ಎಡಕುಮೇರಿ ಬಳಿ ಹಳಿ ಮೇಲೆ ಮಣ್ಣು


Team Udayavani, Aug 9, 2018, 3:51 PM IST

train.jpg

ಸುಬ್ರಹ್ಮಣ್ಯ/ಸಕಲೇಶಪುರ: ಭಾರೀ ಮಳೆ ಪರಿಣಾಮ ಮಂಗಳೂರು-ಬೆಂಗಳೂರು ರೈಲುಮಾರ್ಗದ ಮೇಲೆ ಎಡ ಕುಮೇರಿ ಸಮೀಪ ಮೂರು ಕಡೆಗಳಲ್ಲಿ ಬಂಡೆ ಸಹಿತ ಮಣ್ಣು ಜರಿದುಬಿದ್ದು, ಮಂಗಳೂರು-ಬೆಂಗಳೂರು ರೈಲು ಸಂಚಾರ ವ್ಯತ್ಯಯವಾಗಿದೆ. ನೆಟ್ಟಣ ನಿಲ್ದಾಣದಿಂದ 65 ಕಿ.ಮೀ. ದೂರದ ಸಿರಿಬಾಗಿಲು ಕೊಡಗರವಳ್ಳಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಅನುಭವಿಸಿದರು. ಎಡಕುಮೇರಿ – ಸಿರಿಬಾಗಿಲು ನಡುವೆ ಬೆಳಗ್ಗೆ 7.30ರ ವೇಳೆಗೆ ಭಾರೀ ಪ್ರಮಾಣದಲ್ಲಿ ಮಣ್ಣು, ಕಲ್ಲುಗಳು ಹಳಿಯ ಮೇಲೆ ಕುಸಿದವು. ಇಲಾಖೆ ಸಿಬಂದಿ ಸ್ಥಳಕ್ಕೆ ತೆರಳಿ ತೆರವು ಮಾಡಿದ ಮೇಲೆ ಗೂಡ್ಸ್‌ ರೈಲು ಈ ಮಾರ್ಗದಲ್ಲಿ ಸಂಚರಿಸಿತು.

ಮತ್ತೆ ಕುಸಿತ
10 ಗಂಟೆಯ ವೇಳೆಗೆ ಮತ್ತೆ ಕೊಡಗರವಳ್ಳಿ ಸಮೀಪ ಹಳಿಗೆ ಕಲ್ಲು, ಮರಗಳ ಸಹಿತ ಗುಡ್ಡ ಜರಿಯಿತು. ರೈಲ್ವೇ ಸಿಬಂದಿ ತೆರವು ನಡೆಸಿದರು. ಅಧಿಕ ಪ್ರಮಾಣದಲ್ಲಿ ಮಣ್ಣು ಹಳಿ ಮೇಲೆ ಶೇಖರಣೆಗೊಂಡ ಕಾರಣ ಮಧ್ಯಾಹ್ನದ ರೈಲು ಸಂಚಾರವನ್ನು ತಡೆಹಿಡಿಯಲಾಯಿತು. ಮಣ್ಣು ತೆರವು ಕಾರ್ಯ ಮುಂದುವರಿದಿದೆ.
ಜೂನ್‌ನಿಂದ ಈ ತನಕ ಈ ಪ್ರದೇಶದಲ್ಲಿ 11ನೇ ಬಾರಿ  ಗುಡ್ಡ ಕುಸಿದಿದ್ದು ರೈಲು ಪ್ರಯಾಣಿಕರಿಗೆ ಭಾರೀ ಸಮಸ್ಯೆಯಾಗಿ ಪರಿಣಮಿಸಿದೆ.

ಬಸ್‌ಗಳಲ್ಲಿ  ಪ್ರಯಾಣ
ಬೆಳಗ್ಗೆ 11 ಗಂಟೆಗೆ ಹಾಸನ ನಿಲ್ದಾಣಕ್ಕೆ ತಲುಪಿದ ಬೆಂಗಳೂರು-ಮಂಗಳೂರು ಕಾರವಾರ ಎಕ್ಸ್‌ಪ್ರಸ್‌ ರೈಲು ಸಂಚಾರವನ್ನು ಹಾಸನದ ನಿಲ್ದಾಣ ದಲ್ಲೇ ಸ್ಥಗಿತಗೊಳಿಸಲಾಯಿತು. ಅಪರಾಹ್ನ 3 ಗಂಟೆ ಯಾದರೂ ಸ್ಥಳಕ್ಕೆ ಸಂಬಂಧ ಪಟ್ಟ ಯಾವ ಅಧಿಕಾರಿಯೂ ಬಂದು ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಇದ್ದದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣ ವಾಯಿತು. ಬಳಿಕ ಪ್ರಯಾಣಿಕರನ್ನು 9 ಹೆಚ್ಚು ಬಸ್‌ಗಳ ಮೂಲಕ ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಉಡುಪಿ ಕಡೆಗಳಿಗೆ ರೈಲ್ವೇ ಇಲಾಖೆ ಕಳುಹಿಸಿಕೊಟ್ಟಿತು.

ರೈಲು ಯಾನ ರದ್ದು 
ಮಂಗಳೂರು: ಭೂ ಕುಸಿತ ಹಿನ್ನೆಲೆಯಲ್ಲಿ ಯಶವಂತಪುರ- ಮಂಗಳೂರು ಜಂಕ್ಷನ್‌- ಕಾರವಾರ (ವಾರದಲ್ಲಿ ಮೂರು ದಿನ ಓಡಾಡುವ ರೈಲು ನಂ: 16515) ರೈಲನ್ನು ಹಾಸನ- ಮಂಗಳೂರು ಜಂಕ್ಷನ್‌- ಕಾರವಾರ ಮಧ್ಯೆ ಭಾಗಶಃ ರದ್ದುಪಡಿಸಲಾಗಿತ್ತು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.