ಕೊಕ್ಕಡ ಭೀಕರ ರಸ್ತೆ ಅಪಘಾತ ಇಬ್ಬರು ಸಾವು
Team Udayavani, Aug 6, 2018, 8:30 AM IST
ಉಪ್ಪಿನಂಗಡಿ : ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕೊಕ್ಕಡ ಸಮೀಪ ಕೌಕ್ರಾಡಿ ಗ್ರಾಮದ ಪಾರ್ಪಿಕಲ್ಲು ಬಳಿಯ ತಿರುವಿನಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರು ಧರ್ಮಸ್ಥಳದ ಮುಳಿಕ್ಕಾರು ಮನೆ ವೀರಪ್ಪ ಮಲೆಕುಡಿಯ ಅವರ ಪುತ್ರ ದಿನೇಶ್ (32) ಹಾಗೂ ಧರ್ಮಸ್ಥಳದ ಸಂದು ಲೈಟಿಂಗ್ಸ್ ನ ಮಾಲಕ ಸಂದೇಶ್(30) ಎಂದು ತಿಳಿದುಬಂದಿದೆ.
ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಸ್ಥಳೀಯ ಯುವಕರಾದ ಶರೀಫ್ ಬೋಳದ ಬೈಲು, ಖಲಂದರ್ ಕೊಕ್ಕಡ, ಆರಿಫ್, ನವಾಜ್ , ಶಫ್ವಾನ್, ರಾಜಾ ಟಿಪ್ಪು ಸುಲ್ತಾನ್,ಲತೀಫ್ ಬೋಳದಬೈಲು ಮತ್ತಿತರ ಯುವಕರು ಹರಸಾಹಸ ಪಟ್ಟು ಕಾರಿನಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ