ಶಿರಾಡಿ ಘಾಟಿ: ಇನ್ನೂ 10 ದಿನ ಸಂಚಾರವಿಲ್ಲ!


Team Udayavani, Aug 16, 2018, 2:50 AM IST

shiradi-ghat.jpg

ನೆಲ್ಯಾಡಿ: ಮೂರು ದಿನಗಳಿಂದ ಬಿಡದೆ ಸುರಿಯುತ್ತಿದ್ದ ಮಳೆ ಬುಧವಾರ ಕೊಂಚ ಶಾಂತವಾಗಿದ್ದು, ನದಿಗಳಲ್ಲಿ ಪ್ರವಾಹವೂ ಅಪಾಯ ಮಟ್ಟಕ್ಕಿಂತ ಕೆಳಗಿಳಿದಿದೆ. ಆದರೆ ಶಿರಾಡಿ ಘಾಟಿಯ ಅಲ್ಲಲ್ಲಿ ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಕುಸಿದು, ಮರಗಳೂ ಉರುಳಿ ಬಿದ್ದಿರುವ ಹಿನ್ನೆಲೆಯಲ್ಲಿ ಸಂಚಾರ ಇನ್ನೂ ಸುಮಾರು 10 ದಿನಗಳ ಕಾಲ ಬಾಧಿತವಾಗಿಯೇ ಇರಲಿದೆ. ಹೆದ್ದಾರಿಯಲ್ಲಿ ಸಂಚಾರ ರದ್ದುಪಡಿಸಿ ಹಾಸನ ಉಪವಿಭಾಗಾಧಿಕಾರಿಯೂ ಆದೇಶ ಹೊರಡಿಸಿದ್ದಾರೆ.

ಮಂಗಳವಾರ ರಾತ್ರಿ ರಾ.ಹೆ. 75ರ ದೊಡ್ಡತಪ್ಳು ಬಳಿ ಅನಿಲ ಟ್ಯಾಂಕರ್‌ ಹಳ್ಳಕ್ಕೆ ಉರುಳಿ ಚಾಲಕ ಹಾಗೂ ಕ್ಲೀನರ್‌ ಮೃತಪಟ್ಟಿದ್ದು, ಅಪಘಾತವನ್ನು ನೋಡಲು ಹೋದ ವ್ಯಕ್ತಿಯೊಬ್ಬರೂ ವಾಹನ ಬಡಿದು ಅಸುನೀಗಿದ್ದಾರೆ. ಟ್ಯಾಂಕರ್‌ ನಿಂದ ಅನಿಲವೂ ಸೋರಿಕೆಯಾಗಿತ್ತು. ಮಾರ್ಗದಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು, ಬುಧವಾರವೂ ಎಂಟರಿಂದ ಹತ್ತು ಕಡೆ ಕಡೆ ಭೂಕುಸಿತ ಸಂಭವಿಸಿದೆ. ರಾತ್ರಿಯಿಂದ ಮತ್ತೆ ಮಳೆ ಆರಂಭವಾಗಿದ್ದು, ಹೆದ್ದಾರಿ ಮೇಲೆ ಮಣ್ಣು, ಕಲ್ಲು ಹಾಗೂ ಮರಗಳು ಬೀಳುತ್ತಿವೆ. ಹೀಗಾಗಿ ಘಾಟಿ ಸಂಚಾರ ಅಪಾಯಕಾರಿಯಾಗಿಯೇ ಪರಿಣಮಿಸಿದೆ. ಗುಡ್ಡ ಕುಸಿತ ಸಂದರ್ಭ 2 ಬಸ್‌ಗಳು ತಗ್ಗಿಗೆ ಜಾರಿದ್ದು ತೀವ್ರತೆಯನ್ನು ತೋರಿಸಿತು.

ಎಡಕುಮೇರಿ: ಹಳಿ ಮೇಲೆ ನಿರಂತರ ಗುಡ್ಡ ಕುಸಿತ
ಸುಬ್ರಹ್ಮಣ್ಯ:
ಸುಬ್ರಹ್ಮಣ್ಯ- ಸಕಲೇಶಪುರ ನಡುವಿನ ರೈಲು ಹಳಿ ಮೇಲೆ ಎಡಕುಮೇರಿಯ ಸುರಂಗ 38ರ ಬಳಿ ಸುಮಾರು ನೂರು ಮೀ. ಪ್ರದೇಶದಲ್ಲಿ ಗುಡ್ಡ ಕುಸಿದಿದೆ. ತೆರವುಗೊಳಿಸಿದಂತೆ ಮತ್ತೆ ಮತ್ತೆ ಕುಸಿಯುತ್ತಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಮಾರ್ಗ ಸುಗಮವಾಗಲು ಇನ್ನೂ ನಾಲ್ಕೈದು ದಿನ ಬೇಕಾಗಬಹುದು ಎಂದು ರೈಲ್ವೇ ಮೂಲಗಳು ತಿಳಿಸಿವೆ. ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಸ‌ಕಲೇಶಪುರ-ಹಾಸನ ಕಡೆಗಳ ಪ್ರಯಾಣಿಕರು ಬುಧವಾರ ಧರ್ಮಸ್ಥಳಕ್ಕೆ ತೆರಳಿ ಚಾರ್ಮಾಡಿ ಘಾಟಿ ಮೂಲಕ ಸಾರಿಗೆ ಬಸ್‌ ಗಳಲ್ಲಿ ಪ್ರಯಾಣ ಬೆಳೆಸಿದರು. ಖಾಸಗಿ ವಾಹನಗಳಲ್ಲಿ ಬಂದವರು ಸುಳ್ಯ-ಮಡಿಕೇರಿ ಮಾರ್ಗವಾಗಿ ಸಂಚರಿಸಿದರು.

ಚಾರ್ಮಾಡಿ ಘಾಟಿ: ವಾಹನ ದಟ್ಟಣೆ
ಬೆಳ್ತಂಗಡಿ:
ಮಳೆ ಹಾನಿಯಿಂದ ಉಳಿದೆಲ್ಲ ಘಾಟಿ ರಸ್ತೆಗಳಲ್ಲಿ ಸಂಚಾರ ಮೊಟಕುಗೊಂಡಿರುವುದ ರಿಂದ ಚಾರ್ಮಾಡಿ ಘಾಟಿಯ ಮೇಲೆ ಒತ್ತಡ ಹೆಚ್ಚಿದೆ. ಆಗಾಗ ಟ್ರಾಫಿಕ್‌ ಜಾಮ್‌ ಜತೆಗೆ ರಸ್ತೆ ಹೊಂಡಗಳೂ ನಿಧಾನ ಗತಿಯ ಸಂಚಾರಕ್ಕೆ ಕಾರಣವಾಗಿವೆ. ಬುಧವಾರ ರಾತ್ರಿ ಬಣಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಅಣ್ಣಪ್ಪ ಸ್ವಾಮಿ ಗುಡಿಯ ಬಳಿ ಟಿಪ್ಪರ್‌ ಕೆಟ್ಟು ನಿಂತು ಸ್ವಲ್ಪ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.