ ಬಳಿಕವಷ್ಟೇ ನಾವು ಮುಂದುವರಿಯಲು ಸಾಧ್ಯ. ಇದೀಗ ಭೂ ಮಾಪನ ಇಲಾಖೆ ಕೆರೆಯನ್ನು ಅಳತೆ ಮಾಡಲು ದಿನ ನಿಗದಿ ಮಾಡಿದೆ. ಗಡಿ ಗುರುತು ಆದ ಬಳಿಕ ನಾವು ಕೆರೆಯ ಅಭಿವೃದ್ಧಿಯ ಕುರಿತು ಕ್ರಮ ಕೈಗೊಳ್ಳಲಿದ್ದೇವೆ.
– ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಪಿಡಿಒ

ವಿಶೇಷ ವರದಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.