ಸತತ ಕುಸಿತ: ವಾಹನ ಸವಾರರಲ್ಲಿ  ಆತಂಕ


Team Udayavani, Aug 13, 2018, 11:35 AM IST

sampaje-road2.jpg

ಸುಳ್ಯ: ಚಾರ್ಮಾಡಿ ಘಾಟಿ ರಸ್ತೆ ಸುಧಾರಣೆಯಾಯಿತೆಂದು ನಿಟ್ಟುಸಿರು ಬಿಡುವಷ್ಟರಲ್ಲೇ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪಾಜೆ-ಮಡಿಕೇರಿ ತನಕದ ರಸ್ತೆ ಹದಗೆಟ್ಟಿದೆ. ಅಲ್ಲಲ್ಲಿ ಕುಸಿತ ಕಾಣುತ್ತಿದ್ದು, ವಾಹನ ಸವಾರರಲ್ಲಿ ಭೀತಿ ಮೂಡಿಸಿದೆ.

ಕೊಡಗು ಭಾಗದಲ್ಲಿ ಕೆಲವು ದಿನಗಳಿಂದ ವಿಪರೀತ ಮಳೆಯಾಗುತ್ತಿದೆ. ಗುಡ್ಡ, ಕಾಡು ಆವೃತ್ತ ಪ್ರದೇಶದಲ್ಲಿ ನೀರಿನ ಹರಿವು, ಒರತೆ ಹೆಚ್ಚಿರುವುದರ ಜತೆಗೆ ಚರಂಡಿ ವ್ಯವಸ್ಥೆಯ ಕೊರತೆಯೂ ರಸ್ತೆ ಕುಸಿತ ಹಾಗೂ ಹದಗೆಡಲು ಮೂಲ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

25 ಕಿ.ಮೀ. ದೂರ
ದಕ್ಷಿಣ ಕನ್ನಡದ ಗಡಿಭಾಗ ಸಂಪಾಜೆಯಿಂದ ಮಡಿಕೇರಿ ತನಕ ಅರಣ್ಯ, ಗುಡ್ಡಬೆಟ್ಟಗಳ ಮಧ್ಯೆ 25 ಕಿ.ಮೀ. ಉದ್ದದ ಏರುತಗ್ಗಿನ ರಸ್ತೆ ಹಾದು ಹೋಗಿದೆ. ಸದಾ ವಾಹನ ದಟ್ಟಣೆ ಹೊಂದಿದೆ. ಚಾರ್ಮಾಡಿ, ಶಿರಾಡಿ ಘಾಟಿ ರಸ್ತೆಗಳು ಹಾಳಾಗಿ ವಾಹನ ಸಂಚಾರಕ್ಕೆ ನಿಷೇಧ ಎದುರಾದಾಗ ಇದೇ ರಸ್ತೆ ಆಪದಾºಂಧವನಾಗಿತ್ತು.

ಪದೇಪದೆ ಕುಸಿತ
ಅಗಲಗೊಂಡು ಹೊಸ ರಸ್ತೆಯಾಗಿ ಅಭಿವೃದ್ಧಿಗೊಂಡ ವರ್ಷದೊಳಗೆ, 2013ರ ಆಗಸ್ಟ್‌ನಲ್ಲಿ ಕೊಯನಾಡು ಬಳಿ 200 ಮೀ. ಉದ್ದಕ್ಕೆ, 5 ಅಡಿ ಆಳಕ್ಕೆ ಕುಸಿದಿತ್ತು. ಆಗ ಕೆಲವು ತಿಂಗಳು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಅಲ್ಲಿ ಒಂದು ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ ಕಾಂಕ್ರೀಟ್‌ ತಡೆಗೋಡೆ ಸಹಿತ ಹೊಸ ರಸ್ತೆ ನಿರ್ಮಿಸಲಾಗಿತ್ತು. ಒಂದು ತಿಂಗಳ ಹಿಂದೆ ಇದೇ ಜಾಗದಲ್ಲಿ ಮತ್ತೆ ಬಿರುಕು ಉಂಟಾಗಿ ಎಂಟು ಇಂಚಿನಷ್ಟು ರಸ್ತೆ ಕುಸಿದಿದೆ. ಸುರಕ್ಷತೆಯ ದೃಷ್ಟಿಯಿಂದ ಘನ ವಾಹನ ಸಂಚಾರಕ್ಕೆ ಪಕ್ಕದ ಹಳೆ ರಸ್ತೆ ಬಳಸಲಾಗಿದೆ. ಮಡಿಕೇರಿ ಪೇಟೆಯಿಂದ 1 ಕಿ.ಮೀ. ದೂರದ ಹೋಂ ಸ್ಟೇ ಬಳಿ ಗುಡ್ಡ ಕುಸಿದು ಮಂಗಳೂರು -ಬೆಂಗಳೂರು ರಸ್ತೆ ಸಂಪರ್ಕ ಕೆಲವು ತಾಸು ಕಡಿತಗೊಂಡಿತ್ತು. 

ಎರಡು ದಿನಗಳ ಹಿಂದೆ ಮಡಿಕೇರಿಯಿಂದ 5 ಕಿ.ಮೀ. ದೂರ ಇರುವ ಕಾಟಿಕೇರಿ ಕಾಳತ್‌ಮನೆ ಸಮೀಪ ರಸ್ತೆಯ ಒಂದು ಪಾರ್ಶ್ವ 50 ಅಡಿಗಳಷ್ಟು ಕುಸಿದಿದೆ. ಅಲ್ಲೀಗ‌ ಏಕಮುಖ ಸಂಚಾರ ಇದೆ. ಪರಿಸ್ಥಿತಿ ಹೀಗೆ ಮುಂದುವರಿದಲ್ಲಿ ಸಂಪರ್ಕ ಕಡಿತ ಭೀತಿ ಎದುರಾಗಲಿದೆ.

ಕಾಂಕ್ರೀಟ್‌ ಸೂಕ್ತ
ಪ. ಘಟ್ಟ ಪ್ರದೇಶವಾದ್ದರಿಂದ ಭಾರೀ ಮಳೆ, ಒರತೆ ವರ್ಷದ ಹಲವು ತಿಂಗಳು ಇರುತ್ತದೆ. ಜತೆಗೆ ಮಡಿಕೇರಿಯಿಂದ ಸಂಪಾಜೆ ತನಕದ ಶೇ. 85ರಷ್ಟು ಭಾಗದಲ್ಲಿ ಡಾಮರು ಮಣ್ಣಿನ ಗುಣಮಟ್ಟಕ್ಕೆ ಹೊಂದುವುದಿಲ್ಲ. ಹಾಗಾಗಿ ಕಾಂಕ್ರೀಟ್‌ ರಸ್ತೆಯೇ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಇಕ್ಕೆಲಗಳ ಗುಡ್ಡ ಮತ್ತು ತಗ್ಗು ಪ್ರದೇಶದಲ್ಲಿ ಮಣ್ಣು ಕುಸಿಯದಂತೆ ಕಾಂಕ್ರೀಟ್‌ ತಡೆಗೋಡೆಗಳನ್ನು ನಿರ್ಮಿಸಿಲ್ಲ. 
ಮದೆನಾಡು ಬಳಿ ನಿರ್ಮಿಸಿದ ತಡೆಗೋಡೆಯಿಂದ ಅಲ್ಲಿ ಕುಸಿತ ನಿಯಂತ್ರಣಕ್ಕೆ ಬಂದಿದೆ. ಈ ಸುರಕ್ಷಾ ಕ್ರಮ ಎಲ್ಲೆಡೆ ಅಗತ್ಯ. ಇದರೊಂದಿಗೆ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ಅವಶ್ಯ. ಇಕ್ಕೆಲಗಳಲ್ಲಿ ಕಾಂಕ್ರೀಟ್‌ ಚರಡಿ ಅಗತ್ಯವಿದ್ದರೂ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಿಲ್ಲ ಎಂಬುದು ಸ್ಥಳೀಯರ ಆಗ್ರಹ. 

ಹೊಸ ರಸ್ತೆ ಆಗಿ  ಆರೇ ವರ್ಷ!
ಕೆಆರ್‌ಡಿಸಿಎಲ್‌ ವಾಪ್ತಿಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿ 88 ಅನ್ನು 2009ರಲ್ಲಿ ವಿಸ್ತರಿಸಿ ಮೂರು ಹಂತದಲ್ಲಿ ಕಾಮಗಾರಿ ನಡೆಸಲಾಗಿತ್ತು. ಕುಶಾಲನಗರ-ಮಡಿಕೇರಿ-ಸಂಪಾಜೆ ತನಕ ಎರಡನೇ ಹಂತದಲ್ಲಿ ಕಾಮಗಾರಿ ನಡೆಸಿ, 2012ರಲ್ಲಿ ಪೂರ್ಣಗೊಂಡು ಸಂಚಾರಕ್ಕೆ ಮುಕ್ತವಾಯಿತು. 2013ರಲ್ಲಿ ರಾ.ಹೆ. 275 ಆಗಿ ಮೇಲ್ದರ್ಜೆಗೆ ಏರಿದ್ದು, ಈಗ ರಾ. ಹೆ. ಪ್ರಾಧಿಕಾರದ ಸುಪರ್ದಿಯಲ್ಲಿದೆ. ಆರು ವರ್ಷಗಳಲ್ಲೇ ಈ ರಸ್ತೆ ಹಾಳಾಗಿರುವುದು ಸಾರ್ವಜನಿಕ ಟೀಕೆಗೆ ಗುರಿಯಾಗಿದೆ. 

ಮಳೆಗಾಲದ  ಬಳಿಕ  ಕ್ರಮ
ರಸ್ತೆ ಕುಸಿತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಪರಿಣಿತ ಅಧಿಕಾರಿಗಳ ತಂಡ ವೈಜ್ಞಾನಿಕ ಮಾದರಿಯ ಕಾಮಗಾರಿ ಬಗ್ಗೆ ನಿರ್ಧರಿಸಲಿದೆ. ಬಿರುಕು, ಕುಸಿತ ತಡೆಯುವ ಕ್ರಮಗಳ ಬಗ್ಗೆ ಮಳೆಗಾಲದ ಅನಂತರ ಯೋಜನೆ ರೂಪಿಸಿ ಜಾರಿಗೊಳಿಸಲಾಗುವುದು.
 - ಸುಬ್ಬರಾಮ ಹೊಳ್ಳ, ಕಾ.ನಿ. ಎಂಜಿನಿಯರ್‌, ರಾ. ಹೆ. ಇಲಾಖೆ
* ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.