ಪುತ್ತೂರು: ಎಲ್ಲ ದೇವಾಲಯಗಳಲ್ಲಿ ಭಕ್ತ ಸಾಗರ 


Team Udayavani, Jul 29, 2018, 11:18 AM IST

29-july-7.jpg

ಪುತ್ತೂರು: ಚಂದ್ರಗ್ರಹಣದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಶುಕ್ರವಾರ ಸಂಜೆಯಿಂದ ವಿಶೇಷ ಶಾಂತಿ ಹೋಮಗಳು ನಡೆದವು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಶನಿವಾರವೂ ದೇವಾಲಯಗಳಿಗೆ ಆಗಮಿಸಿ, ದೋಷ ನಿವಾರಣೆಗೆ ಪ್ರಾರ್ಥನೆ ಸಲ್ಲಿಸುವ ದೃಶ್ಯಗಳು ಕಂಡುಬಂದವು.

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಶುಕ್ರವಾರ ಸಂಜೆ ಯಿಂದ ಗ್ರಹಣ ಶಾಂತಿ ಹೋಮ ನಡೆಯಿತು. ಗ್ರಹಣದಿಂದ ದೋಷವಿದ್ದ ನಕ್ಷತ್ರ, ರಾಶಿಯವರು ಹೆಚ್ಚಿನ ಸಂಖ್ಯೆಯಲ್ಲಿ ಹೋಮದಲ್ಲಿ ಪಾಲ್ಗೊಂಡರು. ಶನಿವಾರ ಬೆಳಗ್ಗಿನಿಂದ ಸಾವಿರಾರು ಮಂದಿ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವರಿಗೆ ದೀಪದ ಎಣ್ಣೆ, ಇತರ ಸೇವೆಗಳನ್ನು ಸಮರ್ಪಿಸಿದರು. 

ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ, ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನ ಮುಂತಾದ ಕಡೆಗಳಲ್ಲಿ ರಾತ್ರಿ ವಿಶೇಷ ಗ್ರಹಣ ಶಾಂತಿ ಹೋಮಗಳು ನಡೆದವು. ಚಂದ್ರಗ್ರಹಣದ ಹಿನ್ನೆಲೆಯಲ್ಲಿ ತಾಲೂ ಕಿನ ಹಲವು ಮಸೀದಿಗಳಲ್ಲಿ ವಿಶೇಷ ನಮಾಜು ಮತ್ತು ಪ್ರಾರ್ಥನೆ ನಡೆಯಿತು. ಮಧ್ಯರಾತ್ರಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕುಕ್ಕೆ: ಗ್ರಹಣದ ಬಳಿಕ ದೇಗುಲದಲ್ಲಿ ಭಕ್ತರ ದಂಡು
ಸುಬ್ರಹ್ಮಣ್ಯ : ಶುಕ್ರವಾರ ರಾತ್ರಿ ಸಂಭವಿಸಿದ ಖಗ್ರಾಸ ಚಂದ್ರಗ್ರಹಣದ ಪ್ರಯುಕ್ತ ಶನಿವಾರ ಅಪಾರ ಪ್ರಮಾಣದ ಭಕ್ತರು ದೇಗುಲಗಳಿಗೆ ಆಗಮಿಸಿ, ಶಾಂತಿ ಹೋಮ ಸಹಿತ ದೇವರ ದರ್ಶನ, ವಿವಿಧ ಸೇವೆ, ಪೂಜೆಗಳನ್ನು ನೆರವೇರಿಸಿಕೊಂಡರು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಬೆಳಗ್ಗೆ ಶುದ್ಧಿ ಕಾರ್ಯ ನೆರವೇರಿದ ಬಳಿಕ ದೇಗುಲದಲ್ಲಿ ನಿತ್ಯ ನಡೆಯುವ ಸೇವೆಗಳು ನಡೆದವು. ಗ್ರಹಣ ಸಂಭವಿಸಿದ ಶನಿವಾರ ದೇಗುಲದಲ್ಲಿ ಭಕ್ತರ ಸಂಖ್ಯೆ ಕ್ಷೀಣವಾಗಿತ್ತು.

ಶನಿಪೂಜೆಗೆ ಪ್ರಸಿದ್ಧಿ ಪಡೆದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇಗುಲದಲ್ಲಿ ಖಗ್ರಾಸ ಚಂದ್ರಗ್ರಹಣದ ಪ್ರಯುಕ್ತ ಶನಿವಾರ ಬೆಳಗ್ಗೆ 9ರಿಂದ ಗ್ರಹಣ ಶಾಂತಿ ಹೋಮ ನಡೆಯಿತು. ಗ್ರಹಣ ಶಾಂತಿ ಹೋಮದಲ್ಲಿ ಭಕ್ತರು ಭಾಗವಹಿಸಿ ಜಪ-ತಪಗಳಲ್ಲಿ ಪಾಲ್ಗೊಂಡರು. ದೇವರಿಗೆ ಬೆಳ್ತಿಗೆ ಅಕ್ಕಿ, ತೆಂಗಿನ ಕಾಯಿ, ಎಳ್ಳೆಣ್ಣೆ ಸಮರ್ಪಿಸಿ ಸಂಕಷ್ಟ ನಿವಾರಣೆಗೆ ಪ್ರಾರ್ಥಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಮಕೃಷ್ಣ ಕುಧ್ಕುಳಿ ಸಹಿತ ವ್ಯವಸ್ಥಾಪನ ಸಮಿತಿ ಸದಸ್ಯರು, ಸಹಸ್ರಾರು ಭಕ್ತರು ನೆರೆದಿದ್ದರು. ಸುಬ್ರಹ್ಮಣ್ಯ ಸಮೀಪದ ಇತಿಹಾಸ ಪ್ರಸಿದ್ಧ ಶ್ರೀ ಬಸವೇಶ್ವರ ದೇಗುಲದಲ್ಲಿ ಗ್ರಹ ಶಾಂತಿ ಹೋಮ ಸೇವಾ ಸಂಕಲ್ಪ, ಪೂರ್ಣಾಹುತಿ ನಡೆಯಿತು. ಗ್ರಹಣ ಶಾಂತಿ ಹೋಮ ವೇಳೆ ಭಕ್ತರು ಬೆಳ್ತಿಗೆ ಅಕ್ಕಿ, ತೆಂಗಿನ ಕಾಯಿ, ಹುರುಳಿ ಅರ್ಪಿಸಿದರು. ಭಕ್ತರು ಅಗ್ರಹಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ, ಕೊಲ್ಲಮೊಗ್ರು ಕಟ್ಟ ಮಯೂರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ತೆರಳಿ, ದೇವರ ದರ್ಶನ ಪಡೆದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.